Homeಮುಖಪುಟನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

- Advertisement -
- Advertisement -

”ಅರೆಬರೆ ಬಟ್ಟೆ ಧರಿಸುವ ಹುಡುಗಿಯರು ರಾಮಾಯಣದಲ್ಲಿ ಬರುವ ಶೂರ್ಪನಖಿ ರಾಕ್ಷಸಿಯ ಹಾಗೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯ ವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಇದೀಗ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ನಮ್ಮ ಉಡುಗೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ’ ಎಂದು ಮೋಯಿತ್ರಾ ಟೀಕಿಸಿದ್ದಾರೆ.

ಮೊಯಿತ್ರಾ ಅವರು ತಮ್ಮ ಹೇಳಿಕೆಯ ವಿಡಿಯೊವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ”ಶುಕ್ರವಾರ ಬೆಳಿಗ್ಗೆ ಬಿಜೆಪಿ ನಾಯಕರು ಮತ್ತು ಭಕ್ತರಿಗೆ ಒಂದು ಸಂದೇಶವಿದೆ. ನಾವು ಬೆಂಗಾಲಿ ಮಹಿಳೆಯರು, ನಮಗೆ ಏನು ಬೇಕೊ ಅದನ್ನು ಹಾಕಿಕೊಳ್ಳುತ್ತೇವೆ, ನಮಗೆ ಏನು ಬೇಕೊ ಅದನ್ನು ತಿನ್ನುತ್ತೇವೆ ಮತ್ತು ನಮಗೆ ಯಾರನ್ನು ಪೂಜಿಸಬೇಕೆನಿಸುತ್ತದೋ ಅವರನ್ನು ಪೂಜಿಸುತ್ತೇವೆ. ನಮ್ಮ ಬಟ್ಟೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಟಿಎಂಸಿ ಖಂಡನೆ:

”ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತವು ನಿರಂತರವಾಗಿ ಹಿಂದಕ್ಕೆ ಸಾಗುತ್ತಿದೆ. ಯುವತಿಯರು ತಮ್ಮಿಷ್ಟದ ಉಡುಗೆ ತೊಡುತ್ತಾರೆಂಬ ಕಾರಣಕ್ಕೆ ಬಿಜೆಪಿ ಪಕ್ಷದ ಮುಖಂಡರು ನಮ್ಮ ದೇಶದ ಮಹಿಳೆಯರನ್ನು ರಾಕ್ಷಸಿಗೆ ಹೋಲಿಕೆ ಮಾಡುತ್ತಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಆರೋಪಿಸಿದೆ.

”ಬಿಜೆಪಿ ನಾಯಕರೊಬ್ಬರು ಬಹಿರಂಗವಾಗಿ ನೀಡಿರುವ ಈ ಕೀಳುಮಟ್ಟದ ಹೇಳಿಕೆಯು ಆ ಪಕ್ಷದ ಕೆಟ್ಟ ಮನಸ್ಥಿತಿಯನ್ನು ತೋರ್ಪಡಿಸುತ್ತದೆ” ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್‌ ಸರ್ಕಾರ್‌ ಟ್ವೀಟ್‌ ಮಾಡಿದ್ದಾರೆ.

”ಉಡುಪುಗಳಲ್ಲಿ ಒಳ್ಳೆಯವು, ಕೆಟ್ಟವು ಎಂಬುದು ಇದೆಯೇ. ಅದನ್ನು ವ್ಯಾಖ್ಯಾನಿಸುವವರು ಯಾರು? ವಿಜಯ ವರ್ಗೀಯರ ಹೇಳಿಕೆ ನಾಚಿಕೆಗೇಡಿನದ್ದು” ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಕಿಡಿ:

”ವಿಜಯ ವರ್ಗೀಯ ಅವರು ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

”ಬಿಜೆಪಿಯಲ್ಲಿ ಮಹಿಳೆಯರನ್ನು ಗೌರವಿಸುವ ಪರಿಪಾಠವಿಲ್ಲ. ನಾವೇನು ತಾಲಿಬಾನಿಗಳ ಆಡಳಿತದಲ್ಲಿದ್ದೇವೆಯೇ? ಏನನ್ನು ಧರಿಸಬೇಕು, ಯಾವುದನ್ನು ತಿನ್ನಬೇಕು, ಯಾರನ್ನು ಭೇಟಿಯಾಗಬೇಕು ಎಂಬುದನ್ನು ಸರ್ಕಾರವು ಮಹಿಳೆಯರಿಗೆ ಹೇಳಬೇಕೆ” ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜ ಪ್ರಶ್ನಿಸಿದ್ದಾರೆ.

