Homeಕರ್ನಾಟಕಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ, ರೈತರು ಬೀದಿಯಲ್ಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಮಂಗಳವಾರ ಹೇಳಿದರು. ಈ ಹಿಂದೆ ವಿಪಕ್ಷದಲ್ಲಿದ್ದಾಗ ರೈತರ ಹೋರಾಟಗಳಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೊಶ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದ ನಿರ್ಣಯವನ್ನು ಮಂಡಿಸಿದ ನಾಗೇಂದ್ರ ಅವರು, ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಾವೇಶ ಪ್ರಾರಂಭ ಆದ ಹೊತ್ತಿನಲ್ಲೆ, ಇಲ್ಲಿ ಕೂಡಾ ಸಮಾವೇಶ ನಡೆಯುತ್ತಿದೆ. ಆದರೆ ಇದು ನೈತಿಕತೆಯುಳ್ಳ ಸಮಾವೇಶ ಎಂದು ಹೇಳಿದರು.

ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ 1000ಕ್ಕೂ ಹೆಚ್ಚು ದಿನದಿಂದ ನಡೆಯುತ್ತಿದೆ, ಈ ಹೋರಾಟ ನಮ್ಮ ಎಲ್ಲರ ಅಂತಃಕರಣ ತಟ್ಟಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಎಪ್ರಿಲ್ 26 2023ರಂದು ಡಿಕೆ ಶಿವಕುಮಾರ್ ಅವರು ಏನು ಹೇಳಿದ್ದೀರಿ ಮತ್ತು ಈಗ ಏನು ಹೇಳುತ್ತಿದ್ದೀರಿ ಎಂದು ಪ್ರಶ್ನಿಸಿದ ನಾಗೇಂದ್ರ ಅವರು, ಸಿದ್ದರಾಮಯ್ಯ ಅವರಿಗೂ ನಾವು ಇದೇ ಪ್ರಶ್ನೆ ಕೇಳುತ್ತಿದ್ದೇವೆ ಹೇಳಿದರು. ವಿಪಕ್ಷದಲ್ಲಿ ಇರುವ ಈಗಿನ ಸಚಿವರಾದಿಯಾಗಿ ಎಲ್ಲರೂ ನಮ್ಮ ಜೊತೆ ಬಂದು ಬೀದಿಯಲ್ಲಿ ಕೂತಿದ್ದಿರಿ. ಆದರೆ ಈಗ ರೈತರಿಂದ ಭೂಮಿ ಕಿತ್ತುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದೀರಿ ಎಂದು ಹೇಳಿದರು.

ಕೊಮುವಾದಿಗಳನ್ನು ನಾವು ಹಿಂದೆ, ಮುಂದೆ ಮತ್ತು ಎಂದೆಂದಿಗೂ ವಿರೋಧಿಸುತ್ತೇವೆ. ಆದರೆ ನಾವು ಕಾಂಗ್ರೆಸ್ ಪರ ಅಲ್ಲ. ನಿಜವಾದ ಚಳವಳಿಗಾರರು ಮಾರಾಟ ಆಗಲ್ಲ. ನಾವು ಜನರ ಸದುದ್ದೇಶಕ್ಕೆ ಈ ಸಮಾವೇಶ ಮಾಡುತ್ತಿದ್ದೇವೆ. 42 ಸಂಘಟನೆಗಳ ನಾಯಕರು ಇಲ್ಲಿದ್ದೇವೆ ಎಂದು ಅವರು ಹೇಳಿದರು.

ಕಾರ್ಮಿಕ ಸಂಘಟನೆ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಸುಡುವಂತ ಹೋರಾಟವನ್ನು ತಮ್ಮ ಕೆಲಸದ ಸ್ಥಳದಲ್ಲಿ ರಾಜ್ಯದಾದ್ಯಂತ ಕಾರ್ಮಿಕರು ಇಂದು ಮಾಡುತ್ತಿದ್ದಾರೆ ಎಂದು ನೆನಪಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತದ್ದು ಮತ್ತು ತರುವಂತಹದ್ದು ರಾಜ್ಯಕ್ಕೆ ಆಗ ಅಗತ್ಯವಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರಕ್ಕೆ ನಾವು ಬೇಷರತ್ ಬೆಂಬಲ ನೀಡಿದ್ದಲ್ಲ. ಜನಪರವಾಗಿ ಕಾನೂನುಗಳನ್ನು ತರಬೇಕು ಎಂಬ ಷರತ್ತಿನೊಂದಿಗೆ ನಾವು ಬೆಂಬಲ ನೀಡಿದ್ದೆವು” ಎಂದು ಹೇಳಿದರು.

