Homeಮುಖಪುಟನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

- Advertisement -
- Advertisement -

”ಅರೆಬರೆ ಬಟ್ಟೆ ಧರಿಸುವ ಹುಡುಗಿಯರು ರಾಮಾಯಣದಲ್ಲಿ ಬರುವ ಶೂರ್ಪನಖಿ ರಾಕ್ಷಸಿಯ ಹಾಗೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯ ವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಇದೀಗ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ನಮ್ಮ ಉಡುಗೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ’ ಎಂದು ಮೋಯಿತ್ರಾ ಟೀಕಿಸಿದ್ದಾರೆ.

ಮೊಯಿತ್ರಾ ಅವರು ತಮ್ಮ ಹೇಳಿಕೆಯ ವಿಡಿಯೊವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ”ಶುಕ್ರವಾರ ಬೆಳಿಗ್ಗೆ ಬಿಜೆಪಿ ನಾಯಕರು ಮತ್ತು ಭಕ್ತರಿಗೆ ಒಂದು ಸಂದೇಶವಿದೆ. ನಾವು ಬೆಂಗಾಲಿ ಮಹಿಳೆಯರು, ನಮಗೆ ಏನು ಬೇಕೊ ಅದನ್ನು ಹಾಕಿಕೊಳ್ಳುತ್ತೇವೆ, ನಮಗೆ ಏನು ಬೇಕೊ ಅದನ್ನು ತಿನ್ನುತ್ತೇವೆ ಮತ್ತು ನಮಗೆ ಯಾರನ್ನು ಪೂಜಿಸಬೇಕೆನಿಸುತ್ತದೋ ಅವರನ್ನು ಪೂಜಿಸುತ್ತೇವೆ. ನಮ್ಮ ಬಟ್ಟೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಟಿಎಂಸಿ ಖಂಡನೆ:

”ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತವು ನಿರಂತರವಾಗಿ ಹಿಂದಕ್ಕೆ ಸಾಗುತ್ತಿದೆ. ಯುವತಿಯರು ತಮ್ಮಿಷ್ಟದ ಉಡುಗೆ ತೊಡುತ್ತಾರೆಂಬ ಕಾರಣಕ್ಕೆ ಬಿಜೆಪಿ ಪಕ್ಷದ ಮುಖಂಡರು ನಮ್ಮ ದೇಶದ ಮಹಿಳೆಯರನ್ನು ರಾಕ್ಷಸಿಗೆ ಹೋಲಿಕೆ ಮಾಡುತ್ತಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಆರೋಪಿಸಿದೆ.

”ಬಿಜೆಪಿ ನಾಯಕರೊಬ್ಬರು ಬಹಿರಂಗವಾಗಿ ನೀಡಿರುವ ಈ ಕೀಳುಮಟ್ಟದ ಹೇಳಿಕೆಯು ಆ ಪಕ್ಷದ ಕೆಟ್ಟ ಮನಸ್ಥಿತಿಯನ್ನು ತೋರ್ಪಡಿಸುತ್ತದೆ” ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್‌ ಸರ್ಕಾರ್‌ ಟ್ವೀಟ್‌ ಮಾಡಿದ್ದಾರೆ.

”ಉಡುಪುಗಳಲ್ಲಿ ಒಳ್ಳೆಯವು, ಕೆಟ್ಟವು ಎಂಬುದು ಇದೆಯೇ. ಅದನ್ನು ವ್ಯಾಖ್ಯಾನಿಸುವವರು ಯಾರು? ವಿಜಯ ವರ್ಗೀಯರ ಹೇಳಿಕೆ ನಾಚಿಕೆಗೇಡಿನದ್ದು” ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಕಿಡಿ:

”ವಿಜಯ ವರ್ಗೀಯ ಅವರು ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

”ಬಿಜೆಪಿಯಲ್ಲಿ ಮಹಿಳೆಯರನ್ನು ಗೌರವಿಸುವ ಪರಿಪಾಠವಿಲ್ಲ. ನಾವೇನು ತಾಲಿಬಾನಿಗಳ ಆಡಳಿತದಲ್ಲಿದ್ದೇವೆಯೇ? ಏನನ್ನು ಧರಿಸಬೇಕು, ಯಾವುದನ್ನು ತಿನ್ನಬೇಕು, ಯಾರನ್ನು ಭೇಟಿಯಾಗಬೇಕು ಎಂಬುದನ್ನು ಸರ್ಕಾರವು ಮಹಿಳೆಯರಿಗೆ ಹೇಳಬೇಕೆ” ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜ ಪ್ರಶ್ನಿಸಿದ್ದಾರೆ.

