Homeಅಂತರಾಷ್ಟ್ರೀಯ'ನಮ್ಮ ದೇಶ ಮಾರಾಟಕ್ಕಿಲ್ಲ': ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

- Advertisement -
- Advertisement -

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು ಜನರು, ‘ಗ್ರೀನ್‌ಲ್ಯಾಂಡ್‌ ಮಾರಾಟಕ್ಕಿಲ್ಲ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದು ಗ್ರೀನ್‌ಲ್ಯಾಂಡ್ ಇತಿಹಾಸದಲ್ಲೇ ನಡೆದ ಅತಿದೊಡ್ಡ ಪ್ರತಿಭಟನೆ ಎಂದು ಹೇಳಲಾಗುತ್ತಿದೆ.

ಗ್ರೀನ್‌ಲ್ಯಾಂಡ್‌ನ ಪ್ರಧಾನ ಮಂತ್ರಿ ಜೆನ್ಸ್-ಫ್ರೆಡೆರಿಕ್ ನೀಲ್ಸನ್ ಅವರೇ ಸ್ವತಃ ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ದೇಶದ ಸ್ವಾಯತ್ತತೆಯನ್ನು ರಕ್ಷಿಸುವ ಭರವಸೆ ನೀಡಿದ್ದಾರೆ.

ಗ್ರೀನ್‌ಲ್ಯಾಂಡ್‌ನ ರಾಜಧಾನಿ ನೂಕ್ ನಗರದ ಜನಸಂಖ್ಯೆ ಸುಮಾರು 20,000 ಆಗಿದ್ದು, ಪ್ರತಿಭಟನೆಯಲ್ಲಿ ಅದರ ನಾಲ್ಕನೇ ಒಂದು ಭಾಗದಷ್ಟು ಜನರು (ಸುಮಾರು 5,000ಕ್ಕೂ ಹೆಚ್ಚು ಜನರು) ಭಾಗವಹಿಸಿದ್ದರು. ಚಳಿ ಮತ್ತು ಮಳೆಯನ್ನೂ ಲೆಕ್ಕಿಸದೆ ಜನರು ಸಾಂಪ್ರದಾಯಿಕ ಇನ್ಯೂಟ್ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನಾಕಾರರು “Make America Go Away” (ಅಮೆರಿಕಾವನ್ನು ದೂರವಿಡಿ) ಎಂದು ಬರೆದ ಕೆಂಪು ಟೋಪಿಗಳನ್ನು ಧರಿಸಿದ್ದರು. ಅಷ್ಟೇ ಅಲ್ಲದೆ, “Yankee Go Home” ಮತ್ತು “Kalaallit Nunaat” (ಗ್ರೀನ್‌ಲ್ಯಾಂಡ್‌ನ ಸ್ಥಳೀಯ ಹೆಸರು) ಎಂಬ ಘೋಷಣೆಗಳು ಮೊಳಗಿವೆ ಎಂದು ವರದಿ ಉಲ್ಲೇಖಿಸಿದೆ.

ಗ್ರೀನ್‌ಲ್ಯಾಂಡ್‌ಗೆ ಬೆಂಬಲ ಸೂಚಿಸಿ ಡೆನ್ಮಾರ್ಕ್‌ನ ರಾಜಧಾನಿ ಕೋಪನ್‌ಹೆಗನ್‌ನಲ್ಲಿ ಮತ್ತು ಡೆನ್ಮಾರ್ಕ್‌ಗೆ ಸೇರಿದ ಇತರ ಸ್ಥಳಗಳಲ್ಲಿ ಜನರು ಮೆರವಣಿಗೆ ಮತ್ತು ರ‍್ಯಾಲಿ ನಡೆಸಿದ್ದಾರೆ. ಕೆನಡಾದಲ್ಲಿರುವ ‘ನುನಾವುಟ್’ ಎಂಬ ಇನ್ಯೂಟ್ ಜನರು (ಗ್ರೀನ್‌ಲ್ಯಾಂಡ್‌ನ ಸ್ಥಳೀಯರಂತೆಯೇ ಇರುವ ಜನಾಂಗ) ಆಡಳಿತ ನಡೆಸುವ ಪ್ರದೇಶದ ರಾಜಧಾನಿಯಲ್ಲಿಯೂ ಸಹ ಗ್ರೀನ್‌ಲ್ಯಾಂಡ್‌ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಯುರೋಪ್ ರಾಷ್ಟ್ರಗಳ ಬೆಂಬಲ

ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಫ್ರಾನ್ಸ್, ಜರ್ಮನಿ, ಬ್ರಿಟನ್, ಸ್ವೀಡನ್ ಮತ್ತು ನಾರ್ವೆ ಸೇರಿದಂತೆ ಹಲವು ದೇಶಗಳು ಗ್ರೀನ್‌ಲ್ಯಾಂಡ್‌ನ ಭದ್ರತೆಗಾಗಿ ‘ಆಪರೇಷನ್ ಆರ್ಕ್ಟಿಕ್ ಎಂಡ್ಯೂರೆನ್ಸ್’ ಎಂಬ ಮಿಲಿಟರಿ ಅಭ್ಯಾಸದ ಭಾಗವಾಗಿ ತಮ್ಮ ಸೈನಿಕರನ್ನು ಅಲ್ಲಿಗೆ ಕಳುಹಿಸಿವೆ.

ಪ್ರತಿಭಟನೆಗಳ ನಡುವೆಯೇ, ಗ್ರೀನ್‌ಲ್ಯಾಂಡ್ ಹಸ್ತಾಂತರಕ್ಕೆ ಒಪ್ಪದ ಯುರೋಪಿಯನ್ ರಾಷ್ಟ್ರಗಳ ಮೇಲೆ ಟ್ರಂಪ್ ಅವರು ಫೆಬ್ರವರಿ 1 ರಿಂದ ಶೇ. 10 ರಷ್ಟು ಮತ್ತು ಜೂನ್ 1 ರಿಂದ ಶೇ. 25 ರಷ್ಟು ಆಮದು ಸುಂಕ ಹೇರುವುದಾಗಿ ಘೋಷಿಸಿದ್ದಾರೆ.

ಸಮೀಕ್ಷೆಗಳ ಪ್ರಕಾರ ಗ್ರೀನ್‌ಲ್ಯಾಂಡ್‌ನ ಶೇ. 85 ರಷ್ಟು ಜನರು ಅಮೆರಿಕಾದ ಭಾಗವಾಗಲು ಇಷ್ಟಪಡುತ್ತಿಲ್ಲ. “ನಮ್ಮ ದೇಶವು ಒಂದು ಆಟಿಕೆಯಲ್ಲ, ಇದು ನಮ್ಮ ಮನೆ” ಎಂಬುದು ಅಲ್ಲಿನ ನಾಗರಿಕರ ಒಮ್ಮತದ ಅಭಿಪ್ರಾಯವಾಗಿದೆ.

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರು ಟ್ರಂಪ್ ಅವರ ಈ ನಡೆಯನ್ನು “ಅಪಾಯಕಾರಿ ಆಟ” ಎಂದು ಕರೆದಿದ್ದು, ಇದು ನ್ಯಾಟೋ ಒಕ್ಕೂಟದ ಅಸ್ತಿತ್ವಕ್ಕೆ ಧಕ್ಕೆ ತರಬಹುದು ಎಂದು ಎಚ್ಚರಿಸಿದ್ದಾರೆ.

ಟ್ರಂಪ್‌ ಸಂಚಿನ ವಿರುದ್ದದ ಗ್ರೀನ್‌ಲ್ಯಾಂಡ್‌ ಜನರ ಪ್ರತಿಭಟನೆಯು ಕೇವಲ ಒಂದು ದೇಶದ ವಿಷಯವಾಗಿ ಉಳಿಯದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜಾಪ್ರಭುತ್ವ ಮತ್ತು ಸ್ವಾಯತ್ತತೆಯ ಹೋರಾಟವಾಗಿ ಬದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....