Homeಮುಖಪುಟಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

- Advertisement -
- Advertisement -

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”.

ಇದು ಪಂಜಾಬ್‌ನ ಬಟಿಂಡಾ ಜಿಲ್ಲೆಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿರುವ ಬೆಹಮನ್ದವಾನಾ ಗ್ರಾಮದ 72 ವರ್ಷದ ರೈತ ಬಲ್ವಂತ್ ಸಿಂಗ್ ಅವರ ಮನದಾಳದ ಮಾತುಗಳು.

ಬಲವಂತ್ ಸಿಂಗ್, ಕಳೆದ 5 ತಿಂಗಳಿನಿಂದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಹಮನ್ ದವಾನಾ ಗ್ರಾಮದಲ್ಲಿ 12 ಎಕರೆ ಜಮೀನು ಹೊಂದಿರುವ ಇವರು, ಗೋಧಿ, ಭತ್ತ, ಹತ್ತಿ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ. ಸದ್ಯ ಹೊಲದಲ್ಲಿ ಗೋಧಿ ಬಿತ್ತನೆ ಮಾಡಿ, ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

Photo Courtesy: DNA India

ಮೊದಲಿಗೆ ತಮ್ಮ ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ಇವರು ನಂತರ ಬಟಿಂಡಾ, ಪಟಿಯಾಲ, ಪಂಜಾಬ್ಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಟೋಲ್‌ಪ್ಲಾಜಾ ಬಂದ್, ರಿಲಯನ್ಸ್ ಪೆಟ್ರೋಲ್ ಬಂಕ್, ಮಾಲ್‌‌ಗಳನ್ನು ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ನಂತರ ನವೆಂಬರ್ 26 ರಂದು ದೆಹಲಿಗೆ ಬಂದು ಟಿಕ್ರಿ ಗಡಿ ಭಾಗದಲ್ಲಿ ತಮ್ಮ ಟ್ರ್ಯಾಲಿ, ಮತ್ತು ಲಂಗರ್‌‌ನೊಂದಿಗೆ ಹೋರಾಟದಲ್ಲಿ ಜೊತೆಯಾಗಿದ್ದಾರೆ.

ಒಬ್ಬ ಮಗ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಇವರ ಮನೆಯ ಮೂಲ ಉದ್ಯೋಗ ಕೃಷಿ. ಮಗ ಕೂಡ ಕೃಷಿಯನ್ನೇ ಮಾಡುತ್ತಿದ್ದು, ಸದ್ಯ ಊರು ಮತ್ತು ಪ್ರತಿಭಟನಾ ಸ್ಥಳಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ.

“ಸರ್ಕಾರ ಈ ಕಾನೂನುಗಳನ್ನು ಜಾರಿ ಮಾಡಿದ ನಂತರ ಊರಿನಲ್ಲಿ ಹಲವು ಬದಲಾವಣೆಗಳು ಆರಂಭವಾದವು. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗಿರುವುದರಿಂದ ಕಾನೂನುಗಳು ನಮ್ಮ ಮೇಲೆ ಹಿಡಿತ ಸಾಧಿಸುತ್ತವೆ ಎಂಬ ವಿಚಾರ ತಿಳಿಯಿತು. ಇದರ ಜೊತೆಗೆ ರೈತ ಸಂಘಟನೆಗಳು, ವಿದ್ಯಾವಂತ ಯುವಜನರು ಗ್ರಾಮಕ್ಕೆ ಬರತೊಡಿದರು. ಊರಿನಲ್ಲಿ ಸಭೆಗಳು ನಡೆದವು. ಸಭೆಗಳಲ್ಲಿ ಕಾನೂನುಗಳು ಹೇಗೆ ರೈತರನ್ನು ಕಡೆಗಣಿಸಿ, ಕಾರ್ಫೊರೇಟ್ ಕಂಪನಿಗಳಿಗೆ ವರದಾನವಾಗಲಿದೆ. ಇದರ ಜೊತೆಗೆ ಎಂಎಸ್ಪಿ ಹೇಗೆ ರೈತರಿಂದ ದೂರವಾಗಿಲಿದೆ ಎಂಬುದನ್ನು ತಿಳಿಸಿದರು. ಹಾಗಾಗಿ ಕಾನೂನುಗಳ ಅನಾನುಕೂಲಗಳ ಬಗ್ಗೆ ನಮಗೆ ತಿಳಿಯಿತು” ಎಂದು ಬಲ್ವಂತ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

“ಇಡೀ ಕುಟುಂಬ ಈ ಹೋರಾಟದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಮುಖಂಡ ಸರ್ಜಿತ್ ಕುಮಾರ್ ಜಾನೆ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದವರಲ್ಲಿ ನನ್ನ 14 ವರ್ಷದ ಮೊಮ್ಮಗಳು ಕೂಡ ಇದ್ದಳು. ನನಗೆ ನನ್ನ ಮೊಮ್ಮಕ್ಕಳು ಓದುವುದು, ಬರೆಯುವುದನ್ನು ಕಲಿಸಿದ್ದಾರೆ. ಟಿಕ್ರಿ ಪ್ರತಿಭಟನಾ ಸ್ಥಳದಲ್ಲಿ ಹರಿಯಾಣದವರ ಜೊತೆ ಇರುವುದರಿಂದ ಹರಿಯಾಣಿ ಭಾಷೆ ಕೂಡ ಕಲಿಯುತ್ತಿದ್ದೇನೆ

