Homeಮುಖಪುಟಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

- Advertisement -
- Advertisement -

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”.

ಇದು ಪಂಜಾಬ್‌ನ ಬಟಿಂಡಾ ಜಿಲ್ಲೆಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿರುವ ಬೆಹಮನ್ದವಾನಾ ಗ್ರಾಮದ 72 ವರ್ಷದ ರೈತ ಬಲ್ವಂತ್ ಸಿಂಗ್ ಅವರ ಮನದಾಳದ ಮಾತುಗಳು.

ಬಲವಂತ್ ಸಿಂಗ್, ಕಳೆದ 5 ತಿಂಗಳಿನಿಂದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಹಮನ್ ದವಾನಾ ಗ್ರಾಮದಲ್ಲಿ 12 ಎಕರೆ ಜಮೀನು ಹೊಂದಿರುವ ಇವರು, ಗೋಧಿ, ಭತ್ತ, ಹತ್ತಿ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ. ಸದ್ಯ ಹೊಲದಲ್ಲಿ ಗೋಧಿ ಬಿತ್ತನೆ ಮಾಡಿ, ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

Photo Courtesy: DNA India

ಮೊದಲಿಗೆ ತಮ್ಮ ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ಇವರು ನಂತರ ಬಟಿಂಡಾ, ಪಟಿಯಾಲ, ಪಂಜಾಬ್ಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಟೋಲ್‌ಪ್ಲಾಜಾ ಬಂದ್, ರಿಲಯನ್ಸ್ ಪೆಟ್ರೋಲ್ ಬಂಕ್, ಮಾಲ್‌‌ಗಳನ್ನು ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ನಂತರ ನವೆಂಬರ್ 26 ರಂದು ದೆಹಲಿಗೆ ಬಂದು ಟಿಕ್ರಿ ಗಡಿ ಭಾಗದಲ್ಲಿ ತಮ್ಮ ಟ್ರ್ಯಾಲಿ, ಮತ್ತು ಲಂಗರ್‌‌ನೊಂದಿಗೆ ಹೋರಾಟದಲ್ಲಿ ಜೊತೆಯಾಗಿದ್ದಾರೆ.

ಒಬ್ಬ ಮಗ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಇವರ ಮನೆಯ ಮೂಲ ಉದ್ಯೋಗ ಕೃಷಿ. ಮಗ ಕೂಡ ಕೃಷಿಯನ್ನೇ ಮಾಡುತ್ತಿದ್ದು, ಸದ್ಯ ಊರು ಮತ್ತು ಪ್ರತಿಭಟನಾ ಸ್ಥಳಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ.

“ಸರ್ಕಾರ ಈ ಕಾನೂನುಗಳನ್ನು ಜಾರಿ ಮಾಡಿದ ನಂತರ ಊರಿನಲ್ಲಿ ಹಲವು ಬದಲಾವಣೆಗಳು ಆರಂಭವಾದವು. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗಿರುವುದರಿಂದ ಕಾನೂನುಗಳು ನಮ್ಮ ಮೇಲೆ ಹಿಡಿತ ಸಾಧಿಸುತ್ತವೆ ಎಂಬ ವಿಚಾರ ತಿಳಿಯಿತು. ಇದರ ಜೊತೆಗೆ ರೈತ ಸಂಘಟನೆಗಳು, ವಿದ್ಯಾವಂತ ಯುವಜನರು ಗ್ರಾಮಕ್ಕೆ ಬರತೊಡಿದರು. ಊರಿನಲ್ಲಿ ಸಭೆಗಳು ನಡೆದವು. ಸಭೆಗಳಲ್ಲಿ ಕಾನೂನುಗಳು ಹೇಗೆ ರೈತರನ್ನು ಕಡೆಗಣಿಸಿ, ಕಾರ್ಫೊರೇಟ್ ಕಂಪನಿಗಳಿಗೆ ವರದಾನವಾಗಲಿದೆ. ಇದರ ಜೊತೆಗೆ ಎಂಎಸ್ಪಿ ಹೇಗೆ ರೈತರಿಂದ ದೂರವಾಗಿಲಿದೆ ಎಂಬುದನ್ನು ತಿಳಿಸಿದರು. ಹಾಗಾಗಿ ಕಾನೂನುಗಳ ಅನಾನುಕೂಲಗಳ ಬಗ್ಗೆ ನಮಗೆ ತಿಳಿಯಿತು” ಎಂದು ಬಲ್ವಂತ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

“ಇಡೀ ಕುಟುಂಬ ಈ ಹೋರಾಟದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಮುಖಂಡ ಸರ್ಜಿತ್ ಕುಮಾರ್ ಜಾನೆ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದವರಲ್ಲಿ ನನ್ನ 14 ವರ್ಷದ ಮೊಮ್ಮಗಳು ಕೂಡ ಇದ್ದಳು. ನನಗೆ ನನ್ನ ಮೊಮ್ಮಕ್ಕಳು ಓದುವುದು, ಬರೆಯುವುದನ್ನು ಕಲಿಸಿದ್ದಾರೆ. ಟಿಕ್ರಿ ಪ್ರತಿಭಟನಾ ಸ್ಥಳದಲ್ಲಿ ಹರಿಯಾಣದವರ ಜೊತೆ ಇರುವುದರಿಂದ ಹರಿಯಾಣಿ ಭಾಷೆ ಕೂಡ ಕಲಿಯುತ್ತಿದ್ದೇನೆ

