Homeಕರ್ನಾಟಕ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ - ಡಿಕೆ ಶಿವಕುಮಾರ್‌

‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

- Advertisement -
- Advertisement -

ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜ ಸುಟ್ಟಿಲ್ಲ, ಸಚಿವ ನಾಗೇಶ್ ಮನೆಗೆ ನುಗ್ಗಿಲ್ಲ ಎಂದು ಎನ್‌ಎಸ್‌ಯುಐ ಕಾರ್ಯಕರ್ತರ ಬಂಧನ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಶಿಕ್ಷಣ ಸಚಿವ ನಾಗೇಶ್ ಅವರ ಮೂಲಕ ರಾಜ್ಯ ಹಾಗೂ ದೇಶದ ಇತಿಹಾಸ ತಿರುಚಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪಠ್ಯಪುಸ್ತಕದಲ್ಲಿ ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುಗಳಿಗೆ ಅಪಮಾನ ಮಾಡುತ್ತಿರುವುದು ಸರಿಯಲ್ಲ. ದೇಶದ ಸಂಸ್ಕೃತಿ, ಅನೇಕ ಮಹಾನ್ ನಾಯಕರ ವಿಚಾರ ತಿರುಚುವುದು ಸರಿಯಿಲ್ಲ ಎಂದು ಹಲವು ಮಠಾಧೀಶರು, ಸಾಹಿತಿಗಳು ವಿರೋಧಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿ ನಾಯಕರು ನಾಗೇಶ್ ಅವರ ಮನೆ ಮುಂದೆ ಹೋಗಿ ಚಡ್ಡಿ ಸುಟ್ಟಿರಬಹುದು, ಧಿಕ್ಕಾರ ಕೂಗಿರಬಹುದು. ಆದರೆ ಅವರು ಮನೆಯೊಳಗೆ ನುಗ್ಗಿಲ್ಲ. ಕಾರ್ಯಕರ್ತರು ಕೆಲ ಕಾಗದ ಸುಟ್ಟಿರಬಹುದು. ನಾವು ಅನೇಕ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಕಾಗದ ಹರಿದಿದ್ದೇವೆ. ಆದರೆ ನಮ್ಮ ಹುಡುಗರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ಪ್ರತಿಭಟನೆಯಲ್ಲಿ ಸಾಂಕೇತಿಕವಾಗಿ ಇವರೇ ಚಡ್ಡಿ ತೆಗೆದುಕೊಂಡು ಹೋಗಿ ಸುಟ್ಟಿದ್ದಾರೆ. ಅವರು ನಾಗೇಶ್ ಅವರ ಮನೆ ಅಥವಾ ಬೇರೆಯವರ ಮನೆಯ ಚಡ್ಡಿ ತಂದು ಸುಟ್ಟಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಸಾಂವಿಧಾನಿಕ ಹಕ್ಕಿದೆ” ಎಂದು ಅವರು ತಮ್ಮ ಪಕ್ಷದ ವಿದ್ಯಾರ್ಥಿ ಸಂಘದ ಕಾರ್ಯಕರ್ತರನ್ನು ಸಮರ್ಥಿಸಿಕೊಂಡಿದ್ದಾರೆ.

“ಮೊನ್ನೆ ರೈತ ನಾಯಕ ಟಿಕಾಯತ್ ಅವರ ಮೇಲೆ ಬೆಂಗಳೂರಿನಲ್ಲಿ ಕೆಲವರು ಮೋದಿ ಅವರಿಗೆ ಜೈಕಾರ ಕೂಗುತ್ತಾ ಹಲ್ಲೆ ಮಾಡಿದ್ದಾರೆ. ಸರ್ಕಾರ ಇವರ ವಿರುದ್ಧ ಯಾವ ಸೆಕ್ಷನ್ ಹಾಕಿದೆ? ನಮ್ಮ ವಿದ್ಯಾರ್ಥಿ ನಾಯಕರಿಗೆ ಜಾಮೀನು ಸಿಗಬಾರದು ಎಂದು 143, 147, 448, 443, 332 ಸೇರಿದಂತೆ ಹಲವು ಗಂಭೀರ ಸೆಕ್ಷನ್ ಹಾಕಿ ಪ್ರಕರಣ ದಾಖಲಿಸಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಜಿಲ್ಲೆಯಲ್ಲಿ ಇಬ್ಬರು ದಲಿತರು ಸತ್ತಾಗ ಸಚಿವರು ಎಲ್ಲಿ ಹೋಗಿದ್ದರು? ಇಲ್ಲಿನ ಶಾಸಕರು, ಜಿಲ್ಲಾ ಮಂತ್ರಿಗಳು ಹೋಗಿ ದಲಿತರ ರಕ್ಷಣೆ ಮಾಡಿದ್ದಾರಾ? ಎರಡು ದಿನವಾದರೂ ಉಸಿರು ಎತ್ತಿರಲಿಲ್ಲ. ಆದರೆ ಈಗ ವಿದ್ಯಾರ್ಥಿ ನಾಯಕರನ್ನು ಅರ್ಧ ಗಂಟೆಯಲ್ಲೇ ಬಂಧಿಸಿದ್ದಾರೆ” ಎಂದು ಡಿಕೆಶಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