ನಾನು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ಉಗ್ರಾನ್ ಬಳಗದ ಸದಸ್ಯನಾಗಿದ್ದೇನೆ. ಜನವರಿ 26 ರ ಘಟನೆ ನಂತರ ಗೋಧಿ ಮೀಡಿಯಾ ನಮ್ಮ ಬಗ್ಗೆ ಹಲವು ರೀತಿಯಲ್ಲಿ ಅಪಪ್ರಚಾರ ಮಾಡಿದೆ. ಹಾಗೆಂದು ನಾವು ಕುಂದಿಲ್ಲ. ನಮ್ಮ ಜನ ಈ ಮಾಧ್ಯಮಗಳನ್ನು ಬಹಿಷ್ಕರಿಸಿದ್ದಾರೆ. ಆದರೆ, ಪ್ರತಿಭಟನಾ ಸ್ಥಳದಲ್ಲಿ ನಾವೇ ಭದ್ರತೆ ಹೆಚ್ಚಿಸಿಕೊಂಡಿದ್ದೇವೆ. ಟಿಕ್ರಿಯಲ್ಲಿ 25 ಕಿಲೋಮೀಟರ್ಗೂ ಹೆಚ್ಚಿನ ವಿಸ್ತಿರ್ಣ ಇದೆ. ಪ್ರತಿಭಟನಾ ನಿರತರ ರಕ್ಷಣೆ ಕೂಡ ಮುಖ್ಯವಾದರಿಂದ ನಾವು ಸ್ವಯಂಸೇವಕರನ್ನು ಹೆಚ್ಚು ಮಾಡಿಕೊಂಡು ಪಹರೇ ನಡೆಸುತ್ತಿದ್ದೇವೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

“ಶಾಂತಿಯುತವಾಗಿ ಹೋರಾಡುತ್ತಿದ್ದವರನ್ನು ಬೇರೆ ರೀತಿಯಲ್ಲಿ ಮಾಧ್ಯಮ ತೋರಿಸಿದೆ. ಈಗ ನಾವು ಗೆಲ್ಲುವವರೆಗೂ ಹೋರಾಟ ನಡೆಸುತ್ತೇವೆ. ಕುಟುಂಬದ ಮೂಲ ಆದಾಯ ಕೃಷಿಯಾಗಿದೆ. ಅದೇ ನಮ್ಮ ಕೈತಪ್ಪಿದರೇ ಜೀವನ ನಡೆಸುವುದಾದರೂ ಹೇಗೆ..? ಹಾಗಾಗಿ ನಾವು ಗೆದ್ದು ಹೋಗುತ್ತೇವೆ ಅಥವಾ ಭಾರತದ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹವನ್ನು ಸುತ್ತಿಕೊಂಡು ಹೋಗುತ್ತೇವೆ” ಎಂದು ಅವರು ಹೇಳುತ್ತಾರೆ.

ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಸಾವು
ಸಾಂದರ್ಭಿಕ ಚಿತ್ರ PC: PTI

“ಒಟ್ಟಿನಲ್ಲಿ ನಾವು ಇಲ್ಲಿಂದ ಕದಲುವ ಮಾತೇ ಇಲ್ಲ. ಈಗಂತೂ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹರಿಯಾಣದಿಂದ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪ್ರತಿಭಟನಾ ಸ್ಥಳ ಮತ್ತಷ್ಟು ವಿಸ್ತರಿಸಲಿದೆ” ಎಂದು ಬಲ್ವಂತ್ ಸಿಂಗ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಹರಿಯಾಣ ಮತ್ತು ಪಂಜಾಬ್ ರೈತರನ್ನು ಬೇರೆ ಮಾಡಲು ಸರ್ಕಾರ ಪ್ರಯತ್ನ ನಡಸಿತು. ಆದರೆ, ಅದು ಸಫಲವಾಗಿಲ್ಲ. ನಾವೆಲ್ಲಾ ಇಲ್ಲಿ ಸಹೋದರರಂತೆ ಇದ್ದೇವೆ. ಇಲ್ಲಿಗೆ ಹರಿಯಾಣದಿಂದ ಹಾಲು ಬರುತ್ತಿದೆ. ಸಂಘಟನೆಗಳು ಬೇರೆ ಬೇರೆ, ರಾಜ್ಯ, ಊರುಗಳು ಬೇರೆ ಬೇರೆ ಆದರೆ ಒಂದು ಒಳ್ಳೆಯ ಕಾರಣಕ್ಕೆ ನಾವೇಲ್ಲಾ ಒಂದಾಗಿದ್ದೇವೆ. ಹಾಗಾಗಿ ಈ ಹೋರಾಟದಲ್ಲಿ ಗೆಲುವು ನಮ್ಮದು ಎನ್ನುತ್ತಾರೆ ಬಂಟಿಡಾ ಜಿಲ್ಲೆಯ ಬಲ್ವಂತ್ ಸಿಂಗ್.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...