Homeಕರ್ನಾಟಕ‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ - ಡಿಕೆ ಶಿವಕುಮಾರ್‌

‘ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜವನ್ನಲ್ಲ’ – ಡಿಕೆ ಶಿವಕುಮಾರ್‌

- Advertisement -
- Advertisement -

ನಮ್ಮ ಹುಡುಗರು ಚಡ್ಡಿ ಸುಟ್ಟಿದ್ದಾರೆಯೇ ಹೊರತು ರಾಷ್ಟ್ರಧ್ವಜ ಸುಟ್ಟಿಲ್ಲ, ಸಚಿವ ನಾಗೇಶ್ ಮನೆಗೆ ನುಗ್ಗಿಲ್ಲ ಎಂದು ಎನ್‌ಎಸ್‌ಯುಐ ಕಾರ್ಯಕರ್ತರ ಬಂಧನ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ಶಿಕ್ಷಣ ಸಚಿವ ನಾಗೇಶ್ ಅವರ ಮೂಲಕ ರಾಜ್ಯ ಹಾಗೂ ದೇಶದ ಇತಿಹಾಸ ತಿರುಚಲು ಹೊರಟಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪಠ್ಯಪುಸ್ತಕದಲ್ಲಿ ಕುವೆಂಪು, ಅಂಬೇಡ್ಕರ್, ಬಸವಣ್ಣ, ನಾರಾಯಣ ಗುರುಗಳಿಗೆ ಅಪಮಾನ ಮಾಡುತ್ತಿರುವುದು ಸರಿಯಲ್ಲ. ದೇಶದ ಸಂಸ್ಕೃತಿ, ಅನೇಕ ಮಹಾನ್ ನಾಯಕರ ವಿಚಾರ ತಿರುಚುವುದು ಸರಿಯಿಲ್ಲ ಎಂದು ಹಲವು ಮಠಾಧೀಶರು, ಸಾಹಿತಿಗಳು ವಿರೋಧಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ವಿದ್ಯಾರ್ಥಿ ನಾಯಕರು ನಾಗೇಶ್ ಅವರ ಮನೆ ಮುಂದೆ ಹೋಗಿ ಚಡ್ಡಿ ಸುಟ್ಟಿರಬಹುದು, ಧಿಕ್ಕಾರ ಕೂಗಿರಬಹುದು. ಆದರೆ ಅವರು ಮನೆಯೊಳಗೆ ನುಗ್ಗಿಲ್ಲ. ಕಾರ್ಯಕರ್ತರು ಕೆಲ ಕಾಗದ ಸುಟ್ಟಿರಬಹುದು. ನಾವು ಅನೇಕ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಕಾಗದ ಹರಿದಿದ್ದೇವೆ. ಆದರೆ ನಮ್ಮ ಹುಡುಗರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ವೈಯಕ್ತಿಕ ದ್ವೇಷದ ಪ್ರಕರಣಕ್ಕೆ ಕೋಮು ಆಯಾಮ ನೀಡಿ ‘ಮುಸ್ಲಿಂ ದ್ವೇಷ’ ಹರಡಿದ ದಿಗ್ವಿಜಯ & ಪಬ್ಲಿಕ್ ಟಿವಿ

“ಪ್ರತಿಭಟನೆಯಲ್ಲಿ ಸಾಂಕೇತಿಕವಾಗಿ ಇವರೇ ಚಡ್ಡಿ ತೆಗೆದುಕೊಂಡು ಹೋಗಿ ಸುಟ್ಟಿದ್ದಾರೆ. ಅವರು ನಾಗೇಶ್ ಅವರ ಮನೆ ಅಥವಾ ಬೇರೆಯವರ ಮನೆಯ ಚಡ್ಡಿ ತಂದು ಸುಟ್ಟಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ಮಾಡಲು ಸಾಂವಿಧಾನಿಕ ಹಕ್ಕಿದೆ” ಎಂದು ಅವರು ತಮ್ಮ ಪಕ್ಷದ ವಿದ್ಯಾರ್ಥಿ ಸಂಘದ ಕಾರ್ಯಕರ್ತರನ್ನು ಸಮರ್ಥಿಸಿಕೊಂಡಿದ್ದಾರೆ.

