Homeಮುಖಪುಟಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

ಓಟಿಟಿ ಗಮ್ಮತ್ತು; ಚಿತ್ರಮಂದಿರಗಳಿಗೆ ಎದುರಾಗಿದೆ ಕುತ್ತು!

- Advertisement -
- Advertisement -

ಬದಲಾವಣೆ ಜಗದ ನಿಮಯ’ ಎಂಬುದು ಸಾಮಾನ್ಯವಾಗಿ ಎಲ್ಲಾ ವಿಚಾರಗಳಲ್ಲಿ ಬಳಕೆಯಾಗುತ್ತಿರುವ ಬದಲಾಗದ ಸಾಲು. ಬದಲಾವಣೆಯ ಹಾದಿಯಲ್ಲಿ ತಂತ್ರಜ್ಞಾನಗಳೂ ಬದಲಾಗುತ್ತಿವೆ. ಅಂದರೆ ಹೊಸ ಹೊಸ ಆವಿಷ್ಕಾರಗಳು ತೆರೆದುಕೊಳ್ಳುತ್ತಿವೆ. ಇದು ಮನರಂಜನಾ ಕ್ಷೇತ್ರಗಳನ್ನೂ ವ್ಯಾಪಿಸುತ್ತಿದೆ.

ಸಮಾಜದಲ್ಲಿರುವ ಎಲ್ಲಾ ವರ್ಗದ ಜನರು ರೇಡಿಯೋ ಬಳಸುವ ಹೊತ್ತಿಗೆ ಟಿವಿಗಳು ಲಗ್ಗೆ ಇಟ್ಟಿದ್ದವು. ಪಟ್ಟಣಗಳಲ್ಲಿ ಸಿನಿಮಾ ಟೆಂಟ್‍ಗಳು ತಲೆ ಎತ್ತಿದ್ದವು. ಟಿವಿ ಎಲ್ಲಾ ಮನೆಗಳನ್ನೂ ತಲುಪುವ ವೇಳೆಗೆ 21ನೇ ಶತಮಾನದ ಮೊದಲ ದಶಕ ಕಳೆದೇ ಹೋಗಿತ್ತು. ಟಿವಿಗಳಲ್ಲಿ ವಾರಕ್ಕೊಮ್ಮೆ ಪ್ರಸಾರವಾಗುವ ಸಿನಿಮಾಗಳಿಗಾಗಿ ಕಾದುಕುಳಿತಿರುತ್ತಿದ್ದ ಕಾಲವದು. ಆಗ ಚಿತ್ರಮಂದಿರಗಳಲ್ಲಿ ಹಣಕೊಟ್ಟ ಸಿನಿಮಾ ನೋಡಲಾಗದವರು ಹೊಸ ಸಿನಿಮಾಗಳಿಗಾಗಿ ವರ್ಷಗಳಟ್ಟಲೆ ಕಾಯಬೇಕಾಗಿತ್ತು. ಇದೆಲ್ಲವೂ ಕೇವಲ ನಾಲ್ಕೈದು ವರ್ಷಗಳ ಹಿಂದಿನ ಕತೆಗಳಷ್ಟೇ.

ಈ ನಡುವೆ ಟೆಕ್ನಾಲಜಿ ಬೆಳೆದಂತೆ ಪೈರಸಿಯ ಹವಾ ಶುರುವಾಯಿತು. ಸಿನಿಮಾಗಳನ್ನು ಕದ್ದು ಮಾರುವುದು, ಕ್ಯಾಮೆರಾ ಪ್ರಿಂಟ್‍ನಲ್ಲಿ ಚಿತ್ರಿಸಿ ಹಂಚುವುದು ಬೆಳೆಯಿತು. ಆದರೆ, ಇವು ಕ್ವಾಲಿಟಿಯನ್ನು ಹೊಂದಿರಲಿಲ್ಲ.

ಹೊಸ ಸಿನಿಮಾಗಳಿಗಾಗಿ ಕಾಯುವ ತಾಳ್ಮೆಯೂ ಇಲ್ಲದ, ಹೆಚ್ಚು ಹಣಕೊಟ್ಟು ಥಿಯೇಟರ್‍ಗಳಿಗೆ ಹೋಗಲಾಗದವರ ಅಥವಾ ಥಿಯೇಟರ್‍ಗಳಿಗೆ ಹೋಗುವಷ್ಟು ಸಮಯವೇ ಇಲ್ಲದವರ ಸಮಸ್ಯೆಗಳನ್ನು ನೀಗಿಸಿದ್ದೇ ಓಟಿಟಿಗಳು. ‘ಓವರ್ ದಿ ಟಾಪ್’ ಎಂಬುದೇ ಓಟಿಟಿ. ಅಂದರೆ ನಾವು ಬಳಸುತ್ತಿರುವ ನೆಟ್‍ಫ್ಲಿಕ್ಸ್, ಅಮೆಜಾನ್ ಪ್ರೈಮ್, ವೂಟ್ ಮೊದಲಾದ ಡಿಜಿಟಲ್ ಮೀಡಿಯಾಗಳನ್ನು ಓಟಿಟಿ ಎಂದು ಕರೆಯಲಾಗುತ್ತದೆ.

