Homeಮುಖಪುಟನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

- Advertisement -
- Advertisement -

”ಅರೆಬರೆ ಬಟ್ಟೆ ಧರಿಸುವ ಹುಡುಗಿಯರು ರಾಮಾಯಣದಲ್ಲಿ ಬರುವ ಶೂರ್ಪನಖಿ ರಾಕ್ಷಸಿಯ ಹಾಗೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯ ವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಇದೀಗ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ನಮ್ಮ ಉಡುಗೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ’ ಎಂದು ಮೋಯಿತ್ರಾ ಟೀಕಿಸಿದ್ದಾರೆ.

ಮೊಯಿತ್ರಾ ಅವರು ತಮ್ಮ ಹೇಳಿಕೆಯ ವಿಡಿಯೊವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ”ಶುಕ್ರವಾರ ಬೆಳಿಗ್ಗೆ ಬಿಜೆಪಿ ನಾಯಕರು ಮತ್ತು ಭಕ್ತರಿಗೆ ಒಂದು ಸಂದೇಶವಿದೆ. ನಾವು ಬೆಂಗಾಲಿ ಮಹಿಳೆಯರು, ನಮಗೆ ಏನು ಬೇಕೊ ಅದನ್ನು ಹಾಕಿಕೊಳ್ಳುತ್ತೇವೆ, ನಮಗೆ ಏನು ಬೇಕೊ ಅದನ್ನು ತಿನ್ನುತ್ತೇವೆ ಮತ್ತು ನಮಗೆ ಯಾರನ್ನು ಪೂಜಿಸಬೇಕೆನಿಸುತ್ತದೋ ಅವರನ್ನು ಪೂಜಿಸುತ್ತೇವೆ. ನಮ್ಮ ಬಟ್ಟೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಟಿಎಂಸಿ ಖಂಡನೆ:

”ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತವು ನಿರಂತರವಾಗಿ ಹಿಂದಕ್ಕೆ ಸಾಗುತ್ತಿದೆ. ಯುವತಿಯರು ತಮ್ಮಿಷ್ಟದ ಉಡುಗೆ ತೊಡುತ್ತಾರೆಂಬ ಕಾರಣಕ್ಕೆ ಬಿಜೆಪಿ ಪಕ್ಷದ ಮುಖಂಡರು ನಮ್ಮ ದೇಶದ ಮಹಿಳೆಯರನ್ನು ರಾಕ್ಷಸಿಗೆ ಹೋಲಿಕೆ ಮಾಡುತ್ತಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಆರೋಪಿಸಿದೆ.

”ಬಿಜೆಪಿ ನಾಯಕರೊಬ್ಬರು ಬಹಿರಂಗವಾಗಿ ನೀಡಿರುವ ಈ ಕೀಳುಮಟ್ಟದ ಹೇಳಿಕೆಯು ಆ ಪಕ್ಷದ ಕೆಟ್ಟ ಮನಸ್ಥಿತಿಯನ್ನು ತೋರ್ಪಡಿಸುತ್ತದೆ” ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್‌ ಸರ್ಕಾರ್‌ ಟ್ವೀಟ್‌ ಮಾಡಿದ್ದಾರೆ.

”ಉಡುಪುಗಳಲ್ಲಿ ಒಳ್ಳೆಯವು, ಕೆಟ್ಟವು ಎಂಬುದು ಇದೆಯೇ. ಅದನ್ನು ವ್ಯಾಖ್ಯಾನಿಸುವವರು ಯಾರು? ವಿಜಯ ವರ್ಗೀಯರ ಹೇಳಿಕೆ ನಾಚಿಕೆಗೇಡಿನದ್ದು” ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಕಿಡಿ:

”ವಿಜಯ ವರ್ಗೀಯ ಅವರು ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

”ಬಿಜೆಪಿಯಲ್ಲಿ ಮಹಿಳೆಯರನ್ನು ಗೌರವಿಸುವ ಪರಿಪಾಠವಿಲ್ಲ. ನಾವೇನು ತಾಲಿಬಾನಿಗಳ ಆಡಳಿತದಲ್ಲಿದ್ದೇವೆಯೇ? ಏನನ್ನು ಧರಿಸಬೇಕು, ಯಾವುದನ್ನು ತಿನ್ನಬೇಕು, ಯಾರನ್ನು ಭೇಟಿಯಾಗಬೇಕು ಎಂಬುದನ್ನು ಸರ್ಕಾರವು ಮಹಿಳೆಯರಿಗೆ ಹೇಳಬೇಕೆ” ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜ ಪ್ರಶ್ನಿಸಿದ್ದಾರೆ.