“ಮೊನ್ನೆ ರೈತ ನಾಯಕ ಟಿಕಾಯತ್ ಅವರ ಮೇಲೆ ಬೆಂಗಳೂರಿನಲ್ಲಿ ಕೆಲವರು ಮೋದಿ ಅವರಿಗೆ ಜೈಕಾರ ಕೂಗುತ್ತಾ ಹಲ್ಲೆ ಮಾಡಿದ್ದಾರೆ. ಸರ್ಕಾರ ಇವರ ವಿರುದ್ಧ ಯಾವ ಸೆಕ್ಷನ್ ಹಾಕಿದೆ? ನಮ್ಮ ವಿದ್ಯಾರ್ಥಿ ನಾಯಕರಿಗೆ ಜಾಮೀನು ಸಿಗಬಾರದು ಎಂದು 143, 147, 448, 443, 332 ಸೇರಿದಂತೆ ಹಲವು ಗಂಭೀರ ಸೆಕ್ಷನ್ ಹಾಕಿ ಪ್ರಕರಣ ದಾಖಲಿಸಿದ್ದಾರೆ” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಜಿಲ್ಲೆಯಲ್ಲಿ ಇಬ್ಬರು ದಲಿತರು ಸತ್ತಾಗ ಸಚಿವರು ಎಲ್ಲಿ ಹೋಗಿದ್ದರು? ಇಲ್ಲಿನ ಶಾಸಕರು, ಜಿಲ್ಲಾ ಮಂತ್ರಿಗಳು ಹೋಗಿ ದಲಿತರ ರಕ್ಷಣೆ ಮಾಡಿದ್ದಾರಾ? ಎರಡು ದಿನವಾದರೂ ಉಸಿರು ಎತ್ತಿರಲಿಲ್ಲ. ಆದರೆ ಈಗ ವಿದ್ಯಾರ್ಥಿ ನಾಯಕರನ್ನು ಅರ್ಧ ಗಂಟೆಯಲ್ಲೇ ಬಂಧಿಸಿದ್ದಾರೆ” ಎಂದು ಡಿಕೆಶಿ ಕಿಡಿ ಕಾರಿದ್ದಾರೆ.

ಇದನ್ನೂ ಓದಿ: ಮೋದಿಯವರ 8 ವರ್ಷದ ಆಡಳಿತದಲ್ಲಿ ದೇಶದ ಅಭಿವೃದ್ದಿ 20 ವರ್ಷ ಹಿಂದಕ್ಕೆ ಕುಸಿದಿದೆ: ಸಿದ್ದರಾಮಯ್ಯ

“ಪಠ್ಯಕ್ರಮ ಬದಲಾವಣೆ ವಿಚಾರವಾಗಿ ನಿರ್ಮಲಾನಂದ ಸ್ವಾಮೀಜಿ, ಸಿದ್ದಗಂಗಾ ಸ್ವಾಮೀಜಿ ಸೇರಿದಂತೆ ಹಲವು ಸ್ವಾಮೀಜಿಗಳು, ಸಾಹಿತಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪ್ರೇರಣೆಯಿಂದ ರಾಜ್ಯದಲ್ಲಿ ಧರ್ಮ ದ್ವೇಷ ಹೆಚ್ಚುತ್ತಿರುವುದು, ಶಾಂತಿ ಭಂಗವಾಗುತ್ತಿರುವುದು, ಇತಿಹಾಸ ತಿರುಚಲು ಯತ್ನಿಸುತ್ತಿರುವುದನ್ನು ಖಂಡಿಸಿ ಈ ಹುಡುಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಹುಡುಗರಿಗೆ ಜಾಮೀನು ತಿರಸ್ಕಾರಗೊಂಡಿದ್ದು, ಇದು ಅಪಮಾನವಲ್ಲ. ನಾವು ಉನ್ನತ ನ್ಯಾಯಾಲಯದ ಮೊರೆ ಹೋಗುತ್ತೇವೆ” ಎಂದು ಅವರು ಹೇಳಿದ್ದಾರೆ.

