Homeಮುಖಪುಟಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

- Advertisement -
- Advertisement -

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”.

ಇದು ಪಂಜಾಬ್‌ನ ಬಟಿಂಡಾ ಜಿಲ್ಲೆಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿರುವ ಬೆಹಮನ್ದವಾನಾ ಗ್ರಾಮದ 72 ವರ್ಷದ ರೈತ ಬಲ್ವಂತ್ ಸಿಂಗ್ ಅವರ ಮನದಾಳದ ಮಾತುಗಳು.

ಬಲವಂತ್ ಸಿಂಗ್, ಕಳೆದ 5 ತಿಂಗಳಿನಿಂದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಹಮನ್ ದವಾನಾ ಗ್ರಾಮದಲ್ಲಿ 12 ಎಕರೆ ಜಮೀನು ಹೊಂದಿರುವ ಇವರು, ಗೋಧಿ, ಭತ್ತ, ಹತ್ತಿ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ. ಸದ್ಯ ಹೊಲದಲ್ಲಿ ಗೋಧಿ ಬಿತ್ತನೆ ಮಾಡಿ, ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

Photo Courtesy: DNA India

ಮೊದಲಿಗೆ ತಮ್ಮ ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ಇವರು ನಂತರ ಬಟಿಂಡಾ, ಪಟಿಯಾಲ, ಪಂಜಾಬ್ಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಟೋಲ್‌ಪ್ಲಾಜಾ ಬಂದ್, ರಿಲಯನ್ಸ್ ಪೆಟ್ರೋಲ್ ಬಂಕ್, ಮಾಲ್‌‌ಗಳನ್ನು ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ನಂತರ ನವೆಂಬರ್ 26 ರಂದು ದೆಹಲಿಗೆ ಬಂದು ಟಿಕ್ರಿ ಗಡಿ ಭಾಗದಲ್ಲಿ ತಮ್ಮ ಟ್ರ್ಯಾಲಿ, ಮತ್ತು ಲಂಗರ್‌‌ನೊಂದಿಗೆ ಹೋರಾಟದಲ್ಲಿ ಜೊತೆಯಾಗಿದ್ದಾರೆ.

ಒಬ್ಬ ಮಗ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಇವರ ಮನೆಯ ಮೂಲ ಉದ್ಯೋಗ ಕೃಷಿ. ಮಗ ಕೂಡ ಕೃಷಿಯನ್ನೇ ಮಾಡುತ್ತಿದ್ದು, ಸದ್ಯ ಊರು ಮತ್ತು ಪ್ರತಿಭಟನಾ ಸ್ಥಳಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ.

“ಸರ್ಕಾರ ಈ ಕಾನೂನುಗಳನ್ನು ಜಾರಿ ಮಾಡಿದ ನಂತರ ಊರಿನಲ್ಲಿ ಹಲವು ಬದಲಾವಣೆಗಳು ಆರಂಭವಾದವು. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗಿರುವುದರಿಂದ ಕಾನೂನುಗಳು ನಮ್ಮ ಮೇಲೆ ಹಿಡಿತ ಸಾಧಿಸುತ್ತವೆ ಎಂಬ ವಿಚಾರ ತಿಳಿಯಿತು. ಇದರ ಜೊತೆಗೆ ರೈತ ಸಂಘಟನೆಗಳು, ವಿದ್ಯಾವಂತ ಯುವಜನರು ಗ್ರಾಮಕ್ಕೆ ಬರತೊಡಿದರು. ಊರಿನಲ್ಲಿ ಸಭೆಗಳು ನಡೆದವು. ಸಭೆಗಳಲ್ಲಿ ಕಾನೂನುಗಳು ಹೇಗೆ ರೈತರನ್ನು ಕಡೆಗಣಿಸಿ, ಕಾರ್ಫೊರೇಟ್ ಕಂಪನಿಗಳಿಗೆ ವರದಾನವಾಗಲಿದೆ. ಇದರ ಜೊತೆಗೆ ಎಂಎಸ್ಪಿ ಹೇಗೆ ರೈತರಿಂದ ದೂರವಾಗಿಲಿದೆ ಎಂಬುದನ್ನು ತಿಳಿಸಿದರು. ಹಾಗಾಗಿ ಕಾನೂನುಗಳ ಅನಾನುಕೂಲಗಳ ಬಗ್ಗೆ ನಮಗೆ ತಿಳಿಯಿತು” ಎಂದು ಬಲ್ವಂತ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

“ಇಡೀ ಕುಟುಂಬ ಈ ಹೋರಾಟದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಮುಖಂಡ ಸರ್ಜಿತ್ ಕುಮಾರ್ ಜಾನೆ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದವರಲ್ಲಿ ನನ್ನ 14 ವರ್ಷದ ಮೊಮ್ಮಗಳು ಕೂಡ ಇದ್ದಳು. ನನಗೆ ನನ್ನ ಮೊಮ್ಮಕ್ಕಳು ಓದುವುದು, ಬರೆಯುವುದನ್ನು ಕಲಿಸಿದ್ದಾರೆ. ಟಿಕ್ರಿ ಪ್ರತಿಭಟನಾ ಸ್ಥಳದಲ್ಲಿ ಹರಿಯಾಣದವರ ಜೊತೆ ಇರುವುದರಿಂದ ಹರಿಯಾಣಿ ಭಾಷೆ ಕೂಡ ಕಲಿಯುತ್ತಿದ್ದೇನೆ