ಓಟಿಟಿ ಪ್ಲಾಟ್ ಫಾರ್ಮ್‍ಗಳು ಚಿತ್ರ ಮಂದಿರಗಳಲ್ಲಿ ಬಿಡುಗಡೆಯಾದ ಸಿನಿಮಾಗಳನ್ನು ಒಂದು ತಿಂಗಳ ಕಾಲಮಿತಿಯೊಳಗೇ ಜನರಿಗೆ ತಲುಪಿಸುತ್ತಿವೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಸಿನಿಮಾಗಳಷ್ಟೇ ಅಲ್ಲದೆ, ವೆಬ್ ಸೀರೀಸ್‍ಗಳು, ಡಾಕ್ಯುಮೆಂಟರಿಗಳು, ಕಿರುಚಿತ್ರ, ಧಾರಾವಾಹಿಗಳು ಸೇರಿದಂತೆ ವಿಭಿನ್ನ ಮನರಂಜನೆ ಮತ್ತು ಜ್ಞಾನವನ್ನು ಪೂರೈಸುತ್ತಿವೆ.

ಒಟಿಟಿ ಅಂದರೆ ನೇರವಾಗಿ ಕಂಟೆಂಟ್ (ಮೀಡಿಯಾ)ಗಳನ್ನು ಇಂಟರ್‍ನೆಟ್ ಮೂಲಕ ಕೇಬಲ್, ಟೆಲಿಕಮ್ಯುನಿಕೇಷನ್ ಇತರ ತಡೆಗಳಿಲ್ಲದೆ ನೇರವಾಗಿ ಗ್ರಾಹಕರಿಗೆ ತಲುಪಿಸುತ್ತವೆ. ಇಂತಹ ಟಿಟಿಗಳಲ್ಲಿ ಅಮೇಜಾನ್ ಪ್ರೈಮ್ ಮತ್ತು ನೆಟ್‍ಫ್ಲಿಕ್ಸ್‍ಗಳು ಭಾರತದಲ್ಲಿ ಹೆಚ್ಚು ಪ್ರಸಿದ್ದವಾಗಿವೆ. ವಾರ್ಷಿಕ ಚಂದಾ ನೀಡಿ ಸಬ್‍ಸ್ಕ್ರಿಪ್ಶನ್ ಪಡೆದುಕೊಂಡರಷ್ಟೇ ಸಾಕು. ಒಂದು ವರ್ಷದ ಅವಧಿಗೆ ಎಲ್ಲಾ ರೀತಿಯ ಮನರಂಜನೆಯನ್ನು ಇವು ಒದಗಿಸುತ್ತವೆ. ಅಲ್ಲದೆ, ಒಂದು ಚಂದಾದಾರರಾದರೆ 5 ಟಿವಿ ಅಥವಾ ಮೊಬೈಲ್‍ಗಳಲ್ಲಿ ಸೇವೆಯನ್ನು ಪಡೆಯಬಹುದಾಗಿದೆ. ನಮ್ಮ ಚಿತ್ರಮಂದಿರಗಳಿಗೆ ಬಾರದೇ ಹೋಗುವ ಜಾಗತಿಕ ಸಿನೆಮಾಗಳನ್ನೂ ಈ ಒಟಿಟಿಗಳ ಫ್ಲಾಟ್‍ಫಾಂಗಳ ಮೂಲಕ ಮನೆಯಿಂದಲೇ ವೀಕ್ಷಿಸಬಹುದಾಗಿದೆ.