“ರಾಜಕೀಯ ದುರುದ್ದೇಶದಿಂದ ಇಂತಹ ಪ್ರಕರಣ ದಾಖಲಿಸಲಾಗುತ್ತಿದೆ. ಬಿಜೆಪಿ ನಾಯಕರು ಹಲವು ಬಾರಿ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿಯಲ್ಲಿದ್ದರೂ ಸಚಿವರು ಶವಯಾತ್ರೆ ಮಾಡಿದ್ದರೂ, ಬಿಜೆಪಿ ನಾಯಕರು ಜನರನ್ನು ಸೇರಿಸಿ ಜಾತ್ರೆ, ಹುಟ್ಟುಹಬ್ಬ ಆಚರಿಸಿದ್ದರು. ಆದರೆ ಅವರ ಮೇಲೆ ಯಾವುದೇ ಪ್ರಕರಣ ದಾಖಲಿಸಿಲ್ಲ. ನಾವು ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದಕ್ಕೆ ನಮ್ಮ ಮೇಲೆ ಪ್ರಕರಣ ದಾಖಲಿಸಿದ್ದಾರೆ” ಎಂದು ಅವರು ಹೇಳಿದ್ದಾರೆ.

“ರಾಜಕಾರಣಿಗಳ ಮಾತು ಕೇಳಿ ಅನಗತ್ಯವಾಗಿ ಸೆಕ್ಷನ್ ಹಾಕುತ್ತಿರುವ ಅಧಿಕಾರಿಗಳು ಒಂದು ದಿನ ಇದಕ್ಕೆಲ್ಲಾ ಉತ್ತರ ನೀಡಿ, ಇದರ ಪರಿಣಾಮ ಅನುಭವಿಸಬೇಕಾಗುತ್ತದೆ. ನಮ್ಮ ಹುಡುಗರು ಮನೆಯೊಳಗೆ ನುಗಿಲ್ಲ. ಅವರು ಆವರಣದಲ್ಲಿ ಚಡ್ಡಿ ಸುಟ್ಟಿದ್ದಾರೆ. ಆರ್ ಎಸ್ ಎಸ್ ನವರು ಈಗ ಪ್ಯಾಂಟ್ ಹಾಕುತ್ತಿದ್ದು ಅದನ್ನು ಅವರ ಸಮವಸ್ತ್ರ ಎಂದು ಹೇಗೆ ಹೇಳಲು ಸಾಧ್ಯ?” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: 8 ವರ್ಷಗಳ ನರೇಂದ್ರ ಮೋದಿ ಸರ್ಕಾರದ ವಿಚ್ಛಿದ್ರಕಾರಿ ಸಾಧನೆಗಳು

“ನಮ್ಮ ಹುಡುಗರ ಮೇಲೆ ರೌಡಿ ಶೀಟರ್ ಗಳು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ನಾವು ದೂರು ಕೊಟ್ಟರೂ ಪೊಲೀಸ್ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿಲ್ಲ. ಚಿಂತನ ಮಂಥನ ಸಭೆಯಲ್ಲಿದ್ದ ಕಾರಣ ನಾವು ಬರಲು ಸಾಧ್ಯವಾಗಿರಲಿಲ್ಲ. ಇಲ್ಲದಿದ್ದರೆ ನಾವು ಬರುತ್ತಿದ್ದೆವು. ಬಿಜೆಪಿ ಸಂಸದರು ಚಡ್ಡಿ ನಮ್ಮ ಬ್ರ್ಯಾಂಡ್ ಎಂದು ಹೇಳಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ಅವರು ಮಾತ್ರ ಚಡ್ಡಿ ಹಾಕುತ್ತಾರಾ? ನಾವು ಹಾಕುವುದಿಲ್ಲವೇ? ಪ್ರತಿಭಟನೆ ಪ್ರತೀಕವಾಗಿ ಚಡ್ಡಿ ಸುಟ್ಟಿದ್ದಾರೆ. ಅವರು ರಾಷ್ಟ್ರಧ್ವಜಕ್ಕೆ ಬೆಂಕಿ ಹಚ್ಚಿಲ್ಲ” ಎಂದು ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...