Homeಮುಖಪುಟಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

ಗೆದ್ದೇ ಮನೆಗೆ ತೆರಳುತ್ತೇವೆ, ಇಲ್ಲವೆಂದರೆ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹ ಹೋಗಲಿವೆ!

- Advertisement -
- Advertisement -

“ನಾವು ರೈತರು. ಹೋರಾಟ ಎಂಬುದು ನಮ್ಮ ರಕ್ತದಲ್ಲೇ ಬಂದಿದೆ. ನನ್ನ ಇಡೀ ಕುಟುಂಬ ಈ ಆಂದೋಲನದಲ್ಲಿ ಭಾಗಿಯಾಗಿದೆ. ನನ್ನ 14 ವರ್ಷದ ಮೊಮ್ಮಗಳು ಕೂಡ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಹೋರಾಟದಲ್ಲಿ ಭಾಗಿಯಾಗಿದ್ದಾಳೆ. ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದೇವೆ. ಅದನ್ನು ಪಡೆದೇ ಇಲ್ಲಿಂದ ತೆರಳುತ್ತೇವೆ”.

ಇದು ಪಂಜಾಬ್‌ನ ಬಟಿಂಡಾ ಜಿಲ್ಲೆಯಿಂದ ಕೇವಲ 7 ಕಿಲೋಮೀಟರ್ ದೂರದಲ್ಲಿರುವ ಬೆಹಮನ್ದವಾನಾ ಗ್ರಾಮದ 72 ವರ್ಷದ ರೈತ ಬಲ್ವಂತ್ ಸಿಂಗ್ ಅವರ ಮನದಾಳದ ಮಾತುಗಳು.

ಬಲವಂತ್ ಸಿಂಗ್, ಕಳೆದ 5 ತಿಂಗಳಿನಿಂದ ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಹಮನ್ ದವಾನಾ ಗ್ರಾಮದಲ್ಲಿ 12 ಎಕರೆ ಜಮೀನು ಹೊಂದಿರುವ ಇವರು, ಗೋಧಿ, ಭತ್ತ, ಹತ್ತಿ ಜೊತೆಗೆ ತರಕಾರಿಯನ್ನು ಬೆಳೆಯುತ್ತಾರೆ. ಸದ್ಯ ಹೊಲದಲ್ಲಿ ಗೋಧಿ ಬಿತ್ತನೆ ಮಾಡಿ, ಹೋರಾಟದಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ಲೈವ್ ನೋಡಿ: ಪಂಜಾಬ್‌ನಿಂದ ನಾನುಗೌರಿ ತಂಡದ ಮಮತ ಎಂ

Photo Courtesy: DNA India

ಮೊದಲಿಗೆ ತಮ್ಮ ಗ್ರಾಮದಲ್ಲಿ ನಡೆದ ಧರಣಿಯಲ್ಲಿ ಪಾಲ್ಗೊಂಡ ಇವರು ನಂತರ ಬಟಿಂಡಾ, ಪಟಿಯಾಲ, ಪಂಜಾಬ್ಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಟೋಲ್‌ಪ್ಲಾಜಾ ಬಂದ್, ರಿಲಯನ್ಸ್ ಪೆಟ್ರೋಲ್ ಬಂಕ್, ಮಾಲ್‌‌ಗಳನ್ನು ಬಂದ್ ಮಾಡಿ ಹೋರಾಟ ನಡೆಸಿದ್ದಾರೆ. ನಂತರ ನವೆಂಬರ್ 26 ರಂದು ದೆಹಲಿಗೆ ಬಂದು ಟಿಕ್ರಿ ಗಡಿ ಭಾಗದಲ್ಲಿ ತಮ್ಮ ಟ್ರ್ಯಾಲಿ, ಮತ್ತು ಲಂಗರ್‌‌ನೊಂದಿಗೆ ಹೋರಾಟದಲ್ಲಿ ಜೊತೆಯಾಗಿದ್ದಾರೆ.

ಒಬ್ಬ ಮಗ, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿರುವ ಇವರ ಮನೆಯ ಮೂಲ ಉದ್ಯೋಗ ಕೃಷಿ. ಮಗ ಕೂಡ ಕೃಷಿಯನ್ನೇ ಮಾಡುತ್ತಿದ್ದು, ಸದ್ಯ ಊರು ಮತ್ತು ಪ್ರತಿಭಟನಾ ಸ್ಥಳಗಳ ನಡುವೆ ಸೇತುವೆಯಾಗಿ ಕೆಲಸ ಮಾಡುತ್ತಿದ್ದಾರೆ.