ಹೆಚ್ಚುತ್ತಿರುವ ಓಟಿಟಿ ಬೇಡಿಕೆ:

4ಜಿ/5ಜಿ ಅಂತರ್ಜಾಲದ ಡಿಜಿಟಲ್ ಸೇವೆಗಳ ಯುಗದಲ್ಲಿ ಓಟಿಟಿ ವೇದಿಕೆಯು ಜಗತ್ತಿನಾದ್ಯಂತ ಡಿಮಾಂಡ್ ಪಡೆದುಕೊಳ್ಳುತ್ತಿದೆ. ಇದಕ್ಕೆ ಭಾರತವೂ ಹೊರತಾಗಿಲ್ಲ. ಅಂತರಾಷ್ಟ್ರೀಯ ವೃತ್ತಿ ಕೌಶಲ್ಯ ಸೇವೆಗಳ ಕಂಪನಿ ಪ್ರೈಸ್ ವಾಟರ್‍ಹೌಸ್ ಕೂಪರ್ಸ್(ಪಿಡಬ್ಲೂಸಿ) ವರದಿಯ ಪ್ರಕಾರ 2018 ಮುಗಿಯುವ ವೇಳೆಗೆ ಭಾರತದಲ್ಲಿ ಓಟಿಟಿ ವಿಡಿಯೋ ಸೇವೆಗಳ ಮಾರುಕಟ್ಟೆ 63.8ಕೋಟಿ ಡಾಲರ್ (ಸುಮಾರು ರೂ 4,466 ಕೋಟಿ)ಗಳಿಗೆ ತಲುಪಿತ್ತು. 2023ರ ಹೊತ್ತಿಗೆ ವಾರ್ಷಿಕವಾಗಿ 21.8% ರಷ್ಟು ವೃದ್ದಿಯಾಗಲಿದ್ದು, 170 ಕೋಟಿ ಡಾಲರ್ (ರೂ.11,900ಕೋಟಿಗಳಿಗೆ) ತಲುಪಲಿದೆ ಎಂದು ಅಂದಾಜು ಮಾಡಲಾಗಿದೆ.

ಓಟಿಟಿಗಳ ಸಬ್‍ಸ್ಕ್ರಿಪ್ಷನ್ ಡಿಮಾಂಡ್ ವಾರ್ಷಿಕವಾಗಿ 23.3%ರಷ್ಟು ವೃದ್ದಿಯಾಗಿ 150 ಕೋಟಿ ಡಾಲರ್‍ಗಳಿಗೆ ತಲುಪಲಿದೆಯೆಂದು ಸಿಡಬ್ಲೂಸಿ ವರದಿಯಲ್ಲಿ ಹೇಳಿದೆ. ಅಂದರೆ 2023ರ ಹೊತ್ತಿಗೆ ಒಟಿಟಿ ಕಂಪನಿಗಳ ಒಟ್ಟು ಆದಾಯದಲ್ಲಿ ವಿಡಿಯೋಗಳ ಸಬ್‍ಸ್ಕ್ರಿಪ್ಷನ್‍ನಿಂದ ಬರುವ ಪಾಲು 84%ರಷ್ಟಕ್ಕೆ ತಲುಪಲಿದೆ. ಈಗ ಜಾಹೀರಾತಿನಿಂದಲೇ ಹೆಚ್ಚು ಆದಾಯ ಬರುತ್ತಿದೆ. ಅಷ್ಟೇ ಅಲ್ಲದೇ ನಾಲ್ಕು ವರ್ಷಗಳಲ್ಲಿ ಭಾರತದ ಒಟಿಟಿ ಮಾರುಕಟ್ಟೆ ಕೊರಿಯಾ ದೇಶವನ್ನು ಮೀರಿಸಲಿದೆ. ಪ್ರಪಂಚದಲ್ಲೇ 8ನೇ ಅತಿದೊಡ್ಡ ಒಟಿಟಿ ಮಾರುಕಟ್ಟೆಯಾಗಿ ಭಾರತ ಬೆಳೆಯಲಿದೆ. 2023 ಕೊನೆಗೆ ಜಗತ್ತಿನ ಓಟಿಟಿ ಮಾರುಕಟ್ಟೆಯ ಪ್ರಮಾಣ 7,280 ಕೋಟಿ ಡಾಲರ್‍ಗಳ ಮಟ್ಟಕ್ಕೆ ಬೆಳೆಯಲಿದೆ ಎಂದು ಅಂದಾಜಿಸಲಾಗಿದೆ.

ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ ಸಿನಿಮಾಗಳು:

ಓಟಿಟಿ ಆರಂಭವಾದ ಸಂದರ್ಭದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ತಿಂಗಳು ಕಳೆದ ನಂತರ ಸಿನಿಮಾಗಳು ಓಟಿಟಿ ಫ್ಲಾಟ್‍ಫಾಂಗೆ ಬರುತ್ತಿದ್ದವು. ಆದರೆ, ಈಗ ಹಾಗಿಲ್ಲ, ಹಲವು ಸಿನಿಮಾಗಳು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗದೆ ನೇರವಾಗಿ ಓಟಿಟಿಯಲ್ಲೇ ಬಿಡುಗಡೆಯಾಗುತ್ತಿವೆ. ಸ್ಯಾಂಡಲ್‍ವುಡ್‍ನ ಪುನೀತ್ ರಾಜ್‍ಕುಮಾರ್ ನಿರ್ಮಾಣದ ‘ಲಾ’ ಮತ್ತು ‘ಫ್ರೆಂಚ್ ಬಿರಿಯಾನಿ’ ಸಿನಿಮಾಗಳನ್ನು ನೇರವಾಗಿ ಓಟಿಟಿಯಲ್ಲೇ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ. ಬಾಲಿವುಡ್‍ನ ‘ಲಕ್ಷ್ಮೀ ಬಾಂಬ್’ ಸಿನಿಮಾ ಕೂಡ ಓಟಿಟಿಯಲ್ಲೇ ನೇರವಾಗಿ ಬಿಡುಗಡೆಯಾಗಲಿದೆ.

