Homeಮುಖಪುಟನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

- Advertisement -
- Advertisement -

”ಅರೆಬರೆ ಬಟ್ಟೆ ಧರಿಸುವ ಹುಡುಗಿಯರು ರಾಮಾಯಣದಲ್ಲಿ ಬರುವ ಶೂರ್ಪನಖಿ ರಾಕ್ಷಸಿಯ ಹಾಗೆ ಕಾಣುತ್ತಾರೆ” ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್‌ ವಿಜಯ ವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಇದೀಗ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಸೇರಿದಂತೆ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

‘ನಮ್ಮ ಉಡುಗೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ’ ಎಂದು ಮೋಯಿತ್ರಾ ಟೀಕಿಸಿದ್ದಾರೆ.

ಮೊಯಿತ್ರಾ ಅವರು ತಮ್ಮ ಹೇಳಿಕೆಯ ವಿಡಿಯೊವನ್ನು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದು, ”ಶುಕ್ರವಾರ ಬೆಳಿಗ್ಗೆ ಬಿಜೆಪಿ ನಾಯಕರು ಮತ್ತು ಭಕ್ತರಿಗೆ ಒಂದು ಸಂದೇಶವಿದೆ. ನಾವು ಬೆಂಗಾಲಿ ಮಹಿಳೆಯರು, ನಮಗೆ ಏನು ಬೇಕೊ ಅದನ್ನು ಹಾಕಿಕೊಳ್ಳುತ್ತೇವೆ, ನಮಗೆ ಏನು ಬೇಕೊ ಅದನ್ನು ತಿನ್ನುತ್ತೇವೆ ಮತ್ತು ನಮಗೆ ಯಾರನ್ನು ಪೂಜಿಸಬೇಕೆನಿಸುತ್ತದೋ ಅವರನ್ನು ಪೂಜಿಸುತ್ತೇವೆ. ನಮ್ಮ ಬಟ್ಟೆಗಳು ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕಾಗಿದೆ ಎಂದು ಅವರು ಕಿಡಿಕಾರಿದ್ದಾರೆ.

ಟಿಎಂಸಿ ಖಂಡನೆ:

”ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತವು ನಿರಂತರವಾಗಿ ಹಿಂದಕ್ಕೆ ಸಾಗುತ್ತಿದೆ. ಯುವತಿಯರು ತಮ್ಮಿಷ್ಟದ ಉಡುಗೆ ತೊಡುತ್ತಾರೆಂಬ ಕಾರಣಕ್ಕೆ ಬಿಜೆಪಿ ಪಕ್ಷದ ಮುಖಂಡರು ನಮ್ಮ ದೇಶದ ಮಹಿಳೆಯರನ್ನು ರಾಕ್ಷಸಿಗೆ ಹೋಲಿಕೆ ಮಾಡುತ್ತಿದ್ದಾರೆ” ಎಂದು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಆರೋಪಿಸಿದೆ.

”ಬಿಜೆಪಿ ನಾಯಕರೊಬ್ಬರು ಬಹಿರಂಗವಾಗಿ ನೀಡಿರುವ ಈ ಕೀಳುಮಟ್ಟದ ಹೇಳಿಕೆಯು ಆ ಪಕ್ಷದ ಕೆಟ್ಟ ಮನಸ್ಥಿತಿಯನ್ನು ತೋರ್ಪಡಿಸುತ್ತದೆ” ಎಂದು ಟಿಎಂಸಿ ರಾಜ್ಯಸಭಾ ಸದಸ್ಯ ಜವಾಹರ್‌ ಸರ್ಕಾರ್‌ ಟ್ವೀಟ್‌ ಮಾಡಿದ್ದಾರೆ.

”ಉಡುಪುಗಳಲ್ಲಿ ಒಳ್ಳೆಯವು, ಕೆಟ್ಟವು ಎಂಬುದು ಇದೆಯೇ. ಅದನ್ನು ವ್ಯಾಖ್ಯಾನಿಸುವವರು ಯಾರು? ವಿಜಯ ವರ್ಗೀಯರ ಹೇಳಿಕೆ ನಾಚಿಕೆಗೇಡಿನದ್ದು” ಎಂದು ಟಿಎಂಸಿ ರಾಜ್ಯಸಭಾ ಸದಸ್ಯೆ ಸುಶ್ಮಿತಾ ದೇವ್‌ ಟೀಕಿಸಿದ್ದಾರೆ.

ಕಾಂಗ್ರೆಸ್‌ ಕಿಡಿ:

”ವಿಜಯ ವರ್ಗೀಯ ಅವರು ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಇದು ಬಿಜೆಪಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ” ಎಂದು ಕಾಂಗ್ರೆಸ್‌ ಕಿಡಿಕಾರಿದೆ.

”ಬಿಜೆಪಿಯಲ್ಲಿ ಮಹಿಳೆಯರನ್ನು ಗೌರವಿಸುವ ಪರಿಪಾಠವಿಲ್ಲ. ನಾವೇನು ತಾಲಿಬಾನಿಗಳ ಆಡಳಿತದಲ್ಲಿದ್ದೇವೆಯೇ? ಏನನ್ನು ಧರಿಸಬೇಕು, ಯಾವುದನ್ನು ತಿನ್ನಬೇಕು, ಯಾರನ್ನು ಭೇಟಿಯಾಗಬೇಕು ಎಂಬುದನ್ನು ಸರ್ಕಾರವು ಮಹಿಳೆಯರಿಗೆ ಹೇಳಬೇಕೆ” ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನೆಟ್ಟಾ ಡಿಸೋಜ ಪ್ರಶ್ನಿಸಿದ್ದಾರೆ.