”ಕೆಟ್ಟ ಅಭಿರುಚಿಯ ಈ ಹೇಳಿಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರೇಕೆ ಪ್ರತಿಕ್ರಿಯೆ ನೀಡಿಲ್ಲ. ಅವರು ಇನ್ನಾದರೂ ಮೌನ ಮುರಿಯುವರೇ. ಪ್ರತಿದಿನವೂ ಮಹಿಳೆಯರನ್ನು ನಿಂದಿಸುವುದು ಬಿಜೆಪಿಗೆ ಹವ್ಯಾಸವಾಗಿಬಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬಿಜೆಪಿಯಲ್ಲಿ ಇರುವವರಿಗೆ ಶೂರ್ಪಣಕಿ ಮೇಲೆ ಬಹಳ ಪ್ರೀತಿ ಇದ್ದಂತೆ ಕಾಣುತ್ತಿದೆ. ವಿಜಯ ವರ್ಗೀಯ ಅವರ ಹೇಳಿಕೆ ಇದಕ್ಕೆ ಸಾಕ್ಷಿಯಂತಿದೆ. ಬಿಜೆಪಿಯವರ ನಡತೆ ಎಂತಹದ್ದು ಎಂಬುದಕ್ಕೆ ಇದೊಂದು ನಿದರ್ಶನ. ಹೀಗಾಗಿಯೇ ಆ ಪಕ್ಷದ ಬಹುಪಾಲು ಜನಪ್ರತಿನಿಧಿಗಳು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅತ್ಯಾಚಾರಿಗಳಿಗೆಲ್ಲಾ ಬಿಜೆಪಿ ಜೊತೆ ರಾಜಕೀಯ ಸಂಬಂಧ ಇರುವುದೇಕೆ? ಕೈಲಾಶ್‌ ಅವರಂತಹ ವ್ಯಕ್ತಿಗಳು ಮಹಿಳೆಯರನ್ನು ಅವಮಾನಿಸುವ ಧಾಟಿಯ ಹೇಳಿಕೆಗಳನ್ನು ನೀಡುತ್ತಿದ್ದರೂ ಕೂಡ ಆ ಪಕ್ಷದಲ್ಲಿರುವ ಮಹಿಳಾ ನಾಯಕಿಯರು ಅದನ್ನು ಖಂಡಿಸುವ ಧೈರ್ಯ ತೋರದಿರುವುದನ್ನು ಕಂಡು ದಿಗ್ಭ್ರಾಂತಳಾಗಿದ್ದೇನೆ” ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ.

ಮಹಿಳೆಯರು ಯಾವ ಬಗೆಯ ಉಡುಪು ಧರಿಸಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ? ಮಹಿಳೆಯರನ್ನು ನಿಂದಿಸುವ ಹಕ್ಕನ್ನು ನಿಮಗೆ ನೀಡಿದ್ದು ಯಾರು? ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನಟ್ಟಾ ಡಿಸೋಜ ಅವರು ಪ್ರಶ್ನೆ ಮಾಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಕೈಲಾಶ್‌ ವಿಜಯವರ್ಗೀಯ ಅವರು, ”ರಾತ್ರಿ ವೇಳೆ ನಾನು ಹೊರಗೆ ಹೋಗುವಾಗ ಅನೇಕ ಯುವಕ–ಯುವತಿಯರು ಕುಡಿದ ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಅವರನ್ನು ನಿಲ್ಲಿಸಿ ಕೆನ್ನೆಗೆ ಬಾರಿಸಬೇಕೆಂದು ಎನ್ನಿಸುತ್ತದೆ. ಮಹಿಳೆಯರು ಮತ್ತು ಯುವತಿಯರನ್ನು ನಾವು ದೇವತೆಗಳೆಂದು ಕರೆಯುತ್ತೇವೆ. ಯುವತಿಯರು ಅರೆಬರೆ ಬಟ್ಟೆಗಳನ್ನು ಧರಿಸಿ ಓಡಾಡುವ ಅವರು ದೇವತೆಯ ಹಾಗೆ ಕಾಣುವುದಿಲ್ಲ. ರಾಕ್ಷಸಿ ’ಶೂರ್ಪನಖಿ’ ಹಾಗೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...