Homeಅಂತರಾಷ್ಟ್ರೀಯ'ನಮ್ಮ ದೇಶ ಮಾರಾಟಕ್ಕಿಲ್ಲ': ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

- Advertisement -
- Advertisement -

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು ಜನರು, ‘ಗ್ರೀನ್‌ಲ್ಯಾಂಡ್‌ ಮಾರಾಟಕ್ಕಿಲ್ಲ” ಎಂಬ ಘೋಷಣೆಗಳನ್ನು ಕೂಗುವ ಮೂಲಕ ಟ್ರಂಪ್‌ಗೆ ಎಚ್ಚರಿಕೆ ನೀಡಿದ್ದಾರೆ. ಇದು ಗ್ರೀನ್‌ಲ್ಯಾಂಡ್ ಇತಿಹಾಸದಲ್ಲೇ ನಡೆದ ಅತಿದೊಡ್ಡ ಪ್ರತಿಭಟನೆ ಎಂದು ಹೇಳಲಾಗುತ್ತಿದೆ.

ಗ್ರೀನ್‌ಲ್ಯಾಂಡ್‌ನ ಪ್ರಧಾನ ಮಂತ್ರಿ ಜೆನ್ಸ್-ಫ್ರೆಡೆರಿಕ್ ನೀಲ್ಸನ್ ಅವರೇ ಸ್ವತಃ ಈ ಪ್ರತಿಭಟನೆಯಲ್ಲಿ ಭಾಗವಹಿಸಿ, ತಮ್ಮ ದೇಶದ ಸ್ವಾಯತ್ತತೆಯನ್ನು ರಕ್ಷಿಸುವ ಭರವಸೆ ನೀಡಿದ್ದಾರೆ.

ಗ್ರೀನ್‌ಲ್ಯಾಂಡ್‌ನ ರಾಜಧಾನಿ ನೂಕ್ ನಗರದ ಜನಸಂಖ್ಯೆ ಸುಮಾರು 20,000 ಆಗಿದ್ದು, ಪ್ರತಿಭಟನೆಯಲ್ಲಿ ಅದರ ನಾಲ್ಕನೇ ಒಂದು ಭಾಗದಷ್ಟು ಜನರು (ಸುಮಾರು 5,000ಕ್ಕೂ ಹೆಚ್ಚು ಜನರು) ಭಾಗವಹಿಸಿದ್ದರು. ಚಳಿ ಮತ್ತು ಮಳೆಯನ್ನೂ ಲೆಕ್ಕಿಸದೆ ಜನರು ಸಾಂಪ್ರದಾಯಿಕ ಇನ್ಯೂಟ್ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ಪ್ರತಿಭಟನಾಕಾರರು “Make America Go Away” (ಅಮೆರಿಕಾವನ್ನು ದೂರವಿಡಿ) ಎಂದು ಬರೆದ ಕೆಂಪು ಟೋಪಿಗಳನ್ನು ಧರಿಸಿದ್ದರು. ಅಷ್ಟೇ ಅಲ್ಲದೆ, “Yankee Go Home” ಮತ್ತು “Kalaallit Nunaat” (ಗ್ರೀನ್‌ಲ್ಯಾಂಡ್‌ನ ಸ್ಥಳೀಯ ಹೆಸರು) ಎಂಬ ಘೋಷಣೆಗಳು ಮೊಳಗಿವೆ ಎಂದು ವರದಿ ಉಲ್ಲೇಖಿಸಿದೆ.

ಗ್ರೀನ್‌ಲ್ಯಾಂಡ್‌ಗೆ ಬೆಂಬಲ ಸೂಚಿಸಿ ಡೆನ್ಮಾರ್ಕ್‌ನ ರಾಜಧಾನಿ ಕೋಪನ್‌ಹೆಗನ್‌ನಲ್ಲಿ ಮತ್ತು ಡೆನ್ಮಾರ್ಕ್‌ಗೆ ಸೇರಿದ ಇತರ ಸ್ಥಳಗಳಲ್ಲಿ ಜನರು ಮೆರವಣಿಗೆ ಮತ್ತು ರ‍್ಯಾಲಿ ನಡೆಸಿದ್ದಾರೆ. ಕೆನಡಾದಲ್ಲಿರುವ ‘ನುನಾವುಟ್’ ಎಂಬ ಇನ್ಯೂಟ್ ಜನರು (ಗ್ರೀನ್‌ಲ್ಯಾಂಡ್‌ನ ಸ್ಥಳೀಯರಂತೆಯೇ ಇರುವ ಜನಾಂಗ) ಆಡಳಿತ ನಡೆಸುವ ಪ್ರದೇಶದ ರಾಜಧಾನಿಯಲ್ಲಿಯೂ ಸಹ ಗ್ರೀನ್‌ಲ್ಯಾಂಡ್‌ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಯುರೋಪ್ ರಾಷ್ಟ್ರಗಳ ಬೆಂಬಲ

ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಫ್ರಾನ್ಸ್, ಜರ್ಮನಿ, ಬ್ರಿಟನ್, ಸ್ವೀಡನ್ ಮತ್ತು ನಾರ್ವೆ ಸೇರಿದಂತೆ ಹಲವು ದೇಶಗಳು ಗ್ರೀನ್‌ಲ್ಯಾಂಡ್‌ನ ಭದ್ರತೆಗಾಗಿ ‘ಆಪರೇಷನ್ ಆರ್ಕ್ಟಿಕ್ ಎಂಡ್ಯೂರೆನ್ಸ್’ ಎಂಬ ಮಿಲಿಟರಿ ಅಭ್ಯಾಸದ ಭಾಗವಾಗಿ ತಮ್ಮ ಸೈನಿಕರನ್ನು ಅಲ್ಲಿಗೆ ಕಳುಹಿಸಿವೆ.

ಪ್ರತಿಭಟನೆಗಳ ನಡುವೆಯೇ, ಗ್ರೀನ್‌ಲ್ಯಾಂಡ್ ಹಸ್ತಾಂತರಕ್ಕೆ ಒಪ್ಪದ ಯುರೋಪಿಯನ್ ರಾಷ್ಟ್ರಗಳ ಮೇಲೆ ಟ್ರಂಪ್ ಅವರು ಫೆಬ್ರವರಿ 1 ರಿಂದ ಶೇ. 10 ರಷ್ಟು ಮತ್ತು ಜೂನ್ 1 ರಿಂದ ಶೇ. 25 ರಷ್ಟು ಆಮದು ಸುಂಕ ಹೇರುವುದಾಗಿ ಘೋಷಿಸಿದ್ದಾರೆ.

ಸಮೀಕ್ಷೆಗಳ ಪ್ರಕಾರ ಗ್ರೀನ್‌ಲ್ಯಾಂಡ್‌ನ ಶೇ. 85 ರಷ್ಟು ಜನರು ಅಮೆರಿಕಾದ ಭಾಗವಾಗಲು ಇಷ್ಟಪಡುತ್ತಿಲ್ಲ. “ನಮ್ಮ ದೇಶವು ಒಂದು ಆಟಿಕೆಯಲ್ಲ, ಇದು ನಮ್ಮ ಮನೆ” ಎಂಬುದು ಅಲ್ಲಿನ ನಾಗರಿಕರ ಒಮ್ಮತದ ಅಭಿಪ್ರಾಯವಾಗಿದೆ.

ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಅವರು ಟ್ರಂಪ್ ಅವರ ಈ ನಡೆಯನ್ನು “ಅಪಾಯಕಾರಿ ಆಟ” ಎಂದು ಕರೆದಿದ್ದು, ಇದು ನ್ಯಾಟೋ ಒಕ್ಕೂಟದ ಅಸ್ತಿತ್ವಕ್ಕೆ ಧಕ್ಕೆ ತರಬಹುದು ಎಂದು ಎಚ್ಚರಿಸಿದ್ದಾರೆ.

ಟ್ರಂಪ್‌ ಸಂಚಿನ ವಿರುದ್ದದ ಗ್ರೀನ್‌ಲ್ಯಾಂಡ್‌ ಜನರ ಪ್ರತಿಭಟನೆಯು ಕೇವಲ ಒಂದು ದೇಶದ ವಿಷಯವಾಗಿ ಉಳಿಯದೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಜಾಪ್ರಭುತ್ವ ಮತ್ತು ಸ್ವಾಯತ್ತತೆಯ ಹೋರಾಟವಾಗಿ ಬದಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...