Homeಮುಖಪುಟಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

- Advertisement -
- Advertisement -

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”.

ಇದು ಪಂಜಾಬ್‌ನ ಬಟಿಂಡಾ ಜಿಲ್ಲೆಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿರುವ ಬೆಹಮನ್ದವಾನಾ ಗ್ರಾಮದ 72 ವರ್ಷದ ರೈತ ಬಲ್ವಂತ್ ಸಿಂಗ್ ಅವರ ಮನದಾಳದ ಮಾತುಗಳು.

ಬಲವಂತ್ ಸಿಂಗ್, ಕಳೆದ 5 ತಿಂಗಳಿನಿಂದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಹಮನ್ ದವಾನಾ ಗ್ರಾಮದಲ್ಲಿ 12 ಎಕರೆ ಜಮೀನು ಹೊಂದಿರುವ ಇವರು, ಗೋಧಿ, ಭತ್ತ, ಹತ್ತಿ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ. ಸದ್ಯ ಹೊಲದಲ್ಲಿ ಗೋಧಿ ಬಿತ್ತನೆ ಮಾಡಿ, ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

Photo Courtesy: DNA India

ಮೊದಲಿಗೆ ತಮ್ಮ ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ಇವರು ನಂತರ ಬಟಿಂಡಾ, ಪಟಿಯಾಲ, ಪಂಜಾಬ್ಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಟೋಲ್‌ಪ್ಲಾಜಾ ಬಂದ್, ರಿಲಯನ್ಸ್ ಪೆಟ್ರೋಲ್ ಬಂಕ್, ಮಾಲ್‌‌ಗಳನ್ನು ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ನಂತರ ನವೆಂಬರ್ 26 ರಂದು ದೆಹಲಿಗೆ ಬಂದು ಟಿಕ್ರಿ ಗಡಿ ಭಾಗದಲ್ಲಿ ತಮ್ಮ ಟ್ರ್ಯಾಲಿ, ಮತ್ತು ಲಂಗರ್‌‌ನೊಂದಿಗೆ ಹೋರಾಟದಲ್ಲಿ ಜೊತೆಯಾಗಿದ್ದಾರೆ.

ಒಬ್ಬ ಮಗ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಇವರ ಮನೆಯ ಮೂಲ ಉದ್ಯೋಗ ಕೃಷಿ. ಮಗ ಕೂಡ ಕೃಷಿಯನ್ನೇ ಮಾಡುತ್ತಿದ್ದು, ಸದ್ಯ ಊರು ಮತ್ತು ಪ್ರತಿಭಟನಾ ಸ್ಥಳಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ.

“ಸರ್ಕಾರ ಈ ಕಾನೂನುಗಳನ್ನು ಜಾರಿ ಮಾಡಿದ ನಂತರ ಊರಿನಲ್ಲಿ ಹಲವು ಬದಲಾವಣೆಗಳು ಆರಂಭವಾದವು. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗಿರುವುದರಿಂದ ಕಾನೂನುಗಳು ನಮ್ಮ ಮೇಲೆ ಹಿಡಿತ ಸಾಧಿಸುತ್ತವೆ ಎಂಬ ವಿಚಾರ ತಿಳಿಯಿತು. ಇದರ ಜೊತೆಗೆ ರೈತ ಸಂಘಟನೆಗಳು, ವಿದ್ಯಾವಂತ ಯುವಜನರು ಗ್ರಾಮಕ್ಕೆ ಬರತೊಡಿದರು. ಊರಿನಲ್ಲಿ ಸಭೆಗಳು ನಡೆದವು. ಸಭೆಗಳಲ್ಲಿ ಕಾನೂನುಗಳು ಹೇಗೆ ರೈತರನ್ನು ಕಡೆಗಣಿಸಿ, ಕಾರ್ಫೊರೇಟ್ ಕಂಪನಿಗಳಿಗೆ ವರದಾನವಾಗಲಿದೆ. ಇದರ ಜೊತೆಗೆ ಎಂಎಸ್ಪಿ ಹೇಗೆ ರೈತರಿಂದ ದೂರವಾಗಿಲಿದೆ ಎಂಬುದನ್ನು ತಿಳಿಸಿದರು. ಹಾಗಾಗಿ ಕಾನೂನುಗಳ ಅನಾನುಕೂಲಗಳ ಬಗ್ಗೆ ನಮಗೆ ತಿಳಿಯಿತು” ಎಂದು ಬಲ್ವಂತ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

“ಇಡೀ ಕುಟುಂಬ ಈ ಹೋರಾಟದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಮುಖಂಡ ಸರ್ಜಿತ್ ಕುಮಾರ್ ಜಾನೆ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದವರಲ್ಲಿ ನನ್ನ 14 ವರ್ಷದ ಮೊಮ್ಮಗಳು ಕೂಡ ಇದ್ದಳು. ನನಗೆ ನನ್ನ ಮೊಮ್ಮಕ್ಕಳು ಓದುವುದು, ಬರೆಯುವುದನ್ನು ಕಲಿಸಿದ್ದಾರೆ. ಟಿಕ್ರಿ ಪ್ರತಿಭಟನಾ ಸ್ಥಳದಲ್ಲಿ ಹರಿಯಾಣದವರ ಜೊತೆ ಇರುವುದರಿಂದ ಹರಿಯಾಣಿ ಭಾಷೆ ಕೂಡ ಕಲಿಯುತ್ತಿದ್ದೇನೆ

