Homeಮುಖಪುಟಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

- Advertisement -
- Advertisement -

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”.

ಇದು ಪಂಜಾಬ್‌ನ ಬಟಿಂಡಾ ಜಿಲ್ಲೆಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿರುವ ಬೆಹಮನ್ದವಾನಾ ಗ್ರಾಮದ 72 ವರ್ಷದ ರೈತ ಬಲ್ವಂತ್ ಸಿಂಗ್ ಅವರ ಮನದಾಳದ ಮಾತುಗಳು.

ಬಲವಂತ್ ಸಿಂಗ್, ಕಳೆದ 5 ತಿಂಗಳಿನಿಂದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಹಮನ್ ದವಾನಾ ಗ್ರಾಮದಲ್ಲಿ 12 ಎಕರೆ ಜಮೀನು ಹೊಂದಿರುವ ಇವರು, ಗೋಧಿ, ಭತ್ತ, ಹತ್ತಿ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ. ಸದ್ಯ ಹೊಲದಲ್ಲಿ ಗೋಧಿ ಬಿತ್ತನೆ ಮಾಡಿ, ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

Photo Courtesy: DNA India

ಮೊದಲಿಗೆ ತಮ್ಮ ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ಇವರು ನಂತರ ಬಟಿಂಡಾ, ಪಟಿಯಾಲ, ಪಂಜಾಬ್ಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಟೋಲ್‌ಪ್ಲಾಜಾ ಬಂದ್, ರಿಲಯನ್ಸ್ ಪೆಟ್ರೋಲ್ ಬಂಕ್, ಮಾಲ್‌‌ಗಳನ್ನು ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ನಂತರ ನವೆಂಬರ್ 26 ರಂದು ದೆಹಲಿಗೆ ಬಂದು ಟಿಕ್ರಿ ಗಡಿ ಭಾಗದಲ್ಲಿ ತಮ್ಮ ಟ್ರ್ಯಾಲಿ, ಮತ್ತು ಲಂಗರ್‌‌ನೊಂದಿಗೆ ಹೋರಾಟದಲ್ಲಿ ಜೊತೆಯಾಗಿದ್ದಾರೆ.

ಒಬ್ಬ ಮಗ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಇವರ ಮನೆಯ ಮೂಲ ಉದ್ಯೋಗ ಕೃಷಿ. ಮಗ ಕೂಡ ಕೃಷಿಯನ್ನೇ ಮಾಡುತ್ತಿದ್ದು, ಸದ್ಯ ಊರು ಮತ್ತು ಪ್ರತಿಭಟನಾ ಸ್ಥಳಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ.

“ಸರ್ಕಾರ ಈ ಕಾನೂನುಗಳನ್ನು ಜಾರಿ ಮಾಡಿದ ನಂತರ ಊರಿನಲ್ಲಿ ಹಲವು ಬದಲಾವಣೆಗಳು ಆರಂಭವಾದವು. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗಿರುವುದರಿಂದ ಕಾನೂನುಗಳು ನಮ್ಮ ಮೇಲೆ ಹಿಡಿತ ಸಾಧಿಸುತ್ತವೆ ಎಂಬ ವಿಚಾರ ತಿಳಿಯಿತು. ಇದರ ಜೊತೆಗೆ ರೈತ ಸಂಘಟನೆಗಳು, ವಿದ್ಯಾವಂತ ಯುವಜನರು ಗ್ರಾಮಕ್ಕೆ ಬರತೊಡಿದರು. ಊರಿನಲ್ಲಿ ಸಭೆಗಳು ನಡೆದವು. ಸಭೆಗಳಲ್ಲಿ ಕಾನೂನುಗಳು ಹೇಗೆ ರೈತರನ್ನು ಕಡೆಗಣಿಸಿ, ಕಾರ್ಫೊರೇಟ್ ಕಂಪನಿಗಳಿಗೆ ವರದಾನವಾಗಲಿದೆ. ಇದರ ಜೊತೆಗೆ ಎಂಎಸ್ಪಿ ಹೇಗೆ ರೈತರಿಂದ ದೂರವಾಗಿಲಿದೆ ಎಂಬುದನ್ನು ತಿಳಿಸಿದರು. ಹಾಗಾಗಿ ಕಾನೂನುಗಳ ಅನಾನುಕೂಲಗಳ ಬಗ್ಗೆ ನಮಗೆ ತಿಳಿಯಿತು” ಎಂದು ಬಲ್ವಂತ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

“ಇಡೀ ಕುಟುಂಬ ಈ ಹೋರಾಟದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಮುಖಂಡ ಸರ್ಜಿತ್ ಕುಮಾರ್ ಜಾನೆ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದವರಲ್ಲಿ ನನ್ನ 14 ವರ್ಷದ ಮೊಮ್ಮಗಳು ಕೂಡ ಇದ್ದಳು. ನನಗೆ ನನ್ನ ಮೊಮ್ಮಕ್ಕಳು ಓದುವುದು, ಬರೆಯುವುದನ್ನು ಕಲಿಸಿದ್ದಾರೆ. ಟಿಕ್ರಿ ಪ್ರತಿಭಟನಾ ಸ್ಥಳದಲ್ಲಿ ಹರಿಯಾಣದವರ ಜೊತೆ ಇರುವುದರಿಂದ ಹರಿಯಾಣಿ ಭಾಷೆ ಕೂಡ ಕಲಿಯುತ್ತಿದ್ದೇನೆ