“ಸರ್ಕಾರ ಈ ಕಾನೂನುಗಳನ್ನು ಜಾರಿ ಮಾಡಿದ ನಂತರ ಊರಿನಲ್ಲಿ ಹಲವು ಬದಲಾವಣೆಗಳು ಆರಂಭವಾದವು. ಮನೆಯಲ್ಲಿ ಎಲ್ಲರೂ ವಿದ್ಯಾವಂತರಾಗಿರುವುದರಿಂದ ಕಾನೂನುಗಳು ನಮ್ಮ ಮೇಲೆ ಹಿಡಿತ ಸಾಧಿಸುತ್ತವೆ ಎಂಬ ವಿಚಾರ ತಿಳಿಯಿತು. ಇದರ ಜೊತೆಗೆ ರೈತ ಸಂಘಟನೆಗಳು, ವಿದ್ಯಾವಂತ ಯುವಜನರು ಗ್ರಾಮಕ್ಕೆ ಬರತೊಡಿದರು. ಊರಿನಲ್ಲಿ ಸಭೆಗಳು ನಡೆದವು. ಸಭೆಗಳಲ್ಲಿ ಕಾನೂನುಗಳು ಹೇಗೆ ರೈತರನ್ನು ಕಡೆಗಣಿಸಿ, ಕಾರ್ಫೊರೇಟ್ ಕಂಪನಿಗಳಿಗೆ ವರದಾನವಾಗಲಿದೆ. ಇದರ ಜೊತೆಗೆ ಎಂಎಸ್ಪಿ ಹೇಗೆ ರೈತರಿಂದ ದೂರವಾಗಿಲಿದೆ ಎಂಬುದನ್ನು ತಿಳಿಸಿದರು. ಹಾಗಾಗಿ ಕಾನೂನುಗಳ ಅನಾನುಕೂಲಗಳ ಬಗ್ಗೆ ನಮಗೆ ತಿಳಿಯಿತು” ಎಂದು ಬಲ್ವಂತ್ ಸಿಂಗ್ ಹೇಳುತ್ತಾರೆ.

ಇದನ್ನೂ ಓದಿ: ರೈತ ಹೋರಾಟಕ್ಕೆ ಆಸರೆಯಾದ ಟೆಂಟ್ ಸಿಟಿ ಎಂಬ ಹೊಸ ನಗರ..!

“ಇಡೀ ಕುಟುಂಬ ಈ ಹೋರಾಟದಲ್ಲಿ ತೊಡಗಿಕೊಂಡಿದೆ. ಬಿಜೆಪಿ ಮುಖಂಡ ಸರ್ಜಿತ್ ಕುಮಾರ್ ಜಾನೆ ಮನೆಗೆ ಮಹಿಳೆಯರು ಮುತ್ತಿಗೆ ಹಾಕಿದವರಲ್ಲಿ ನನ್ನ 14 ವರ್ಷದ ಮೊಮ್ಮಗಳು ಕೂಡ ಇದ್ದಳು. ನನಗೆ ನನ್ನ ಮೊಮ್ಮಕ್ಕಳು ಓದುವುದು, ಬರೆಯುವುದನ್ನು ಕಲಿಸಿದ್ದಾರೆ. ಟಿಕ್ರಿ ಪ್ರತಿಭಟನಾ ಸ್ಥಳದಲ್ಲಿ ಹರಿಯಾಣದವರ ಜೊತೆ ಇರುವುದರಿಂದ ಹರಿಯಾಣಿ ಭಾಷೆ ಕೂಡ ಕಲಿಯುತ್ತಿದ್ದೇನೆ

ನಾನು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು)ನ ಉಗ್ರಾನ್ ಬಳಗದ ಸದಸ್ಯನಾಗಿದ್ದೇನೆ. ಜನವರಿ 26 ರ ಘಟನೆ ನಂತರ ಗೋಧಿ ಮೀಡಿಯಾ ನಮ್ಮ ಬಗ್ಗೆ ಹಲವು ರೀತಿಯಲ್ಲಿ ಅಪಪ್ರಚಾರ ಮಾಡಿದೆ. ಹಾಗೆಂದು ನಾವು ಕುಂದಿಲ್ಲ. ನಮ್ಮ ಜನ ಈ ಮಾಧ್ಯಮಗಳನ್ನು ಬಹಿಷ್ಕರಿಸಿದ್ದಾರೆ. ಆದರೆ, ಪ್ರತಿಭಟನಾ ಸ್ಥಳದಲ್ಲಿ ನಾವೇ ಭದ್ರತೆ ಹೆಚ್ಚಿಸಿಕೊಂಡಿದ್ದೇವೆ. ಟಿಕ್ರಿಯಲ್ಲಿ 25 ಕಿಲೋಮೀಟರ್ಗೂ ಹೆಚ್ಚಿನ ವಿಸ್ತಿರ್ಣ ಇದೆ. ಪ್ರತಿಭಟನಾ ನಿರತರ ರಕ್ಷಣೆ ಕೂಡ ಮುಖ್ಯವಾದರಿಂದ ನಾವು ಸ್ವಯಂಸೇವಕರನ್ನು ಹೆಚ್ಚು ಮಾಡಿಕೊಂಡು ಪಹರೇ ನಡೆಸುತ್ತಿದ್ದೇವೆ” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: ರೈತರನ್ನು ಬೆಂಬಲಿಸುವ ಖಲಿಸ್ತಾನಿ-ಪಾಕಿಸ್ತಾನಿ ಟ್ವಿಟ್ಟರ್‌ ಖಾತೆಗಳನ್ನು ಕಿತ್ತುಹಾಕಿ: ಟ್ವಿಟರ್‌ಗೆ ಕೇಂದ್ರ ತಾಕೀತು