”ಕೆಟ್ಟ ಅಭಿರುಚಿಯ ಈ ಹೇಳಿಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರೇಕೆ ಪ್ರತಿಕ್ರಿಯೆ ನೀಡಿಲ್ಲ. ಅವರು ಇನ್ನಾದರೂ ಮೌನ ಮುರಿಯುವರೇ. ಪ್ರತಿದಿನವೂ ಮಹಿಳೆಯರನ್ನು ನಿಂದಿಸುವುದು ಬಿಜೆಪಿಗೆ ಹವ್ಯಾಸವಾಗಿಬಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬಿಜೆಪಿಯಲ್ಲಿ ಇರುವವರಿಗೆ ಶೂರ್ಪಣಕಿ ಮೇಲೆ ಬಹಳ ಪ್ರೀತಿ ಇದ್ದಂತೆ ಕಾಣುತ್ತಿದೆ. ವಿಜಯ ವರ್ಗೀಯ ಅವರ ಹೇಳಿಕೆ ಇದಕ್ಕೆ ಸಾಕ್ಷಿಯಂತಿದೆ. ಬಿಜೆಪಿಯವರ ನಡತೆ ಎಂತಹದ್ದು ಎಂಬುದಕ್ಕೆ ಇದೊಂದು ನಿದರ್ಶನ. ಹೀಗಾಗಿಯೇ ಆ ಪಕ್ಷದ ಬಹುಪಾಲು ಜನಪ್ರತಿನಿಧಿಗಳು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅತ್ಯಾಚಾರಿಗಳಿಗೆಲ್ಲಾ ಬಿಜೆಪಿ ಜೊತೆ ರಾಜಕೀಯ ಸಂಬಂಧ ಇರುವುದೇಕೆ? ಕೈಲಾಶ್‌ ಅವರಂತಹ ವ್ಯಕ್ತಿಗಳು ಮಹಿಳೆಯರನ್ನು ಅವಮಾನಿಸುವ ಧಾಟಿಯ ಹೇಳಿಕೆಗಳನ್ನು ನೀಡುತ್ತಿದ್ದರೂ ಕೂಡ ಆ ಪಕ್ಷದಲ್ಲಿರುವ ಮಹಿಳಾ ನಾಯಕಿಯರು ಅದನ್ನು ಖಂಡಿಸುವ ಧೈರ್ಯ ತೋರದಿರುವುದನ್ನು ಕಂಡು ದಿಗ್ಭ್ರಾಂತಳಾಗಿದ್ದೇನೆ” ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ.

ಮಹಿಳೆಯರು ಯಾವ ಬಗೆಯ ಉಡುಪು ಧರಿಸಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ? ಮಹಿಳೆಯರನ್ನು ನಿಂದಿಸುವ ಹಕ್ಕನ್ನು ನಿಮಗೆ ನೀಡಿದ್ದು ಯಾರು? ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನಟ್ಟಾ ಡಿಸೋಜ ಅವರು ಪ್ರಶ್ನೆ ಮಾಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಕೈಲಾಶ್‌ ವಿಜಯವರ್ಗೀಯ ಅವರು, ”ರಾತ್ರಿ ವೇಳೆ ನಾನು ಹೊರಗೆ ಹೋಗುವಾಗ ಅನೇಕ ಯುವಕ–ಯುವತಿಯರು ಕುಡಿದ ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಅವರನ್ನು ನಿಲ್ಲಿಸಿ ಕೆನ್ನೆಗೆ ಬಾರಿಸಬೇಕೆಂದು ಎನ್ನಿಸುತ್ತದೆ. ಮಹಿಳೆಯರು ಮತ್ತು ಯುವತಿಯರನ್ನು ನಾವು ದೇವತೆಗಳೆಂದು ಕರೆಯುತ್ತೇವೆ. ಯುವತಿಯರು ಅರೆಬರೆ ಬಟ್ಟೆಗಳನ್ನು ಧರಿಸಿ ಓಡಾಡುವ ಅವರು ದೇವತೆಯ ಹಾಗೆ ಕಾಣುವುದಿಲ್ಲ. ರಾಕ್ಷಸಿ ’ಶೂರ್ಪನಖಿ’ ಹಾಗೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...