Homeಕರ್ನಾಟಕಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ, ರೈತರು ಬೀದಿಯಲ್ಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಮಂಗಳವಾರ ಹೇಳಿದರು. ಈ ಹಿಂದೆ ವಿಪಕ್ಷದಲ್ಲಿದ್ದಾಗ ರೈತರ ಹೋರಾಟಗಳಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೊಶ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದ ನಿರ್ಣಯವನ್ನು ಮಂಡಿಸಿದ ನಾಗೇಂದ್ರ ಅವರು, ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಾವೇಶ ಪ್ರಾರಂಭ ಆದ ಹೊತ್ತಿನಲ್ಲೆ, ಇಲ್ಲಿ ಕೂಡಾ ಸಮಾವೇಶ ನಡೆಯುತ್ತಿದೆ. ಆದರೆ ಇದು ನೈತಿಕತೆಯುಳ್ಳ ಸಮಾವೇಶ ಎಂದು ಹೇಳಿದರು.

ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ 1000ಕ್ಕೂ ಹೆಚ್ಚು ದಿನದಿಂದ ನಡೆಯುತ್ತಿದೆ, ಈ ಹೋರಾಟ ನಮ್ಮ ಎಲ್ಲರ ಅಂತಃಕರಣ ತಟ್ಟಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಎಪ್ರಿಲ್ 26 2023ರಂದು ಡಿಕೆ ಶಿವಕುಮಾರ್ ಅವರು ಏನು ಹೇಳಿದ್ದೀರಿ ಮತ್ತು ಈಗ ಏನು ಹೇಳುತ್ತಿದ್ದೀರಿ ಎಂದು ಪ್ರಶ್ನಿಸಿದ ನಾಗೇಂದ್ರ ಅವರು, ಸಿದ್ದರಾಮಯ್ಯ ಅವರಿಗೂ ನಾವು ಇದೇ ಪ್ರಶ್ನೆ ಕೇಳುತ್ತಿದ್ದೇವೆ ಹೇಳಿದರು. ವಿಪಕ್ಷದಲ್ಲಿ ಇರುವ ಈಗಿನ ಸಚಿವರಾದಿಯಾಗಿ ಎಲ್ಲರೂ ನಮ್ಮ ಜೊತೆ ಬಂದು ಬೀದಿಯಲ್ಲಿ ಕೂತಿದ್ದಿರಿ. ಆದರೆ ಈಗ ರೈತರಿಂದ ಭೂಮಿ ಕಿತ್ತುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದೀರಿ ಎಂದು ಹೇಳಿದರು.

ಕೊಮುವಾದಿಗಳನ್ನು ನಾವು ಹಿಂದೆ, ಮುಂದೆ ಮತ್ತು ಎಂದೆಂದಿಗೂ ವಿರೋಧಿಸುತ್ತೇವೆ. ಆದರೆ ನಾವು ಕಾಂಗ್ರೆಸ್ ಪರ ಅಲ್ಲ. ನಿಜವಾದ ಚಳವಳಿಗಾರರು ಮಾರಾಟ ಆಗಲ್ಲ. ನಾವು ಜನರ ಸದುದ್ದೇಶಕ್ಕೆ ಈ ಸಮಾವೇಶ ಮಾಡುತ್ತಿದ್ದೇವೆ. 42 ಸಂಘಟನೆಗಳ ನಾಯಕರು ಇಲ್ಲಿದ್ದೇವೆ ಎಂದು ಅವರು ಹೇಳಿದರು.

ಕಾರ್ಮಿಕ ಸಂಘಟನೆ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಸುಡುವಂತ ಹೋರಾಟವನ್ನು ತಮ್ಮ ಕೆಲಸದ ಸ್ಥಳದಲ್ಲಿ ರಾಜ್ಯದಾದ್ಯಂತ ಕಾರ್ಮಿಕರು ಇಂದು ಮಾಡುತ್ತಿದ್ದಾರೆ ಎಂದು ನೆನಪಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತದ್ದು ಮತ್ತು ತರುವಂತಹದ್ದು ರಾಜ್ಯಕ್ಕೆ ಆಗ ಅಗತ್ಯವಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರಕ್ಕೆ ನಾವು ಬೇಷರತ್ ಬೆಂಬಲ ನೀಡಿದ್ದಲ್ಲ. ಜನಪರವಾಗಿ ಕಾನೂನುಗಳನ್ನು ತರಬೇಕು ಎಂಬ ಷರತ್ತಿನೊಂದಿಗೆ ನಾವು ಬೆಂಬಲ ನೀಡಿದ್ದೆವು” ಎಂದು ಹೇಳಿದರು.

“ರೈತರು ತಾವು ಉತ್ಪಾದನೆ ಮಾಡುವ ಬೆಳೆಗೆ ಸಿಗುವ ಬೆಲೆ ಮಾರಾಟವಾರದ ಬೆಲೆಯ 30ರಿಂದ 50%ಕ್ಕಿಂತಲೂ ಕಡಿಮೆ. ಕಾರ್ಮಿಕರ ವೇತನದ ಪಾಲು 1981-82 ದಲ್ಲಿ ಲಾಭದಲ್ಲಿ ಬರುವ ಪ್ರತಿ 100 ರೂ.ಗಳಲ್ಲಿ 30 ರಿಂದ 32 ರೂ.ಗಳು ಸಿಗುತ್ತಿತ್ತು. ಆದರೆ 2022-23 ರಲ್ಲಿ ಇದು 17 ರೂ. ಆಗಿದೆ. ಅದಾಗ್ಯೂ, ಮಾಲಿಕರಿಗೆ ಈ ಲಾಭದಲ್ಲಿ 50 ರೂ. ಸಿಗುತ್ತಿದೆ” ಎಂದು ಅವರು ಗಮನಸೆಳೆದರು.

”ನಮ್ಮ ಸರ್ಕಾರ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಗುತ್ತಿಗೆ ಆಧಾರದ ಕೆಲಸಗಳಲ್ಲಿ ಕೂಡಾ ಮೀಸಲಾತಿ ನೀಡುತ್ತಿದೆ ಎನ್ನುವ ಸರ್ಕಾರ ಅದೇ ಅಧಿಸೂಚನೆಯಲ್ಲಿ ಈ ಕಾರ್ಮಿಕರಿಗೆ ಪರ್ಮನೆಂಟ್ ಉದ್ಯೋಗ ಕೇಳುವ ಹಕ್ಕು ಇಲ್ಲ ಎಂದು ಹೇಳುತ್ತದೆ. ನಿಮ್ಮ ನವ ಉದಾರೀಕರಣ ನೀತಿಗಳಾದ, ಬಡವರಿಂದ ಕಿತ್ತು ಶ್ರೀಮಂತರಿಗೆ ನೀಡುವ ನೀತಿಯನ್ನು ನಾವು ಒಪ್ಪುವುದಿಲ್ಲ” ಎಂದು ಅವರು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಾತನಾಡಿ, ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ಏನು ವ್ಯತ್ಯಾಸ ಇದೆ? ಎಂದು ಪ್ರಶ್ನಿಸಿದರು. “ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿ ಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ. ಇದಕ್ಕೆ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ” ಎಂದು ಅವರು ಆರೋಪಿಸಿದರು.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದರು.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...