”ಕೆಟ್ಟ ಅಭಿರುಚಿಯ ಈ ಹೇಳಿಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರೇಕೆ ಪ್ರತಿಕ್ರಿಯೆ ನೀಡಿಲ್ಲ. ಅವರು ಇನ್ನಾದರೂ ಮೌನ ಮುರಿಯುವರೇ. ಪ್ರತಿದಿನವೂ ಮಹಿಳೆಯರನ್ನು ನಿಂದಿಸುವುದು ಬಿಜೆಪಿಗೆ ಹವ್ಯಾಸವಾಗಿಬಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬಿಜೆಪಿಯಲ್ಲಿ ಇರುವವರಿಗೆ ಶೂರ್ಪಣಕಿ ಮೇಲೆ ಬಹಳ ಪ್ರೀತಿ ಇದ್ದಂತೆ ಕಾಣುತ್ತಿದೆ. ವಿಜಯ ವರ್ಗೀಯ ಅವರ ಹೇಳಿಕೆ ಇದಕ್ಕೆ ಸಾಕ್ಷಿಯಂತಿದೆ. ಬಿಜೆಪಿಯವರ ನಡತೆ ಎಂತಹದ್ದು ಎಂಬುದಕ್ಕೆ ಇದೊಂದು ನಿದರ್ಶನ. ಹೀಗಾಗಿಯೇ ಆ ಪಕ್ಷದ ಬಹುಪಾಲು ಜನಪ್ರತಿನಿಧಿಗಳು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅತ್ಯಾಚಾರಿಗಳಿಗೆಲ್ಲಾ ಬಿಜೆಪಿ ಜೊತೆ ರಾಜಕೀಯ ಸಂಬಂಧ ಇರುವುದೇಕೆ? ಕೈಲಾಶ್‌ ಅವರಂತಹ ವ್ಯಕ್ತಿಗಳು ಮಹಿಳೆಯರನ್ನು ಅವಮಾನಿಸುವ ಧಾಟಿಯ ಹೇಳಿಕೆಗಳನ್ನು ನೀಡುತ್ತಿದ್ದರೂ ಕೂಡ ಆ ಪಕ್ಷದಲ್ಲಿರುವ ಮಹಿಳಾ ನಾಯಕಿಯರು ಅದನ್ನು ಖಂಡಿಸುವ ಧೈರ್ಯ ತೋರದಿರುವುದನ್ನು ಕಂಡು ದಿಗ್ಭ್ರಾಂತಳಾಗಿದ್ದೇನೆ” ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ.

ಮಹಿಳೆಯರು ಯಾವ ಬಗೆಯ ಉಡುಪು ಧರಿಸಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ? ಮಹಿಳೆಯರನ್ನು ನಿಂದಿಸುವ ಹಕ್ಕನ್ನು ನಿಮಗೆ ನೀಡಿದ್ದು ಯಾರು? ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನಟ್ಟಾ ಡಿಸೋಜ ಅವರು ಪ್ರಶ್ನೆ ಮಾಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಕೈಲಾಶ್‌ ವಿಜಯವರ್ಗೀಯ ಅವರು, ”ರಾತ್ರಿ ವೇಳೆ ನಾನು ಹೊರಗೆ ಹೋಗುವಾಗ ಅನೇಕ ಯುವಕ–ಯುವತಿಯರು ಕುಡಿದ ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಅವರನ್ನು ನಿಲ್ಲಿಸಿ ಕೆನ್ನೆಗೆ ಬಾರಿಸಬೇಕೆಂದು ಎನ್ನಿಸುತ್ತದೆ. ಮಹಿಳೆಯರು ಮತ್ತು ಯುವತಿಯರನ್ನು ನಾವು ದೇವತೆಗಳೆಂದು ಕರೆಯುತ್ತೇವೆ. ಯುವತಿಯರು ಅರೆಬರೆ ಬಟ್ಟೆಗಳನ್ನು ಧರಿಸಿ ಓಡಾಡುವ ಅವರು ದೇವತೆಯ ಹಾಗೆ ಕಾಣುವುದಿಲ್ಲ. ರಾಕ್ಷಸಿ ’ಶೂರ್ಪನಖಿ’ ಹಾಗೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...