“ಪಠ್ಯಕ್ರಮ ಬದಲಾವಣೆ ವಿಚಾರವಾಗಿ ನಿರ್ಮಲಾನಂದ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು, ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪ್ರೇರಣೆಯಿಂದ ರಾಜ್ಯದಲ್ಲಿ ಧರ್ಮ ದ್ವೇಷ ಹೆಚ್ಚುತ್ತಿರುವುದು, ಶಾಂತಿ ಭಂಗವಾಗುತ್ತಿರುವುದು, ಇತಿಹಾಸ ತಿರುಚಲು ಯತ್ನಿಸುತ್ತಿರುವುದನ್ನು ಖಂಡಿಸಿ ಈ ಹುಡುಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹುಡುಗರಿಗೆ ಜಾಮೀನು ತಿರಸ್ಕಾರಗೊಂಡಿದ್ದು, ಇದು ಅಪಮಾನವಲ್ಲ. ನಾವು ಉನ್ನತ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ರಾಜಕೀಯ ದುರುದ್ದೇಶದಿಂದ ಇಂತಹ ಪ್ರಕರಣ ದಾಖಲಿಸಲಾಗುತ್ತಿದೆ. ಬಿಜೆಪಿ ನಾಯಕರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಸಚಿವರು ಶವಯಾತ್ರೆ ಮಾಡಿದ್ದರೂ, ಬಿಜೆಪಿ ನಾಯಕರು ಜನರನ್ನು ಸೇರಿಸಿ ಜಾತ್ರೆ, ಹುಟ್ಟುಹಬ್ಬ ಆಚರಿಸಿದ್ದರು. ಆದರೆ ಅವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ರಾಜಕಾರಣಿಗಳ ಮಾತು ಕೇಳಿ ಅನಗತ್ಯವಾಗಿ ಸೆಕ್ಷನ್ ಹಾಕುತ್ತಿರುವ ಅಧಿಕಾರಿಗಳು ಒಂದು ದಿನ ಇದಕ್ಕೆಲ್ಲಾ ಉತ್ತರ ನೀಡಿ, ಇದರ ಪರಿಣಾಮ ಅನುಭವಿಸಬೇಕಾಗುತ್ತದೆ. ನಮ್ಮ ಹುಡುಗರು ಮನೆಯೊಳಗೆ ನುಗಿಲ್ಲ. ಅವರು ಆವರಣದಲ್ಲಿ ಚಡ್ಡಿ ಸುಟ್ಟಿದ್ದಾರೆ. ಆರ್ ಎಸ್ ಎಸ್ ನವರು ಈಗ ಪ್ಯಾಂಟ್ ಹಾಕುತ್ತಿದ್ದು ಅದನ್ನು ಅವರ ಸಮವಸ್ತ್ರ ಎಂದು ಹೇಗೆ ಹೇಳಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 8 ವರ್ಷಗಳ ನರೇಂದ್ರ ಮೋದಿ ಸರ್ಕಾರದ ವಿಚ್ಛಿದ್ರಕಾರಿ ಸಾಧನೆಗಳು

“ನಮ್ಮ ಹುಡುಗರ ಮೇಲೆ ರೌಡಿ ಶೀಟರ್ ಗಳು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ನಾವು ದೂರು ಕೊಟ್ಟರೂ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಲ್ಲ. ಚಿಂತನ ಮಂಥನ ಸಭೆಯಲ್ಲಿದ್ದ ಕಾರಣ ನಾವು ಬರಲು ಸಾಧ್ಯವಾಗಿರಲಿಲ್ಲ. ಇಲ್ಲದಿದ್ದರೆ ನಾವು ಬರುತ್ತಿದ್ದೆವು. ಬಿಜೆಪಿ ಸಂಸದರು ಚಡ್ಡಿ ನಮ್ಮ ಬ್ರ್ಯಾಂಡ್ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಮಾತ್ರ ಚಡ್ಡಿ ಹಾಕುತ್ತಾರಾ? ನಾವು ಹಾಕುವುದಿಲ್ಲವೇ? ಪ್ರತಿಭಟನೆ ಪ್ರತೀಕವಾಗಿ ಚಡ್ಡಿ ಸುಟ್ಟಿದ್ದಾರೆ. ಅವರು ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿಲ್ಲ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...