Homeಮುಖಪುಟಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

- Advertisement -
- Advertisement -

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”.

ಇದು ಪಂಜಾಬ್‌ನ ಬಟಿಂಡಾ ಜಿಲ್ಲೆಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿರುವ ಬೆಹಮನ್ದವಾನಾ ಗ್ರಾಮದ 72 ವರ್ಷದ ರೈತ ಬಲ್ವಂತ್ ಸಿಂಗ್ ಅವರ ಮನದಾಳದ ಮಾತುಗಳು.

ಬಲವಂತ್ ಸಿಂಗ್, ಕಳೆದ 5 ತಿಂಗಳಿನಿಂದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಹಮನ್ ದವಾನಾ ಗ್ರಾಮದಲ್ಲಿ 12 ಎಕರೆ ಜಮೀನು ಹೊಂದಿರುವ ಇವರು, ಗೋಧಿ, ಭತ್ತ, ಹತ್ತಿ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ. ಸದ್ಯ ಹೊಲದಲ್ಲಿ ಗೋಧಿ ಬಿತ್ತನೆ ಮಾಡಿ, ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

Photo Courtesy: DNA India

ಮೊದಲಿಗೆ ತಮ್ಮ ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ಇವರು ನಂತರ ಬಟಿಂಡಾ, ಪಟಿಯಾಲ, ಪಂಜಾಬ್ಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಟೋಲ್‌ಪ್ಲಾಜಾ ಬಂದ್, ರಿಲಯನ್ಸ್ ಪೆಟ್ರೋಲ್ ಬಂಕ್, ಮಾಲ್‌‌ಗಳನ್ನು ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ನಂತರ ನವೆಂಬರ್ 26 ರಂದು ದೆಹಲಿಗೆ ಬಂದು ಟಿಕ್ರಿ ಗಡಿ ಭಾಗದಲ್ಲಿ ತಮ್ಮ ಟ್ರ್ಯಾಲಿ, ಮತ್ತು ಲಂಗರ್‌‌ನೊಂದಿಗೆ ಹೋರಾಟದಲ್ಲಿ ಜೊತೆಯಾಗಿದ್ದಾರೆ.

ಒಬ್ಬ ಮಗ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಇವರ ಮನೆಯ ಮೂಲ ಉದ್ಯೋಗ ಕೃಷಿ. ಮಗ ಕೂಡ ಕೃಷಿಯನ್ನೇ ಮಾಡುತ್ತಿದ್ದು, ಸದ್ಯ ಊರು ಮತ್ತು ಪ್ರತಿಭಟನಾ ಸ್ಥಳಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ.

“ಸರ್ಕಾರ ಈ ಕಾನೂನುಗಳನ್ನು ಜಾರಿ ಮಾಡಿದ ನಂತರ ಊರಿನಲ್ಲಿ ಹಲವು ಬದಲಾವಣೆಗಳು ಆರಂಭವಾದವು. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗಿರುವುದರಿಂದ ಕಾನೂನುಗಳು ನಮ್ಮ ಮೇಲೆ ಹಿಡಿತ ಸಾಧಿಸುತ್ತವೆ ಎಂಬ ವಿಚಾರ ತಿಳಿಯಿತು. ಇದರ ಜೊತೆಗೆ ರೈತ ಸಂಘಟನೆಗಳು, ವಿದ್ಯಾವಂತ ಯುವಜನರು ಗ್ರಾಮಕ್ಕೆ ಬರತೊಡಿದರು. ಊರಿನಲ್ಲಿ ಸಭೆಗಳು ನಡೆದವು. ಸಭೆಗಳಲ್ಲಿ ಕಾನೂನುಗಳು ಹೇಗೆ ರೈತರನ್ನು ಕಡೆಗಣಿಸಿ, ಕಾರ್ಫೊರೇಟ್ ಕಂಪನಿಗಳಿಗೆ ವರದಾನವಾಗಲಿದೆ. ಇದರ ಜೊತೆಗೆ ಎಂಎಸ್ಪಿ ಹೇಗೆ ರೈತರಿಂದ ದೂರವಾಗಿಲಿದೆ ಎಂಬುದನ್ನು ತಿಳಿಸಿದರು. ಹಾಗಾಗಿ ಕಾನೂನುಗಳ ಅನಾನುಕೂಲಗಳ ಬಗ್ಗೆ ನಮಗೆ ತಿಳಿಯಿತು” ಎಂದು ಬಲ್ವಂತ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

“ಇಡೀ ಕುಟುಂಬ ಈ ಹೋರಾಟದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಮುಖಂಡ ಸರ್ಜಿತ್ ಕುಮಾರ್ ಜಾನೆ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದವರಲ್ಲಿ ನನ್ನ 14 ವರ್ಷದ ಮೊಮ್ಮಗಳು ಕೂಡ ಇದ್ದಳು. ನನಗೆ ನನ್ನ ಮೊಮ್ಮಕ್ಕಳು ಓದುವುದು, ಬರೆಯುವುದನ್ನು ಕಲಿಸಿದ್ದಾರೆ. ಟಿಕ್ರಿ ಪ್ರತಿಭಟನಾ ಸ್ಥಳದಲ್ಲಿ ಹರಿಯಾಣದವರ ಜೊತೆ ಇರುವುದರಿಂದ ಹರಿಯಾಣಿ ಭಾಷೆ ಕೂಡ ಕಲಿಯುತ್ತಿದ್ದೇನೆ

