Homeಕರ್ನಾಟಕಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ: ರೈತ ಮುಖಂಡ ಬಡಗಲಪುರ ನಾಗೇಂದ್ರ ಆಕ್ರೋಶ

- Advertisement -
- Advertisement -

ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ ನಮ್ಮ ರೈತರ ಭೂಮಿಯಿದೆ, ರೈತರು ಬೀದಿಯಲ್ಲಿದ್ದಾರೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ ಅವರು ಮಂಗಳವಾರ ಹೇಳಿದರು. ಈ ಹಿಂದೆ ವಿಪಕ್ಷದಲ್ಲಿದ್ದಾಗ ರೈತರ ಹೋರಾಟಗಳಲ್ಲಿ ಭಾಗವಹಿಸಿದ್ದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರು ರೈತ ವಿರೋಧಿಯಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಅವರು ಆಕ್ರೊಶ ವ್ಯಕ್ತಪಡಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿದ್ದ ಜನಾಗ್ರಹ ಸಮಾವೇಶದ ನಿರ್ಣಯವನ್ನು ಮಂಡಿಸಿದ ನಾಗೇಂದ್ರ ಅವರು, ಹೊಸಪೇಟೆಯಲ್ಲಿ ಕಾಂಗ್ರೆಸ್ ಸರ್ಕಾರದ ಸಮಾವೇಶ ಪ್ರಾರಂಭ ಆದ ಹೊತ್ತಿನಲ್ಲೆ, ಇಲ್ಲಿ ಕೂಡಾ ಸಮಾವೇಶ ನಡೆಯುತ್ತಿದೆ. ಆದರೆ ಇದು ನೈತಿಕತೆಯುಳ್ಳ ಸಮಾವೇಶ ಎಂದು ಹೇಳಿದರು.

ಚೆನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ 1000ಕ್ಕೂ ಹೆಚ್ಚು ದಿನದಿಂದ ನಡೆಯುತ್ತಿದೆ, ಈ ಹೋರಾಟ ನಮ್ಮ ಎಲ್ಲರ ಅಂತಃಕರಣ ತಟ್ಟಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಅವರು ತಿಳಿಸಿದರು.

ಎಪ್ರಿಲ್ 26 2023ರಂದು ಡಿಕೆ ಶಿವಕುಮಾರ್ ಅವರು ಏನು ಹೇಳಿದ್ದೀರಿ ಮತ್ತು ಈಗ ಏನು ಹೇಳುತ್ತಿದ್ದೀರಿ ಎಂದು ಪ್ರಶ್ನಿಸಿದ ನಾಗೇಂದ್ರ ಅವರು, ಸಿದ್ದರಾಮಯ್ಯ ಅವರಿಗೂ ನಾವು ಇದೇ ಪ್ರಶ್ನೆ ಕೇಳುತ್ತಿದ್ದೇವೆ ಹೇಳಿದರು. ವಿಪಕ್ಷದಲ್ಲಿ ಇರುವ ಈಗಿನ ಸಚಿವರಾದಿಯಾಗಿ ಎಲ್ಲರೂ ನಮ್ಮ ಜೊತೆ ಬಂದು ಬೀದಿಯಲ್ಲಿ ಕೂತಿದ್ದಿರಿ. ಆದರೆ ಈಗ ರೈತರಿಂದ ಭೂಮಿ ಕಿತ್ತುಕೊಳ್ಳುವ ಕೆಲಸಕ್ಕೆ ಮುಂದಾಗಿದ್ದೀರಿ ಎಂದು ಹೇಳಿದರು.

ಕೊಮುವಾದಿಗಳನ್ನು ನಾವು ಹಿಂದೆ, ಮುಂದೆ ಮತ್ತು ಎಂದೆಂದಿಗೂ ವಿರೋಧಿಸುತ್ತೇವೆ. ಆದರೆ ನಾವು ಕಾಂಗ್ರೆಸ್ ಪರ ಅಲ್ಲ. ನಿಜವಾದ ಚಳವಳಿಗಾರರು ಮಾರಾಟ ಆಗಲ್ಲ. ನಾವು ಜನರ ಸದುದ್ದೇಶಕ್ಕೆ ಈ ಸಮಾವೇಶ ಮಾಡುತ್ತಿದ್ದೇವೆ. 42 ಸಂಘಟನೆಗಳ ನಾಯಕರು ಇಲ್ಲಿದ್ದೇವೆ ಎಂದು ಅವರು ಹೇಳಿದರು.

ಕಾರ್ಮಿಕ ಸಂಘಟನೆ ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಪ್ರತಿಭಟಿಸಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಸುಡುವಂತ ಹೋರಾಟವನ್ನು ತಮ್ಮ ಕೆಲಸದ ಸ್ಥಳದಲ್ಲಿ ರಾಜ್ಯದಾದ್ಯಂತ ಕಾರ್ಮಿಕರು ಇಂದು ಮಾಡುತ್ತಿದ್ದಾರೆ ಎಂದು ನೆನಪಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವಂತದ್ದು ಮತ್ತು ತರುವಂತಹದ್ದು ರಾಜ್ಯಕ್ಕೆ ಆಗ ಅಗತ್ಯವಿತ್ತು. ಅದಾಗ್ಯೂ, ಕಾಂಗ್ರೆಸ್ ಸರ್ಕಾರಕ್ಕೆ ನಾವು ಬೇಷರತ್ ಬೆಂಬಲ ನೀಡಿದ್ದಲ್ಲ. ಜನಪರವಾಗಿ ಕಾನೂನುಗಳನ್ನು ತರಬೇಕು ಎಂಬ ಷರತ್ತಿನೊಂದಿಗೆ ನಾವು ಬೆಂಬಲ ನೀಡಿದ್ದೆವು” ಎಂದು ಹೇಳಿದರು.