“ರೈತರು ತಾವು ಉತ್ಪಾದನೆ ಮಾಡುವ ಬೆಳೆಗೆ ಸಿಗುವ ಬೆಲೆ ಮಾರಾಟವಾರದ ಬೆಲೆಯ 30ರಿಂದ 50%ಕ್ಕಿಂತಲೂ ಕಡಿಮೆ. ಕಾರ್ಮಿಕರ ವೇತನದ ಪಾಲು 1981-82 ದಲ್ಲಿ ಲಾಭದಲ್ಲಿ ಬರುವ ಪ್ರತಿ 100 ರೂ.ಗಳಲ್ಲಿ 30 ರಿಂದ 32 ರೂ.ಗಳು ಸಿಗುತ್ತಿತ್ತು. ಆದರೆ 2022-23 ರಲ್ಲಿ ಇದು 17 ರೂ. ಆಗಿದೆ. ಅದಾಗ್ಯೂ, ಮಾಲಿಕರಿಗೆ ಈ ಲಾಭದಲ್ಲಿ 50 ರೂ. ಸಿಗುತ್ತಿದೆ” ಎಂದು ಅವರು ಗಮನಸೆಳೆದರು.

”ನಮ್ಮ ಸರ್ಕಾರ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಗುತ್ತಿಗೆ ಆಧಾರದ ಕೆಲಸಗಳಲ್ಲಿ ಕೂಡಾ ಮೀಸಲಾತಿ ನೀಡುತ್ತಿದೆ ಎನ್ನುವ ಸರ್ಕಾರ ಅದೇ ಅಧಿಸೂಚನೆಯಲ್ಲಿ ಈ ಕಾರ್ಮಿಕರಿಗೆ ಪರ್ಮನೆಂಟ್ ಉದ್ಯೋಗ ಕೇಳುವ ಹಕ್ಕು ಇಲ್ಲ ಎಂದು ಹೇಳುತ್ತದೆ. ನಿಮ್ಮ ನವ ಉದಾರೀಕರಣ ನೀತಿಗಳಾದ, ಬಡವರಿಂದ ಕಿತ್ತು ಶ್ರೀಮಂತರಿಗೆ ನೀಡುವ ನೀತಿಯನ್ನು ನಾವು ಒಪ್ಪುವುದಿಲ್ಲ” ಎಂದು ಅವರು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಾತನಾಡಿ, ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ಏನು ವ್ಯತ್ಯಾಸ ಇದೆ? ಎಂದು ಪ್ರಶ್ನಿಸಿದರು. “ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿ ಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ. ಇದಕ್ಕೆ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ” ಎಂದು ಅವರು ಆರೋಪಿಸಿದರು.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದರು.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...

ಎಸ್‌ಐಆರ್‌ನ ನಿಜವಾದ ಉದ್ದೇಶ ಎನ್‌ಆರ್‌ಸಿ : ಮಮತಾ ಬ್ಯಾನರ್ಜಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಹಿಂದಿನ ಕೇಂದ್ರ ಸರ್ಕಾರದ ನಿಜವಾದ ಉದ್ದೇಶ ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ) ಮಾಡುವುದು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ನವೆಂಬರ್...

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸೇರಿದಂತೆ ಐವರನ್ನು ಖುಲಾಸೆಗೊಳಿಸಿ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ (ನವೆಂಬರ್ 26) ತೀರ್ಪು ನೀಡಿದೆ ಎಂದು ಬಾರ್ & ಬೆಂಚ್ ವರದಿ...

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ -...