Homeಮುಖಪುಟನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

- Advertisement -
- Advertisement -

”ಅರೆಬರೆ ಬಟ್ಟೆ ಧರಿಸುವ ಹುಡುಗಿಯರು ರಾಮಾಯಣದಲ್ಲಿ ಬರುವ ಶೂರ್ಪನಖಿ ರಾಕ್ಷಸಿಯ ಹಾಗೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯ ವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಇದೀಗ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ನಮ್ಮ ಉಡುಗೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ’ ಎಂದು ಮೋಯಿತ್ರಾ ಟೀಕಿಸಿದ್ದಾರೆ.

ಮೊಯಿತ್ರಾ ಅವರು ತಮ್ಮ ಹೇಳಿಕೆಯ ವಿಡಿಯೊವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ”ಶುಕ್ರವಾರ ಬೆಳಿಗ್ಗೆ ಬಿಜೆಪಿ ನಾಯಕರು ಮತ್ತು ಭಕ್ತರಿಗೆ ಒಂದು ಸಂದೇಶವಿದೆ. ನಾವು ಬೆಂಗಾಲಿ ಮಹಿಳೆಯರು, ನಮಗೆ ಏನು ಬೇಕೊ ಅದನ್ನು ಹಾಕಿಕೊಳ್ಳುತ್ತೇವೆ, ನಮಗೆ ಏನು ಬೇಕೊ ಅದನ್ನು ತಿನ್ನುತ್ತೇವೆ ಮತ್ತು ನಮಗೆ ಯಾರನ್ನು ಪೂಜಿಸಬೇಕೆನಿಸುತ್ತದೋ ಅವರನ್ನು ಪೂಜಿಸುತ್ತೇವೆ. ನಮ್ಮ ಬಟ್ಟೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಟಿಎಂಸಿ ಖಂಡನೆ:

”ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತವು ನಿರಂತರವಾಗಿ ಹಿಂದಕ್ಕೆ ಸಾಗುತ್ತಿದೆ. ಯುವತಿಯರು ತಮ್ಮಿಷ್ಟದ ಉಡುಗೆ ತೊಡುತ್ತಾರೆಂಬ ಕಾರಣಕ್ಕೆ ಬಿಜೆಪಿ ಪಕ್ಷದ ಮುಖಂಡರು ನಮ್ಮ ದೇಶದ ಮಹಿಳೆಯರನ್ನು ರಾಕ್ಷಸಿಗೆ ಹೋಲಿಕೆ ಮಾಡುತ್ತಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಆರೋಪಿಸಿದೆ.

”ಬಿಜೆಪಿ ನಾಯಕರೊಬ್ಬರು ಬಹಿರಂಗವಾಗಿ ನೀಡಿರುವ ಈ ಕೀಳುಮಟ್ಟದ ಹೇಳಿಕೆಯು ಆ ಪಕ್ಷದ ಕೆಟ್ಟ ಮನಸ್ಥಿತಿಯನ್ನು ತೋರ್ಪಡಿಸುತ್ತದೆ” ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್‌ ಸರ್ಕಾರ್‌ ಟ್ವೀಟ್‌ ಮಾಡಿದ್ದಾರೆ.

”ಉಡುಪುಗಳಲ್ಲಿ ಒಳ್ಳೆಯವು, ಕೆಟ್ಟವು ಎಂಬುದು ಇದೆಯೇ. ಅದನ್ನು ವ್ಯಾಖ್ಯಾನಿಸುವವರು ಯಾರು? ವಿಜಯ ವರ್ಗೀಯರ ಹೇಳಿಕೆ ನಾಚಿಕೆಗೇಡಿನದ್ದು” ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಕಿಡಿ:

”ವಿಜಯ ವರ್ಗೀಯ ಅವರು ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

”ಬಿಜೆಪಿಯಲ್ಲಿ ಮಹಿಳೆಯರನ್ನು ಗೌರವಿಸುವ ಪರಿಪಾಠವಿಲ್ಲ. ನಾವೇನು ತಾಲಿಬಾನಿಗಳ ಆಡಳಿತದಲ್ಲಿದ್ದೇವೆಯೇ? ಏನನ್ನು ಧರಿಸಬೇಕು, ಯಾವುದನ್ನು ತಿನ್ನಬೇಕು, ಯಾರನ್ನು ಭೇಟಿಯಾಗಬೇಕು ಎಂಬುದನ್ನು ಸರ್ಕಾರವು ಮಹಿಳೆಯರಿಗೆ ಹೇಳಬೇಕೆ” ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜ ಪ್ರಶ್ನಿಸಿದ್ದಾರೆ.