“ಶಾಂತಿಯುತವಾಗಿ ಹೋರಾಡುತ್ತಿದ್ದವರನ್ನು ಬೇರೆ ರೀತಿಯಲ್ಲಿ ಮಾಧ್ಯಮ ತೋರಿಸಿದೆ. ಈಗ ನಾವು ಗೆಲ್ಲುವವರೆಗೂ ಹೋರಾಟ ನಡೆಸುತ್ತೇವೆ. ಕುಟುಂಬದ ಮೂಲ ಆದಾಯ ಕೃಷಿಯಾಗಿದೆ. ಅದೇ ನಮ್ಮ ಕೈತಪ್ಪಿದರೇ ಜೀವನ ನಡೆಸುವುದಾದರೂ ಹೇಗೆ..? ಹಾಗಾಗಿ ನಾವು ಗೆದ್ದು ಹೋಗುತ್ತೇವೆ ಅಥವಾ ಭಾರತದ ತ್ರಿವರ್ಣ ಧ್ವಜದಲ್ಲಿ ನಮ್ಮ ಮೃತದೇಹವನ್ನು ಸುತ್ತಿಕೊಂಡು ಹೋಗುತ್ತೇವೆ” ಎಂದು ಅವರು ಹೇಳುತ್ತಾರೆ.

ರೈತ ಹೋರಾಟ: ಟಿಕ್ರಿ ಗಡಿಯಲ್ಲಿ ಡೆತ್ ನೋಟ್ ಬರೆದಿಟ್ಟು ರೈತ ಸಾವು
ಸಾಂದರ್ಭಿಕ ಚಿತ್ರ PC: PTI

“ಒಟ್ಟಿನಲ್ಲಿ ನಾವು ಇಲ್ಲಿಂದ ಕದಲುವ ಮಾತೇ ಇಲ್ಲ. ಈಗಂತೂ ಜನಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ಹರಿಯಾಣದಿಂದ ಬರುವವರ ಸಂಖ್ಯೆ ಕೂಡ ಹೆಚ್ಚಾಗಿದ್ದು, ಪ್ರತಿಭಟನಾ ಸ್ಥಳ ಮತ್ತಷ್ಟು ವಿಸ್ತರಿಸಲಿದೆ” ಎಂದು ಬಲ್ವಂತ್ ಸಿಂಗ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಹರಿಯಾಣ ಮತ್ತು ಪಂಜಾಬ್ ರೈತರನ್ನು ಬೇರೆ ಮಾಡಲು ಸರ್ಕಾರ ಪ್ರಯತ್ನ ನಡಸಿತು. ಆದರೆ, ಅದು ಸಫಲವಾಗಿಲ್ಲ. ನಾವೆಲ್ಲಾ ಇಲ್ಲಿ ಸಹೋದರರಂತೆ ಇದ್ದೇವೆ. ಇಲ್ಲಿಗೆ ಹರಿಯಾಣದಿಂದ ಹಾಲು ಬರುತ್ತಿದೆ. ಸಂಘಟನೆಗಳು ಬೇರೆ ಬೇರೆ, ರಾಜ್ಯ, ಊರುಗಳು ಬೇರೆ ಬೇರೆ ಆದರೆ ಒಂದು ಒಳ್ಳೆಯ ಕಾರಣಕ್ಕೆ ನಾವೇಲ್ಲಾ ಒಂದಾಗಿದ್ದೇವೆ. ಹಾಗಾಗಿ ಈ ಹೋರಾಟದಲ್ಲಿ ಗೆಲುವು ನಮ್ಮದು ಎನ್ನುತ್ತಾರೆ ಬಂಟಿಡಾ ಜಿಲ್ಲೆಯ ಬಲ್ವಂತ್ ಸಿಂಗ್.

ಇದನ್ನೂ ಓದಿ: ಐತಿಹಾಸಿಕ ರೈತ ಹೋರಾಟದ ತವರಿನಲ್ಲಿ ಹೆಚ್ಚುತ್ತಲೇ ಇದೆ ಹುಮ್ಮಸ್ಸು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...