Homeಮುಖಪುಟನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

- Advertisement -
- Advertisement -

”ಅರೆಬರೆ ಬಟ್ಟೆ ಧರಿಸುವ ಹುಡುಗಿಯರು ರಾಮಾಯಣದಲ್ಲಿ ಬರುವ ಶೂರ್ಪನಖಿ ರಾಕ್ಷಸಿಯ ಹಾಗೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯ ವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಇದೀಗ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ನಮ್ಮ ಉಡುಗೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ’ ಎಂದು ಮೋಯಿತ್ರಾ ಟೀಕಿಸಿದ್ದಾರೆ.

ಮೊಯಿತ್ರಾ ಅವರು ತಮ್ಮ ಹೇಳಿಕೆಯ ವಿಡಿಯೊವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ”ಶುಕ್ರವಾರ ಬೆಳಿಗ್ಗೆ ಬಿಜೆಪಿ ನಾಯಕರು ಮತ್ತು ಭಕ್ತರಿಗೆ ಒಂದು ಸಂದೇಶವಿದೆ. ನಾವು ಬೆಂಗಾಲಿ ಮಹಿಳೆಯರು, ನಮಗೆ ಏನು ಬೇಕೊ ಅದನ್ನು ಹಾಕಿಕೊಳ್ಳುತ್ತೇವೆ, ನಮಗೆ ಏನು ಬೇಕೊ ಅದನ್ನು ತಿನ್ನುತ್ತೇವೆ ಮತ್ತು ನಮಗೆ ಯಾರನ್ನು ಪೂಜಿಸಬೇಕೆನಿಸುತ್ತದೋ ಅವರನ್ನು ಪೂಜಿಸುತ್ತೇವೆ. ನಮ್ಮ ಬಟ್ಟೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಟಿಎಂಸಿ ಖಂಡನೆ:

”ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತವು ನಿರಂತರವಾಗಿ ಹಿಂದಕ್ಕೆ ಸಾಗುತ್ತಿದೆ. ಯುವತಿಯರು ತಮ್ಮಿಷ್ಟದ ಉಡುಗೆ ತೊಡುತ್ತಾರೆಂಬ ಕಾರಣಕ್ಕೆ ಬಿಜೆಪಿ ಪಕ್ಷದ ಮುಖಂಡರು ನಮ್ಮ ದೇಶದ ಮಹಿಳೆಯರನ್ನು ರಾಕ್ಷಸಿಗೆ ಹೋಲಿಕೆ ಮಾಡುತ್ತಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಆರೋಪಿಸಿದೆ.

”ಬಿಜೆಪಿ ನಾಯಕರೊಬ್ಬರು ಬಹಿರಂಗವಾಗಿ ನೀಡಿರುವ ಈ ಕೀಳುಮಟ್ಟದ ಹೇಳಿಕೆಯು ಆ ಪಕ್ಷದ ಕೆಟ್ಟ ಮನಸ್ಥಿತಿಯನ್ನು ತೋರ್ಪಡಿಸುತ್ತದೆ” ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್‌ ಸರ್ಕಾರ್‌ ಟ್ವೀಟ್‌ ಮಾಡಿದ್ದಾರೆ.

”ಉಡುಪುಗಳಲ್ಲಿ ಒಳ್ಳೆಯವು, ಕೆಟ್ಟವು ಎಂಬುದು ಇದೆಯೇ. ಅದನ್ನು ವ್ಯಾಖ್ಯಾನಿಸುವವರು ಯಾರು? ವಿಜಯ ವರ್ಗೀಯರ ಹೇಳಿಕೆ ನಾಚಿಕೆಗೇಡಿನದ್ದು” ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಕಿಡಿ:

”ವಿಜಯ ವರ್ಗೀಯ ಅವರು ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

”ಬಿಜೆಪಿಯಲ್ಲಿ ಮಹಿಳೆಯರನ್ನು ಗೌರವಿಸುವ ಪರಿಪಾಠವಿಲ್ಲ. ನಾವೇನು ತಾಲಿಬಾನಿಗಳ ಆಡಳಿತದಲ್ಲಿದ್ದೇವೆಯೇ? ಏನನ್ನು ಧರಿಸಬೇಕು, ಯಾವುದನ್ನು ತಿನ್ನಬೇಕು, ಯಾರನ್ನು ಭೇಟಿಯಾಗಬೇಕು ಎಂಬುದನ್ನು ಸರ್ಕಾರವು ಮಹಿಳೆಯರಿಗೆ ಹೇಳಬೇಕೆ” ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜ ಪ್ರಶ್ನಿಸಿದ್ದಾರೆ.