”ಕೆಟ್ಟ ಅಭಿರುಚಿಯ ಈ ಹೇಳಿಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರೇಕೆ ಪ್ರತಿಕ್ರಿಯೆ ನೀಡಿಲ್ಲ. ಅವರು ಇನ್ನಾದರೂ ಮೌನ ಮುರಿಯುವರೇ. ಪ್ರತಿದಿನವೂ ಮಹಿಳೆಯರನ್ನು ನಿಂದಿಸುವುದು ಬಿಜೆಪಿಗೆ ಹವ್ಯಾಸವಾಗಿಬಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬಿಜೆಪಿಯಲ್ಲಿ ಇರುವವರಿಗೆ ಶೂರ್ಪಣಕಿ ಮೇಲೆ ಬಹಳ ಪ್ರೀತಿ ಇದ್ದಂತೆ ಕಾಣುತ್ತಿದೆ. ವಿಜಯ ವರ್ಗೀಯ ಅವರ ಹೇಳಿಕೆ ಇದಕ್ಕೆ ಸಾಕ್ಷಿಯಂತಿದೆ. ಬಿಜೆಪಿಯವರ ನಡತೆ ಎಂತಹದ್ದು ಎಂಬುದಕ್ಕೆ ಇದೊಂದು ನಿದರ್ಶನ. ಹೀಗಾಗಿಯೇ ಆ ಪಕ್ಷದ ಬಹುಪಾಲು ಜನಪ್ರತಿನಿಧಿಗಳು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅತ್ಯಾಚಾರಿಗಳಿಗೆಲ್ಲಾ ಬಿಜೆಪಿ ಜೊತೆ ರಾಜಕೀಯ ಸಂಬಂಧ ಇರುವುದೇಕೆ? ಕೈಲಾಶ್‌ ಅವರಂತಹ ವ್ಯಕ್ತಿಗಳು ಮಹಿಳೆಯರನ್ನು ಅವಮಾನಿಸುವ ಧಾಟಿಯ ಹೇಳಿಕೆಗಳನ್ನು ನೀಡುತ್ತಿದ್ದರೂ ಕೂಡ ಆ ಪಕ್ಷದಲ್ಲಿರುವ ಮಹಿಳಾ ನಾಯಕಿಯರು ಅದನ್ನು ಖಂಡಿಸುವ ಧೈರ್ಯ ತೋರದಿರುವುದನ್ನು ಕಂಡು ದಿಗ್ಭ್ರಾಂತಳಾಗಿದ್ದೇನೆ” ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ.

ಮಹಿಳೆಯರು ಯಾವ ಬಗೆಯ ಉಡುಪು ಧರಿಸಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ? ಮಹಿಳೆಯರನ್ನು ನಿಂದಿಸುವ ಹಕ್ಕನ್ನು ನಿಮಗೆ ನೀಡಿದ್ದು ಯಾರು? ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನಟ್ಟಾ ಡಿಸೋಜ ಅವರು ಪ್ರಶ್ನೆ ಮಾಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಕೈಲಾಶ್‌ ವಿಜಯವರ್ಗೀಯ ಅವರು, ”ರಾತ್ರಿ ವೇಳೆ ನಾನು ಹೊರಗೆ ಹೋಗುವಾಗ ಅನೇಕ ಯುವಕ–ಯುವತಿಯರು ಕುಡಿದ ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಅವರನ್ನು ನಿಲ್ಲಿಸಿ ಕೆನ್ನೆಗೆ ಬಾರಿಸಬೇಕೆಂದು ಎನ್ನಿಸುತ್ತದೆ. ಮಹಿಳೆಯರು ಮತ್ತು ಯುವತಿಯರನ್ನು ನಾವು ದೇವತೆಗಳೆಂದು ಕರೆಯುತ್ತೇವೆ. ಯುವತಿಯರು ಅರೆಬರೆ ಬಟ್ಟೆಗಳನ್ನು ಧರಿಸಿ ಓಡಾಡುವ ಅವರು ದೇವತೆಯ ಹಾಗೆ ಕಾಣುವುದಿಲ್ಲ. ರಾಕ್ಷಸಿ ’ಶೂರ್ಪನಖಿ’ ಹಾಗೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...