Homeಕರ್ನಾಟಕಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ, ರೈತರು ಬೀದಿಯಲ್ಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಮಂಗಳವಾರ ಹೇಳಿದರು. ಈ ಹಿಂದೆ ವಿಪಕ್ಷದಲ್ಲಿದ್ದಾಗ ರೈತರ ಹೋರಾಟಗಳಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೊಶ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದ ನಿರ್ಣಯವನ್ನು ಮಂಡಿಸಿದ ನಾಗೇಂದ್ರ ಅವರು, ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಾವೇಶ ಪ್ರಾರಂಭ ಆದ ಹೊತ್ತಿನಲ್ಲೆ, ಇಲ್ಲಿ ಕೂಡಾ ಸಮಾವೇಶ ನಡೆಯುತ್ತಿದೆ. ಆದರೆ ಇದು ನೈತಿಕತೆಯುಳ್ಳ ಸಮಾವೇಶ ಎಂದು ಹೇಳಿದರು.

ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ 1000ಕ್ಕೂ ಹೆಚ್ಚು ದಿನದಿಂದ ನಡೆಯುತ್ತಿದೆ, ಈ ಹೋರಾಟ ನಮ್ಮ ಎಲ್ಲರ ಅಂತಃಕರಣ ತಟ್ಟಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಎಪ್ರಿಲ್ 26 2023ರಂದು ಡಿಕೆ ಶಿವಕುಮಾರ್ ಅವರು ಏನು ಹೇಳಿದ್ದೀರಿ ಮತ್ತು ಈಗ ಏನು ಹೇಳುತ್ತಿದ್ದೀರಿ ಎಂದು ಪ್ರಶ್ನಿಸಿದ ನಾಗೇಂದ್ರ ಅವರು, ಸಿದ್ದರಾಮಯ್ಯ ಅವರಿಗೂ ನಾವು ಇದೇ ಪ್ರಶ್ನೆ ಕೇಳುತ್ತಿದ್ದೇವೆ ಹೇಳಿದರು. ವಿಪಕ್ಷದಲ್ಲಿ ಇರುವ ಈಗಿನ ಸಚಿವರಾದಿಯಾಗಿ ಎಲ್ಲರೂ ನಮ್ಮ ಜೊತೆ ಬಂದು ಬೀದಿಯಲ್ಲಿ ಕೂತಿದ್ದಿರಿ. ಆದರೆ ಈಗ ರೈತರಿಂದ ಭೂಮಿ ಕಿತ್ತುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದೀರಿ ಎಂದು ಹೇಳಿದರು.

ಕೊಮುವಾದಿಗಳನ್ನು ನಾವು ಹಿಂದೆ, ಮುಂದೆ ಮತ್ತು ಎಂದೆಂದಿಗೂ ವಿರೋಧಿಸುತ್ತೇವೆ. ಆದರೆ ನಾವು ಕಾಂಗ್ರೆಸ್ ಪರ ಅಲ್ಲ. ನಿಜವಾದ ಚಳವಳಿಗಾರರು ಮಾರಾಟ ಆಗಲ್ಲ. ನಾವು ಜನರ ಸದುದ್ದೇಶಕ್ಕೆ ಈ ಸಮಾವೇಶ ಮಾಡುತ್ತಿದ್ದೇವೆ. 42 ಸಂಘಟನೆಗಳ ನಾಯಕರು ಇಲ್ಲಿದ್ದೇವೆ ಎಂದು ಅವರು ಹೇಳಿದರು.

ಕಾರ್ಮಿಕ ಸಂಘಟನೆ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಸುಡುವಂತ ಹೋರಾಟವನ್ನು ತಮ್ಮ ಕೆಲಸದ ಸ್ಥಳದಲ್ಲಿ ರಾಜ್ಯದಾದ್ಯಂತ ಕಾರ್ಮಿಕರು ಇಂದು ಮಾಡುತ್ತಿದ್ದಾರೆ ಎಂದು ನೆನಪಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತದ್ದು ಮತ್ತು ತರುವಂತಹದ್ದು ರಾಜ್ಯಕ್ಕೆ ಆಗ ಅಗತ್ಯವಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರಕ್ಕೆ ನಾವು ಬೇಷರತ್ ಬೆಂಬಲ ನೀಡಿದ್ದಲ್ಲ. ಜನಪರವಾಗಿ ಕಾನೂನುಗಳನ್ನು ತರಬೇಕು ಎಂಬ ಷರತ್ತಿನೊಂದಿಗೆ ನಾವು ಬೆಂಬಲ ನೀಡಿದ್ದೆವು” ಎಂದು ಹೇಳಿದರು.

“ರೈತರು ತಾವು ಉತ್ಪಾದನೆ ಮಾಡುವ ಬೆಳೆಗೆ ಸಿಗುವ ಬೆಲೆ ಮಾರಾಟವಾರದ ಬೆಲೆಯ 30ರಿಂದ 50%ಕ್ಕಿಂತಲೂ ಕಡಿಮೆ. ಕಾರ್ಮಿಕರ ವೇತನದ ಪಾಲು 1981-82 ದಲ್ಲಿ ಲಾಭದಲ್ಲಿ ಬರುವ ಪ್ರತಿ 100 ರೂ.ಗಳಲ್ಲಿ 30 ರಿಂದ 32 ರೂ.ಗಳು ಸಿಗುತ್ತಿತ್ತು. ಆದರೆ 2022-23 ರಲ್ಲಿ ಇದು 17 ರೂ. ಆಗಿದೆ. ಅದಾಗ್ಯೂ, ಮಾಲಿಕರಿಗೆ ಈ ಲಾಭದಲ್ಲಿ 50 ರೂ. ಸಿಗುತ್ತಿದೆ” ಎಂದು ಅವರು ಗಮನಸೆಳೆದರು.

”ನಮ್ಮ ಸರ್ಕಾರ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಗುತ್ತಿಗೆ ಆಧಾರದ ಕೆಲಸಗಳಲ್ಲಿ ಕೂಡಾ ಮೀಸಲಾತಿ ನೀಡುತ್ತಿದೆ ಎನ್ನುವ ಸರ್ಕಾರ ಅದೇ ಅಧಿಸೂಚನೆಯಲ್ಲಿ ಈ ಕಾರ್ಮಿಕರಿಗೆ ಪರ್ಮನೆಂಟ್ ಉದ್ಯೋಗ ಕೇಳುವ ಹಕ್ಕು ಇಲ್ಲ ಎಂದು ಹೇಳುತ್ತದೆ. ನಿಮ್ಮ ನವ ಉದಾರೀಕರಣ ನೀತಿಗಳಾದ, ಬಡವರಿಂದ ಕಿತ್ತು ಶ್ರೀಮಂತರಿಗೆ ನೀಡುವ ನೀತಿಯನ್ನು ನಾವು ಒಪ್ಪುವುದಿಲ್ಲ” ಎಂದು ಅವರು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಾತನಾಡಿ, ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ಏನು ವ್ಯತ್ಯಾಸ ಇದೆ? ಎಂದು ಪ್ರಶ್ನಿಸಿದರು. “ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿ ಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ. ಇದಕ್ಕೆ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ” ಎಂದು ಅವರು ಆರೋಪಿಸಿದರು.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದರು.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...