ಚಿತ್ರಮಂದಿರಗಳಿಗೆ ಒದಗಿದಯೇ ಆಪತ್ತು:

ಕಳೆದ ಎರಡು ದಶಕಗಳಿಂದ ಸಿನಿಮಾ ನಿರ್ಮಾಣದ ಸಂಖ್ಯೆ ಎಗ್ಗಿಲ್ಲದೆ ಸಾಗುತ್ತಿದೆ. ಒಂದು ವಾರಕ್ಕೆ ಸುಮಾರು 15 ಸಿನಿಮಾಗಳು ಕನ್ನಡ ಇಂಡಸ್ಟ್ರಿಯಲ್ಲೇ ಬಂದು ನಿಲ್ಲುತ್ತಿವೆ. ಇವುಗಳಿಗೆ ಅನ್ಯ ಭಾಷೆ ಸಿನಿಮಾಗಳ ಪೈಪೋಟಿಯೂ ಒಂದುಕಡೆ. ಹೀಗಾಗಿ ಥಿಯೇಟರ್‍ಗಳು ಹಿಟ್ ಆಗುವ ಸಿನಿಮಾಗಳನ್ನು ಆಯ್ಕೆ ಮಾಡಿಕೊಳ್ಳುವುದು, ಸಿನಿಮಾದಿಂದ ಹೆಚ್ಚು ಲಾಭವಾಗುತ್ತಿಲ್ಲವೆಂದರೆ ಬದಲಾಯಿಸುವುದು ಸರಾಗವಾಗಿದೆ. ಆದರೆ, ಇಂತಹ ಸಿಂಗಲ್ ಸ್ಕ್ರೀನ್ ಥಿಯೇಟರ್‍ಗಳಿಗೆ ಭಯ ಹುಟ್ಟಿಸಿದ್ದು, ಮಲ್ಟಿಫ್ಲೆಕ್ಸ್‍ಗಳು. ಮಾಲ್‍ಗಳಲ್ಲಿ ಹಾಗೂ ಸಿನಿಮಾಗಳಿಗಾಗಿ ಹೆಚ್ಚು ಸ್ಕ್ರೀನ್‍ಗಳುಳ್ಳ ಮಲ್ಟಿಫ್ಲೆಕ್ಸ್‍ಗಳು ಆರಂಭವಾದ ಸಂದರ್ಭದಲ್ಲಿ ಥಿಯೇಟರ್ ಮಾಲೀಕರು ಮಲ್ಟಿಫ್ಲೆಕ್ಸ್‍ಗಳಿಗೆ ಅನುಮತಿ ಕೊಡಬಾರದು ಎಂದು ಪ್ರತಿಭಟಿಸಿದ್ದರು. ಆದರೆ, ಇಂದು ಮಲ್ಪಿಫ್ಲೆಕ್ಸ್‍ಗಳ ಜೊತೆಗೆ ಓಟಿಟಿಗಳು ಥಿಯೇಟರ್‍ಗಳಿಗೆ ಎದುರಾಗಿ ಬೆಳೆದಿವೆ. ಇದರಿಂದಾಗಿ ಥಿಯೇಟರ್‍ಗಳಿಗೆ ಹೊಡೆತ ಬೀಳುವ ಸಾಧ್ಯತೆಗಳಿವೆ. ಅಲ್ಲದೆ, ಲಾಕ್‍ಡೌನ್ ಆದ ನಂತರದಲ್ಲಿ ಓಟಿಟಿಗಳ ಪ್ರಭಾವ ಜನರ ಮೇಲೆ ಹೆಚ್ಚಾಗಿದ್ದು, ಲಾಕ್‍ಡೌನ್ ತೆರವುಗೊಳ್ಳುವ ವೇಳೆಗೆ ಕರ್ನಾಟಕದಲ್ಲಿಯೇ 150ಕ್ಕೂ ಹೆಚ್ಚು ಚಿತ್ರಮಂದಿರಗಳು ಮುಚ್ಚುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...