ನಾನು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ಉಗ್ರಾನ್ ಬಳಗದ ಸದಸ್ಯನಾಗಿದ್ದೇನೆ. ಜನವರಿ 26 ರ ಘಟನೆ ನಂತರ ಗೋಧಿ ಮೀಡಿಯಾ ನಮ್ಮ ಬಗ್ಗೆ ಹಲವು ರೀತಿಯಲ್ಲಿ ಅಪಪ್ರಚಾರ ಮಾಡಿದೆ. ಹಾಗೆಂದು ನಾವು ಕುಂದಿಲ್ಲ. ನಮ್ಮ ಜನ ಈ ಮಾಧ್ಯಮಗಳನ್ನು ಬಹಿಷ್ಕರಿಸಿದ್ದಾರೆ. ಆದರೆ, ಪ್ರತಿಭಟನಾ ಸ್ಥಳದಲ್ಲಿ ನಾವೇ ಭದ್ರತೆ ಹೆಚ್ಚಿಸಿಕೊಂಡಿದ್ದೇವೆ. ಟಿಕ್ರಿಯಲ್ಲಿ 25 ಕಿಲೋಮೀಟರ್ಗೂ ಹೆಚ್ಚಿನ ವಿಸ್ತಿರ್ಣ ಇದೆ. ಪ್ರತಿಭಟನಾ ನಿರತರ ರಕ್ಷಣೆ ಕೂಡ ಮುಖ್ಯವಾದರಿಂದ ನಾವು ಸ್ವಯಂಸೇವಕರನ್ನು ಹೆಚ್ಚು ಮಾಡಿಕೊಂಡು ಪಹರೇ ನಡೆಸುತ್ತಿದ್ದೇವೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

“ಶಾಂತಿಯುತವಾಗಿ ಹೋರಾಡುತ್ತಿದ್ದವರನ್ನು ಬೇರೆ ರೀತಿಯಲ್ಲಿ ಮಾಧ್ಯಮ ತೋರಿಸಿದೆ. ಈಗ ನಾವು ಗೆಲ್ಲುವವರೆಗೂ ಹೋರಾಟ ನಡೆಸುತ್ತೇವೆ. ಕುಟುಂಬದ ಮೂಲ ಆದಾಯ ಕೃಷಿಯಾಗಿದೆ. ಅದೇ ನಮ್ಮ ಕೈತಪ್ಪಿದರೇ ಜೀವನ ನಡೆಸುವುದಾದರೂ ಹೇಗೆ..? ಹಾಗಾಗಿ ನಾವು ಗೆದ್ದು ಹೋಗುತ್ತೇವೆ ಅಥವಾ ಭಾರತದ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹವನ್ನು ಸುತ್ತಿಕೊಂಡು ಹೋಗುತ್ತೇವೆ” ಎಂದು ಅವರು ಹೇಳುತ್ತಾರೆ.

ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಸಾವು
ಸಾಂದರ್ಭಿಕ ಚಿತ್ರ PC: PTI

“ಒಟ್ಟಿನಲ್ಲಿ ನಾವು ಇಲ್ಲಿಂದ ಕದಲುವ ಮಾತೇ ಇಲ್ಲ. ಈಗಂತೂ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹರಿಯಾಣದಿಂದ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪ್ರತಿಭಟನಾ ಸ್ಥಳ ಮತ್ತಷ್ಟು ವಿಸ್ತರಿಸಲಿದೆ” ಎಂದು ಬಲ್ವಂತ್ ಸಿಂಗ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಹರಿಯಾಣ ಮತ್ತು ಪಂಜಾಬ್ ರೈತರನ್ನು ಬೇರೆ ಮಾಡಲು ಸರ್ಕಾರ ಪ್ರಯತ್ನ ನಡಸಿತು. ಆದರೆ, ಅದು ಸಫಲವಾಗಿಲ್ಲ. ನಾವೆಲ್ಲಾ ಇಲ್ಲಿ ಸಹೋದರರಂತೆ ಇದ್ದೇವೆ. ಇಲ್ಲಿಗೆ ಹರಿಯಾಣದಿಂದ ಹಾಲು ಬರುತ್ತಿದೆ. ಸಂಘಟನೆಗಳು ಬೇರೆ ಬೇರೆ, ರಾಜ್ಯ, ಊರುಗಳು ಬೇರೆ ಬೇರೆ ಆದರೆ ಒಂದು ಒಳ್ಳೆಯ ಕಾರಣಕ್ಕೆ ನಾವೇಲ್ಲಾ ಒಂದಾಗಿದ್ದೇವೆ. ಹಾಗಾಗಿ ಈ ಹೋರಾಟದಲ್ಲಿ ಗೆಲುವು ನಮ್ಮದು ಎನ್ನುತ್ತಾರೆ ಬಂಟಿಡಾ ಜಿಲ್ಲೆಯ ಬಲ್ವಂತ್ ಸಿಂಗ್.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...