ನಾನು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ಉಗ್ರಾನ್ ಬಳಗದ ಸದಸ್ಯನಾಗಿದ್ದೇನೆ. ಜನವರಿ 26 ರ ಘಟನೆ ನಂತರ ಗೋಧಿ ಮೀಡಿಯಾ ನಮ್ಮ ಬಗ್ಗೆ ಹಲವು ರೀತಿಯಲ್ಲಿ ಅಪಪ್ರಚಾರ ಮಾಡಿದೆ. ಹಾಗೆಂದು ನಾವು ಕುಂದಿಲ್ಲ. ನಮ್ಮ ಜನ ಈ ಮಾಧ್ಯಮಗಳನ್ನು ಬಹಿಷ್ಕರಿಸಿದ್ದಾರೆ. ಆದರೆ, ಪ್ರತಿಭಟನಾ ಸ್ಥಳದಲ್ಲಿ ನಾವೇ ಭದ್ರತೆ ಹೆಚ್ಚಿಸಿಕೊಂಡಿದ್ದೇವೆ. ಟಿಕ್ರಿಯಲ್ಲಿ 25 ಕಿಲೋಮೀಟರ್ಗೂ ಹೆಚ್ಚಿನ ವಿಸ್ತಿರ್ಣ ಇದೆ. ಪ್ರತಿಭಟನಾ ನಿರತರ ರಕ್ಷಣೆ ಕೂಡ ಮುಖ್ಯವಾದರಿಂದ ನಾವು ಸ್ವಯಂಸೇವಕರನ್ನು ಹೆಚ್ಚು ಮಾಡಿಕೊಂಡು ಪಹರೇ ನಡೆಸುತ್ತಿದ್ದೇವೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

“ಶಾಂತಿಯುತವಾಗಿ ಹೋರಾಡುತ್ತಿದ್ದವರನ್ನು ಬೇರೆ ರೀತಿಯಲ್ಲಿ ಮಾಧ್ಯಮ ತೋರಿಸಿದೆ. ಈಗ ನಾವು ಗೆಲ್ಲುವವರೆಗೂ ಹೋರಾಟ ನಡೆಸುತ್ತೇವೆ. ಕುಟುಂಬದ ಮೂಲ ಆದಾಯ ಕೃಷಿಯಾಗಿದೆ. ಅದೇ ನಮ್ಮ ಕೈತಪ್ಪಿದರೇ ಜೀವನ ನಡೆಸುವುದಾದರೂ ಹೇಗೆ..? ಹಾಗಾಗಿ ನಾವು ಗೆದ್ದು ಹೋಗುತ್ತೇವೆ ಅಥವಾ ಭಾರತದ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹವನ್ನು ಸುತ್ತಿಕೊಂಡು ಹೋಗುತ್ತೇವೆ” ಎಂದು ಅವರು ಹೇಳುತ್ತಾರೆ.

ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಸಾವು
ಸಾಂದರ್ಭಿಕ ಚಿತ್ರ PC: PTI

“ಒಟ್ಟಿನಲ್ಲಿ ನಾವು ಇಲ್ಲಿಂದ ಕದಲುವ ಮಾತೇ ಇಲ್ಲ. ಈಗಂತೂ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹರಿಯಾಣದಿಂದ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪ್ರತಿಭಟನಾ ಸ್ಥಳ ಮತ್ತಷ್ಟು ವಿಸ್ತರಿಸಲಿದೆ” ಎಂದು ಬಲ್ವಂತ್ ಸಿಂಗ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಹರಿಯಾಣ ಮತ್ತು ಪಂಜಾಬ್ ರೈತರನ್ನು ಬೇರೆ ಮಾಡಲು ಸರ್ಕಾರ ಪ್ರಯತ್ನ ನಡಸಿತು. ಆದರೆ, ಅದು ಸಫಲವಾಗಿಲ್ಲ. ನಾವೆಲ್ಲಾ ಇಲ್ಲಿ ಸಹೋದರರಂತೆ ಇದ್ದೇವೆ. ಇಲ್ಲಿಗೆ ಹರಿಯಾಣದಿಂದ ಹಾಲು ಬರುತ್ತಿದೆ. ಸಂಘಟನೆಗಳು ಬೇರೆ ಬೇರೆ, ರಾಜ್ಯ, ಊರುಗಳು ಬೇರೆ ಬೇರೆ ಆದರೆ ಒಂದು ಒಳ್ಳೆಯ ಕಾರಣಕ್ಕೆ ನಾವೇಲ್ಲಾ ಒಂದಾಗಿದ್ದೇವೆ. ಹಾಗಾಗಿ ಈ ಹೋರಾಟದಲ್ಲಿ ಗೆಲುವು ನಮ್ಮದು ಎನ್ನುತ್ತಾರೆ ಬಂಟಿಡಾ ಜಿಲ್ಲೆಯ ಬಲ್ವಂತ್ ಸಿಂಗ್.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...