ನಾನು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ಉಗ್ರಾನ್ ಬಳಗದ ಸದಸ್ಯನಾಗಿದ್ದೇನೆ. ಜನವರಿ 26 ರ ಘಟನೆ ನಂತರ ಗೋಧಿ ಮೀಡಿಯಾ ನಮ್ಮ ಬಗ್ಗೆ ಹಲವು ರೀತಿಯಲ್ಲಿ ಅಪಪ್ರಚಾರ ಮಾಡಿದೆ. ಹಾಗೆಂದು ನಾವು ಕುಂದಿಲ್ಲ. ನಮ್ಮ ಜನ ಈ ಮಾಧ್ಯಮಗಳನ್ನು ಬಹಿಷ್ಕರಿಸಿದ್ದಾರೆ. ಆದರೆ, ಪ್ರತಿಭಟನಾ ಸ್ಥಳದಲ್ಲಿ ನಾವೇ ಭದ್ರತೆ ಹೆಚ್ಚಿಸಿಕೊಂಡಿದ್ದೇವೆ. ಟಿಕ್ರಿಯಲ್ಲಿ 25 ಕಿಲೋಮೀಟರ್ಗೂ ಹೆಚ್ಚಿನ ವಿಸ್ತಿರ್ಣ ಇದೆ. ಪ್ರತಿಭಟನಾ ನಿರತರ ರಕ್ಷಣೆ ಕೂಡ ಮುಖ್ಯವಾದರಿಂದ ನಾವು ಸ್ವಯಂಸೇವಕರನ್ನು ಹೆಚ್ಚು ಮಾಡಿಕೊಂಡು ಪಹರೇ ನಡೆಸುತ್ತಿದ್ದೇವೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

“ಶಾಂತಿಯುತವಾಗಿ ಹೋರಾಡುತ್ತಿದ್ದವರನ್ನು ಬೇರೆ ರೀತಿಯಲ್ಲಿ ಮಾಧ್ಯಮ ತೋರಿಸಿದೆ. ಈಗ ನಾವು ಗೆಲ್ಲುವವರೆಗೂ ಹೋರಾಟ ನಡೆಸುತ್ತೇವೆ. ಕುಟುಂಬದ ಮೂಲ ಆದಾಯ ಕೃಷಿಯಾಗಿದೆ. ಅದೇ ನಮ್ಮ ಕೈತಪ್ಪಿದರೇ ಜೀವನ ನಡೆಸುವುದಾದರೂ ಹೇಗೆ..? ಹಾಗಾಗಿ ನಾವು ಗೆದ್ದು ಹೋಗುತ್ತೇವೆ ಅಥವಾ ಭಾರತದ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹವನ್ನು ಸುತ್ತಿಕೊಂಡು ಹೋಗುತ್ತೇವೆ” ಎಂದು ಅವರು ಹೇಳುತ್ತಾರೆ.

ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಸಾವು
ಸಾಂದರ್ಭಿಕ ಚಿತ್ರ PC: PTI

“ಒಟ್ಟಿನಲ್ಲಿ ನಾವು ಇಲ್ಲಿಂದ ಕದಲುವ ಮಾತೇ ಇಲ್ಲ. ಈಗಂತೂ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹರಿಯಾಣದಿಂದ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪ್ರತಿಭಟನಾ ಸ್ಥಳ ಮತ್ತಷ್ಟು ವಿಸ್ತರಿಸಲಿದೆ” ಎಂದು ಬಲ್ವಂತ್ ಸಿಂಗ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಹರಿಯಾಣ ಮತ್ತು ಪಂಜಾಬ್ ರೈತರನ್ನು ಬೇರೆ ಮಾಡಲು ಸರ್ಕಾರ ಪ್ರಯತ್ನ ನಡಸಿತು. ಆದರೆ, ಅದು ಸಫಲವಾಗಿಲ್ಲ. ನಾವೆಲ್ಲಾ ಇಲ್ಲಿ ಸಹೋದರರಂತೆ ಇದ್ದೇವೆ. ಇಲ್ಲಿಗೆ ಹರಿಯಾಣದಿಂದ ಹಾಲು ಬರುತ್ತಿದೆ. ಸಂಘಟನೆಗಳು ಬೇರೆ ಬೇರೆ, ರಾಜ್ಯ, ಊರುಗಳು ಬೇರೆ ಬೇರೆ ಆದರೆ ಒಂದು ಒಳ್ಳೆಯ ಕಾರಣಕ್ಕೆ ನಾವೇಲ್ಲಾ ಒಂದಾಗಿದ್ದೇವೆ. ಹಾಗಾಗಿ ಈ ಹೋರಾಟದಲ್ಲಿ ಗೆಲುವು ನಮ್ಮದು ಎನ್ನುತ್ತಾರೆ ಬಂಟಿಡಾ ಜಿಲ್ಲೆಯ ಬಲ್ವಂತ್ ಸಿಂಗ್.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...