”ಕೆಟ್ಟ ಅಭಿರುಚಿಯ ಈ ಹೇಳಿಕೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರೇಕೆ ಪ್ರತಿಕ್ರಿಯೆ ನೀಡಿಲ್ಲ. ಅವರು ಇನ್ನಾದರೂ ಮೌನ ಮುರಿಯುವರೇ. ಪ್ರತಿದಿನವೂ ಮಹಿಳೆಯರನ್ನು ನಿಂದಿಸುವುದು ಬಿಜೆಪಿಗೆ ಹವ್ಯಾಸವಾಗಿಬಿಟ್ಟಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಬಿಜೆಪಿಯಲ್ಲಿ ಇರುವವರಿಗೆ ಶೂರ್ಪಣಕಿ ಮೇಲೆ ಬಹಳ ಪ್ರೀತಿ ಇದ್ದಂತೆ ಕಾಣುತ್ತಿದೆ. ವಿಜಯ ವರ್ಗೀಯ ಅವರ ಹೇಳಿಕೆ ಇದಕ್ಕೆ ಸಾಕ್ಷಿಯಂತಿದೆ. ಬಿಜೆಪಿಯವರ ನಡತೆ ಎಂತಹದ್ದು ಎಂಬುದಕ್ಕೆ ಇದೊಂದು ನಿದರ್ಶನ. ಹೀಗಾಗಿಯೇ ಆ ಪಕ್ಷದ ಬಹುಪಾಲು ಜನಪ್ರತಿನಿಧಿಗಳು ಕ್ರಿಮಿನಲ್‌ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅತ್ಯಾಚಾರಿಗಳಿಗೆಲ್ಲಾ ಬಿಜೆಪಿ ಜೊತೆ ರಾಜಕೀಯ ಸಂಬಂಧ ಇರುವುದೇಕೆ? ಕೈಲಾಶ್‌ ಅವರಂತಹ ವ್ಯಕ್ತಿಗಳು ಮಹಿಳೆಯರನ್ನು ಅವಮಾನಿಸುವ ಧಾಟಿಯ ಹೇಳಿಕೆಗಳನ್ನು ನೀಡುತ್ತಿದ್ದರೂ ಕೂಡ ಆ ಪಕ್ಷದಲ್ಲಿರುವ ಮಹಿಳಾ ನಾಯಕಿಯರು ಅದನ್ನು ಖಂಡಿಸುವ ಧೈರ್ಯ ತೋರದಿರುವುದನ್ನು ಕಂಡು ದಿಗ್ಭ್ರಾಂತಳಾಗಿದ್ದೇನೆ” ಎಂದು ಕಾಂಗ್ರೆಸ್‌ ವಕ್ತಾರೆ ಸುಪ್ರಿಯಾ ಶ್ರೀನಾಥೆ ಹೇಳಿದ್ದಾರೆ.

ಮಹಿಳೆಯರು ಯಾವ ಬಗೆಯ ಉಡುಪು ಧರಿಸಬೇಕು ಎಂಬುದನ್ನು ಬಿಜೆಪಿ ನಿರ್ಧರಿಸುತ್ತದೆಯೇ? ಮಹಿಳೆಯರನ್ನು ನಿಂದಿಸುವ ಹಕ್ಕನ್ನು ನಿಮಗೆ ನೀಡಿದ್ದು ಯಾರು? ಎಂದು ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ನಟ್ಟಾ ಡಿಸೋಜ ಅವರು ಪ್ರಶ್ನೆ ಮಾಡಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಕೈಲಾಶ್‌ ವಿಜಯವರ್ಗೀಯ ಅವರು, ”ರಾತ್ರಿ ವೇಳೆ ನಾನು ಹೊರಗೆ ಹೋಗುವಾಗ ಅನೇಕ ಯುವಕ–ಯುವತಿಯರು ಕುಡಿದ ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಅವರನ್ನು ನಿಲ್ಲಿಸಿ ಕೆನ್ನೆಗೆ ಬಾರಿಸಬೇಕೆಂದು ಎನ್ನಿಸುತ್ತದೆ. ಮಹಿಳೆಯರು ಮತ್ತು ಯುವತಿಯರನ್ನು ನಾವು ದೇವತೆಗಳೆಂದು ಕರೆಯುತ್ತೇವೆ. ಯುವತಿಯರು ಅರೆಬರೆ ಬಟ್ಟೆಗಳನ್ನು ಧರಿಸಿ ಓಡಾಡುವ ಅವರು ದೇವತೆಯ ಹಾಗೆ ಕಾಣುವುದಿಲ್ಲ. ರಾಕ್ಷಸಿ ’ಶೂರ್ಪನಖಿ’ ಹಾಗೆ ಕಾಣುತ್ತಾರೆ ಎಂದು ಹೇಳಿಕೆ ನೀಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...