ನಾನು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ಉಗ್ರಾನ್ ಬಳಗದ ಸದಸ್ಯನಾಗಿದ್ದೇನೆ. ಜನವರಿ 26 ರ ಘಟನೆ ನಂತರ ಗೋಧಿ ಮೀಡಿಯಾ ನಮ್ಮ ಬಗ್ಗೆ ಹಲವು ರೀತಿಯಲ್ಲಿ ಅಪಪ್ರಚಾರ ಮಾಡಿದೆ. ಹಾಗೆಂದು ನಾವು ಕುಂದಿಲ್ಲ. ನಮ್ಮ ಜನ ಈ ಮಾಧ್ಯಮಗಳನ್ನು ಬಹಿಷ್ಕರಿಸಿದ್ದಾರೆ. ಆದರೆ, ಪ್ರತಿಭಟನಾ ಸ್ಥಳದಲ್ಲಿ ನಾವೇ ಭದ್ರತೆ ಹೆಚ್ಚಿಸಿಕೊಂಡಿದ್ದೇವೆ. ಟಿಕ್ರಿಯಲ್ಲಿ 25 ಕಿಲೋಮೀಟರ್ಗೂ ಹೆಚ್ಚಿನ ವಿಸ್ತಿರ್ಣ ಇದೆ. ಪ್ರತಿಭಟನಾ ನಿರತರ ರಕ್ಷಣೆ ಕೂಡ ಮುಖ್ಯವಾದರಿಂದ ನಾವು ಸ್ವಯಂಸೇವಕರನ್ನು ಹೆಚ್ಚು ಮಾಡಿಕೊಂಡು ಪಹರೇ ನಡೆಸುತ್ತಿದ್ದೇವೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

“ಶಾಂತಿಯುತವಾಗಿ ಹೋರಾಡುತ್ತಿದ್ದವರನ್ನು ಬೇರೆ ರೀತಿಯಲ್ಲಿ ಮಾಧ್ಯಮ ತೋರಿಸಿದೆ. ಈಗ ನಾವು ಗೆಲ್ಲುವವರೆಗೂ ಹೋರಾಟ ನಡೆಸುತ್ತೇವೆ. ಕುಟುಂಬದ ಮೂಲ ಆದಾಯ ಕೃಷಿಯಾಗಿದೆ. ಅದೇ ನಮ್ಮ ಕೈತಪ್ಪಿದರೇ ಜೀವನ ನಡೆಸುವುದಾದರೂ ಹೇಗೆ..? ಹಾಗಾಗಿ ನಾವು ಗೆದ್ದು ಹೋಗುತ್ತೇವೆ ಅಥವಾ ಭಾರತದ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹವನ್ನು ಸುತ್ತಿಕೊಂಡು ಹೋಗುತ್ತೇವೆ” ಎಂದು ಅವರು ಹೇಳುತ್ತಾರೆ.

ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಸಾವು
ಸಾಂದರ್ಭಿಕ ಚಿತ್ರ PC: PTI

“ಒಟ್ಟಿನಲ್ಲಿ ನಾವು ಇಲ್ಲಿಂದ ಕದಲುವ ಮಾತೇ ಇಲ್ಲ. ಈಗಂತೂ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹರಿಯಾಣದಿಂದ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪ್ರತಿಭಟನಾ ಸ್ಥಳ ಮತ್ತಷ್ಟು ವಿಸ್ತರಿಸಲಿದೆ” ಎಂದು ಬಲ್ವಂತ್ ಸಿಂಗ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಹರಿಯಾಣ ಮತ್ತು ಪಂಜಾಬ್ ರೈತರನ್ನು ಬೇರೆ ಮಾಡಲು ಸರ್ಕಾರ ಪ್ರಯತ್ನ ನಡಸಿತು. ಆದರೆ, ಅದು ಸಫಲವಾಗಿಲ್ಲ. ನಾವೆಲ್ಲಾ ಇಲ್ಲಿ ಸಹೋದರರಂತೆ ಇದ್ದೇವೆ. ಇಲ್ಲಿಗೆ ಹರಿಯಾಣದಿಂದ ಹಾಲು ಬರುತ್ತಿದೆ. ಸಂಘಟನೆಗಳು ಬೇರೆ ಬೇರೆ, ರಾಜ್ಯ, ಊರುಗಳು ಬೇರೆ ಬೇರೆ ಆದರೆ ಒಂದು ಒಳ್ಳೆಯ ಕಾರಣಕ್ಕೆ ನಾವೇಲ್ಲಾ ಒಂದಾಗಿದ್ದೇವೆ. ಹಾಗಾಗಿ ಈ ಹೋರಾಟದಲ್ಲಿ ಗೆಲುವು ನಮ್ಮದು ಎನ್ನುತ್ತಾರೆ ಬಂಟಿಡಾ ಜಿಲ್ಲೆಯ ಬಲ್ವಂತ್ ಸಿಂಗ್.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...