ನಾನು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ಉಗ್ರಾನ್ ಬಳಗದ ಸದಸ್ಯನಾಗಿದ್ದೇನೆ. ಜನವರಿ 26 ರ ಘಟನೆ ನಂತರ ಗೋಧಿ ಮೀಡಿಯಾ ನಮ್ಮ ಬಗ್ಗೆ ಹಲವು ರೀತಿಯಲ್ಲಿ ಅಪಪ್ರಚಾರ ಮಾಡಿದೆ. ಹಾಗೆಂದು ನಾವು ಕುಂದಿಲ್ಲ. ನಮ್ಮ ಜನ ಈ ಮಾಧ್ಯಮಗಳನ್ನು ಬಹಿಷ್ಕರಿಸಿದ್ದಾರೆ. ಆದರೆ, ಪ್ರತಿಭಟನಾ ಸ್ಥಳದಲ್ಲಿ ನಾವೇ ಭದ್ರತೆ ಹೆಚ್ಚಿಸಿಕೊಂಡಿದ್ದೇವೆ. ಟಿಕ್ರಿಯಲ್ಲಿ 25 ಕಿಲೋಮೀಟರ್ಗೂ ಹೆಚ್ಚಿನ ವಿಸ್ತಿರ್ಣ ಇದೆ. ಪ್ರತಿಭಟನಾ ನಿರತರ ರಕ್ಷಣೆ ಕೂಡ ಮುಖ್ಯವಾದರಿಂದ ನಾವು ಸ್ವಯಂಸೇವಕರನ್ನು ಹೆಚ್ಚು ಮಾಡಿಕೊಂಡು ಪಹರೇ ನಡೆಸುತ್ತಿದ್ದೇವೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

“ಶಾಂತಿಯುತವಾಗಿ ಹೋರಾಡುತ್ತಿದ್ದವರನ್ನು ಬೇರೆ ರೀತಿಯಲ್ಲಿ ಮಾಧ್ಯಮ ತೋರಿಸಿದೆ. ಈಗ ನಾವು ಗೆಲ್ಲುವವರೆಗೂ ಹೋರಾಟ ನಡೆಸುತ್ತೇವೆ. ಕುಟುಂಬದ ಮೂಲ ಆದಾಯ ಕೃಷಿಯಾಗಿದೆ. ಅದೇ ನಮ್ಮ ಕೈತಪ್ಪಿದರೇ ಜೀವನ ನಡೆಸುವುದಾದರೂ ಹೇಗೆ..? ಹಾಗಾಗಿ ನಾವು ಗೆದ್ದು ಹೋಗುತ್ತೇವೆ ಅಥವಾ ಭಾರತದ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹವನ್ನು ಸುತ್ತಿಕೊಂಡು ಹೋಗುತ್ತೇವೆ” ಎಂದು ಅವರು ಹೇಳುತ್ತಾರೆ.

ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಸಾವು
ಸಾಂದರ್ಭಿಕ ಚಿತ್ರ PC: PTI

“ಒಟ್ಟಿನಲ್ಲಿ ನಾವು ಇಲ್ಲಿಂದ ಕದಲುವ ಮಾತೇ ಇಲ್ಲ. ಈಗಂತೂ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹರಿಯಾಣದಿಂದ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪ್ರತಿಭಟನಾ ಸ್ಥಳ ಮತ್ತಷ್ಟು ವಿಸ್ತರಿಸಲಿದೆ” ಎಂದು ಬಲ್ವಂತ್ ಸಿಂಗ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಹರಿಯಾಣ ಮತ್ತು ಪಂಜಾಬ್ ರೈತರನ್ನು ಬೇರೆ ಮಾಡಲು ಸರ್ಕಾರ ಪ್ರಯತ್ನ ನಡಸಿತು. ಆದರೆ, ಅದು ಸಫಲವಾಗಿಲ್ಲ. ನಾವೆಲ್ಲಾ ಇಲ್ಲಿ ಸಹೋದರರಂತೆ ಇದ್ದೇವೆ. ಇಲ್ಲಿಗೆ ಹರಿಯಾಣದಿಂದ ಹಾಲು ಬರುತ್ತಿದೆ. ಸಂಘಟನೆಗಳು ಬೇರೆ ಬೇರೆ, ರಾಜ್ಯ, ಊರುಗಳು ಬೇರೆ ಬೇರೆ ಆದರೆ ಒಂದು ಒಳ್ಳೆಯ ಕಾರಣಕ್ಕೆ ನಾವೇಲ್ಲಾ ಒಂದಾಗಿದ್ದೇವೆ. ಹಾಗಾಗಿ ಈ ಹೋರಾಟದಲ್ಲಿ ಗೆಲುವು ನಮ್ಮದು ಎನ್ನುತ್ತಾರೆ ಬಂಟಿಡಾ ಜಿಲ್ಲೆಯ ಬಲ್ವಂತ್ ಸಿಂಗ್.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....