”ಕೆಟ್ಟ ಅಭಿರುಚಿಯ ಈ ಹೇಳಿಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರೇಕೆ ಪ್ರತಿಕ್ರಿಯೆ ನೀಡಿಲ್ಲ. ಅವರು ಇನ್ನಾದರೂ ಮೌನ ಮುರಿಯುವರೇ. ಪ್ರತಿದಿನವೂ ಮಹಿಳೆಯರನ್ನು ನಿಂದಿಸುವುದು ಬಿಜೆಪಿಗೆ ಹವ್ಯಾಸವಾಗಿಬಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬಿಜೆಪಿಯಲ್ಲಿ ಇರುವವರಿಗೆ ಶೂರ್ಪಣಕಿ ಮೇಲೆ ಬಹಳ ಪ್ರೀತಿ ಇದ್ದಂತೆ ಕಾಣುತ್ತಿದೆ. ವಿಜಯ ವರ್ಗೀಯ ಅವರ ಹೇಳಿಕೆ ಇದಕ್ಕೆ ಸಾಕ್ಷಿಯಂತಿದೆ. ಬಿಜೆಪಿಯವರ ನಡತೆ ಎಂತಹದ್ದು ಎಂಬುದಕ್ಕೆ ಇದೊಂದು ನಿದರ್ಶನ. ಹೀಗಾಗಿಯೇ ಆ ಪಕ್ಷದ ಬಹುಪಾಲು ಜನಪ್ರತಿನಿಧಿಗಳು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅತ್ಯಾಚಾರಿಗಳಿಗೆಲ್ಲಾ ಬಿಜೆಪಿ ಜೊತೆ ರಾಜಕೀಯ ಸಂಬಂಧ ಇರುವುದೇಕೆ? ಕೈಲಾಶ್‌ ಅವರಂತಹ ವ್ಯಕ್ತಿಗಳು ಮಹಿಳೆಯರನ್ನು ಅವಮಾನಿಸುವ ಧಾಟಿಯ ಹೇಳಿಕೆಗಳನ್ನು ನೀಡುತ್ತಿದ್ದರೂ ಕೂಡ ಆ ಪಕ್ಷದಲ್ಲಿರುವ ಮಹಿಳಾ ನಾಯಕಿಯರು ಅದನ್ನು ಖಂಡಿಸುವ ಧೈರ್ಯ ತೋರದಿರುವುದನ್ನು ಕಂಡು ದಿಗ್ಭ್ರಾಂತಳಾಗಿದ್ದೇನೆ” ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ.

ಮಹಿಳೆಯರು ಯಾವ ಬಗೆಯ ಉಡುಪು ಧರಿಸಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ? ಮಹಿಳೆಯರನ್ನು ನಿಂದಿಸುವ ಹಕ್ಕನ್ನು ನಿಮಗೆ ನೀಡಿದ್ದು ಯಾರು? ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನಟ್ಟಾ ಡಿಸೋಜ ಅವರು ಪ್ರಶ್ನೆ ಮಾಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಕೈಲಾಶ್‌ ವಿಜಯವರ್ಗೀಯ ಅವರು, ”ರಾತ್ರಿ ವೇಳೆ ನಾನು ಹೊರಗೆ ಹೋಗುವಾಗ ಅನೇಕ ಯುವಕ–ಯುವತಿಯರು ಕುಡಿದ ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಅವರನ್ನು ನಿಲ್ಲಿಸಿ ಕೆನ್ನೆಗೆ ಬಾರಿಸಬೇಕೆಂದು ಎನ್ನಿಸುತ್ತದೆ. ಮಹಿಳೆಯರು ಮತ್ತು ಯುವತಿಯರನ್ನು ನಾವು ದೇವತೆಗಳೆಂದು ಕರೆಯುತ್ತೇವೆ. ಯುವತಿಯರು ಅರೆಬರೆ ಬಟ್ಟೆಗಳನ್ನು ಧರಿಸಿ ಓಡಾಡುವ ಅವರು ದೇವತೆಯ ಹಾಗೆ ಕಾಣುವುದಿಲ್ಲ. ರಾಕ್ಷಸಿ ’ಶೂರ್ಪನಖಿ’ ಹಾಗೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...