Homeಅಂತರಾಷ್ಟ್ರೀಯ'ನಮ್ಮ ದೇಶ ಮಾರಾಟಕ್ಕಿಲ್ಲ': ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

- Advertisement -
- Advertisement -

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು ಜನರು, ‘ಗ್ರೀನ್‌ಲ್ಯಾಂಡ್‌ ಮಾರಾಟಕ್ಕಿಲ್ಲ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದು ಗ್ರೀನ್‌ಲ್ಯಾಂಡ್ ಇತಿಹಾಸದಲ್ಲೇ ನಡೆದ ಅತಿದೊಡ್ಡ ಪ್ರತಿಭಟನೆ ಎಂದು ಹೇಳಲಾಗುತ್ತಿದೆ.

ಗ್ರೀನ್‌ಲ್ಯಾಂಡ್‌ನ ಪ್ರಧಾನ ಮಂತ್ರಿ ಜೆನ್ಸ್-ಫ್ರೆಡೆರಿಕ್ ನೀಲ್ಸನ್ ಅವರೇ ಸ್ವತಃ ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ದೇಶದ ಸ್ವಾಯತ್ತತೆಯನ್ನು ರಕ್ಷಿಸುವ ಭರವಸೆ ನೀಡಿದ್ದಾರೆ.

ಗ್ರೀನ್‌ಲ್ಯಾಂಡ್‌ನ ರಾಜಧಾನಿ ನೂಕ್ ನಗರದ ಜನಸಂಖ್ಯೆ ಸುಮಾರು 20,000 ಆಗಿದ್ದು, ಪ್ರತಿಭಟನೆಯಲ್ಲಿ ಅದರ ನಾಲ್ಕನೇ ಒಂದು ಭಾಗದಷ್ಟು ಜನರು (ಸುಮಾರು 5,000ಕ್ಕೂ ಹೆಚ್ಚು ಜನರು) ಭಾಗವಹಿಸಿದ್ದರು. ಚಳಿ ಮತ್ತು ಮಳೆಯನ್ನೂ ಲೆಕ್ಕಿಸದೆ ಜನರು ಸಾಂಪ್ರದಾಯಿಕ ಇನ್ಯೂಟ್ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನಾಕಾರರು “Make America Go Away” (ಅಮೆರಿಕಾವನ್ನು ದೂರವಿಡಿ) ಎಂದು ಬರೆದ ಕೆಂಪು ಟೋಪಿಗಳನ್ನು ಧರಿಸಿದ್ದರು. ಅಷ್ಟೇ ಅಲ್ಲದೆ, “Yankee Go Home” ಮತ್ತು “Kalaallit Nunaat” (ಗ್ರೀನ್‌ಲ್ಯಾಂಡ್‌ನ ಸ್ಥಳೀಯ ಹೆಸರು) ಎಂಬ ಘೋಷಣೆಗಳು ಮೊಳಗಿವೆ ಎಂದು ವರದಿ ಉಲ್ಲೇಖಿಸಿದೆ.

ಗ್ರೀನ್‌ಲ್ಯಾಂಡ್‌ಗೆ ಬೆಂಬಲ ಸೂಚಿಸಿ ಡೆನ್ಮಾರ್ಕ್‌ನ ರಾಜಧಾನಿ ಕೋಪನ್‌ಹೆಗನ್‌ನಲ್ಲಿ ಮತ್ತು ಡೆನ್ಮಾರ್ಕ್‌ಗೆ ಸೇರಿದ ಇತರ ಸ್ಥಳಗಳಲ್ಲಿ ಜನರು ಮೆರವಣಿಗೆ ಮತ್ತು ರ‍್ಯಾಲಿ ನಡೆಸಿದ್ದಾರೆ. ಕೆನಡಾದಲ್ಲಿರುವ ‘ನುನಾವುಟ್’ ಎಂಬ ಇನ್ಯೂಟ್ ಜನರು (ಗ್ರೀನ್‌ಲ್ಯಾಂಡ್‌ನ ಸ್ಥಳೀಯರಂತೆಯೇ ಇರುವ ಜನಾಂಗ) ಆಡಳಿತ ನಡೆಸುವ ಪ್ರದೇಶದ ರಾಜಧಾನಿಯಲ್ಲಿಯೂ ಸಹ ಗ್ರೀನ್‌ಲ್ಯಾಂಡ್‌ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಯುರೋಪ್ ರಾಷ್ಟ್ರಗಳ ಬೆಂಬಲ

ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಫ್ರಾನ್ಸ್, ಜರ್ಮನಿ, ಬ್ರಿಟನ್, ಸ್ವೀಡನ್ ಮತ್ತು ನಾರ್ವೆ ಸೇರಿದಂತೆ ಹಲವು ದೇಶಗಳು ಗ್ರೀನ್‌ಲ್ಯಾಂಡ್‌ನ ಭದ್ರತೆಗಾಗಿ ‘ಆಪರೇಷನ್ ಆರ್ಕ್ಟಿಕ್ ಎಂಡ್ಯೂರೆನ್ಸ್’ ಎಂಬ ಮಿಲಿಟರಿ ಅಭ್ಯಾಸದ ಭಾಗವಾಗಿ ತಮ್ಮ ಸೈನಿಕರನ್ನು ಅಲ್ಲಿಗೆ ಕಳುಹಿಸಿವೆ.

ಪ್ರತಿಭಟನೆಗಳ ನಡುವೆಯೇ, ಗ್ರೀನ್‌ಲ್ಯಾಂಡ್ ಹಸ್ತಾಂತರಕ್ಕೆ ಒಪ್ಪದ ಯುರೋಪಿಯನ್ ರಾಷ್ಟ್ರಗಳ ಮೇಲೆ ಟ್ರಂಪ್ ಅವರು ಫೆಬ್ರವರಿ 1 ರಿಂದ ಶೇ. 10 ರಷ್ಟು ಮತ್ತು ಜೂನ್ 1 ರಿಂದ ಶೇ. 25 ರಷ್ಟು ಆಮದು ಸುಂಕ ಹೇರುವುದಾಗಿ ಘೋಷಿಸಿದ್ದಾರೆ.

ಸಮೀಕ್ಷೆಗಳ ಪ್ರಕಾರ ಗ್ರೀನ್‌ಲ್ಯಾಂಡ್‌ನ ಶೇ. 85 ರಷ್ಟು ಜನರು ಅಮೆರಿಕಾದ ಭಾಗವಾಗಲು ಇಷ್ಟಪಡುತ್ತಿಲ್ಲ. “ನಮ್ಮ ದೇಶವು ಒಂದು ಆಟಿಕೆಯಲ್ಲ, ಇದು ನಮ್ಮ ಮನೆ” ಎಂಬುದು ಅಲ್ಲಿನ ನಾಗರಿಕರ ಒಮ್ಮತದ ಅಭಿಪ್ರಾಯವಾಗಿದೆ.

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರು ಟ್ರಂಪ್ ಅವರ ಈ ನಡೆಯನ್ನು “ಅಪಾಯಕಾರಿ ಆಟ” ಎಂದು ಕರೆದಿದ್ದು, ಇದು ನ್ಯಾಟೋ ಒಕ್ಕೂಟದ ಅಸ್ತಿತ್ವಕ್ಕೆ ಧಕ್ಕೆ ತರಬಹುದು ಎಂದು ಎಚ್ಚರಿಸಿದ್ದಾರೆ.

ಟ್ರಂಪ್‌ ಸಂಚಿನ ವಿರುದ್ದದ ಗ್ರೀನ್‌ಲ್ಯಾಂಡ್‌ ಜನರ ಪ್ರತಿಭಟನೆಯು ಕೇವಲ ಒಂದು ದೇಶದ ವಿಷಯವಾಗಿ ಉಳಿಯದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜಾಪ್ರಭುತ್ವ ಮತ್ತು ಸ್ವಾಯತ್ತತೆಯ ಹೋರಾಟವಾಗಿ ಬದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...