“ರೈತರು ತಾವು ಉತ್ಪಾದನೆ ಮಾಡುವ ಬೆಳೆಗೆ ಸಿಗುವ ಬೆಲೆ ಮಾರಾಟವಾರದ ಬೆಲೆಯ 30ರಿಂದ 50%ಕ್ಕಿಂತಲೂ ಕಡಿಮೆ. ಕಾರ್ಮಿಕರ ವೇತನದ ಪಾಲು 1981-82 ದಲ್ಲಿ ಲಾಭದಲ್ಲಿ ಬರುವ ಪ್ರತಿ 100 ರೂ.ಗಳಲ್ಲಿ 30 ರಿಂದ 32 ರೂ.ಗಳು ಸಿಗುತ್ತಿತ್ತು. ಆದರೆ 2022-23 ರಲ್ಲಿ ಇದು 17 ರೂ. ಆಗಿದೆ. ಅದಾಗ್ಯೂ, ಮಾಲಿಕರಿಗೆ ಈ ಲಾಭದಲ್ಲಿ 50 ರೂ. ಸಿಗುತ್ತಿದೆ” ಎಂದು ಅವರು ಗಮನಸೆಳೆದರು.

”ನಮ್ಮ ಸರ್ಕಾರ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಗುತ್ತಿಗೆ ಆಧಾರದ ಕೆಲಸಗಳಲ್ಲಿ ಕೂಡಾ ಮೀಸಲಾತಿ ನೀಡುತ್ತಿದೆ ಎನ್ನುವ ಸರ್ಕಾರ ಅದೇ ಅಧಿಸೂಚನೆಯಲ್ಲಿ ಈ ಕಾರ್ಮಿಕರಿಗೆ ಪರ್ಮನೆಂಟ್ ಉದ್ಯೋಗ ಕೇಳುವ ಹಕ್ಕು ಇಲ್ಲ ಎಂದು ಹೇಳುತ್ತದೆ. ನಿಮ್ಮ ನವ ಉದಾರೀಕರಣ ನೀತಿಗಳಾದ, ಬಡವರಿಂದ ಕಿತ್ತು ಶ್ರೀಮಂತರಿಗೆ ನೀಡುವ ನೀತಿಯನ್ನು ನಾವು ಒಪ್ಪುವುದಿಲ್ಲ” ಎಂದು ಅವರು ಹೇಳಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ವೆಂಕಟಾಚಲಯ್ಯ ಮಾತನಾಡಿ, ಕೋಮುವಾದಿಗಳು ಮನೆಗೆ ಹೋಗಬೇಕು ಎಂದು ಜನರು ನಿರ್ಧಾರ ತೆಗೆದುಕೊಂಡಿದ್ದರು. ಆದರೆ ರಾಜ್ಯದ ಈಗಿನ ಸ್ಥಿತಿ ನೋಡಿದರೆ ಈಗ ಬಿಜೆಪಿಗೂ ಕಾಂಗ್ರೆಸ್‌ಗೂ ಏನು ವ್ಯತ್ಯಾಸ ಇದೆ? ಎಂದು ಪ್ರಶ್ನಿಸಿದರು. “ರೈತ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆ ಎಂದು ಕಾಂಗ್ರೆಸ್ ಹೇಳಿತ್ತು. ಆದರೆ ರಾಜ್ಯ ಕಾಂಗ್ರೆಸ್ ಕೇಂದ್ರದ ಬಿಜೆಪಿ ಗಿಂತ 3 ಪಟ್ಟು ಹೆಚ್ಚು ಭೂಮಿಯನ್ನು ಕಿತ್ತುಕೊಳ್ಳುತ್ತಿವೆ. ಇದಕ್ಕೆ ಕಾರಣ ಡಿಕೆ ಶಿವಕುಮಾರ್, ಉಳಿದವರು ಇದ್ದರೂ ಡಿಕೆ ಶಿವಕುಮಾರ್ ಪಾಲು ಹೆಚ್ಚಿದೆ” ಎಂದು ಅವರು ಆರೋಪಿಸಿದರು.

“ಒಂದು ಕುಟುಂಬಕ್ಕೆ 58 ಎಕರೆ ಭೂಮಿ ಇರಬೇಕು ಎಂಬ ಕಾನೂನಿತ್ತು. ಆದರೆ ಅದಕ್ಕೆ ತಿದ್ದುಪಡಿ ತಂದಿದ್ದು ದೇವೇಗೌಡರರು. ನೈಸ್ ಕಂಪನಿ ಬಳಿ ಅಧೀಕೃತ ಮತ್ತು ಅನಧೀಕೃತವಾಗಿ ಲಕ್ಷ ಎಕರೆಗಿಂತಲೂ ಹೆಚ್ಚಿನ ಭೂಮಿಯಿದೆ. ರೈತರ ಭೂಮಿಯನ್ನು ಕಿತ್ತು ಎಲ್ಲಾ ರಿಯಲ್ ಎಸ್ಟೇಟ್‌ ಏಜೆಂಟ್‌ಗಳಿಗೆ, ಮಠಾಧೀಶರಿಗೆ, ವಿದೇಶಿ ಕಂಪನಿಗಳಿಗೆ ನೀಡಲಾಗುತ್ತಿದೆ. ನಾವು ಯಾರು ಅಭಿವೃದ್ಧಿಯ ವಿರೋಧಿಗಳು ಅಲ್ಲ. ಆದರೆ ಈ ಅಭಿವೃದ್ಧಿ ಯಾರಿಗಾಗಿ ಮಾಡುತ್ತಿದ್ದಾರೆ ಎಂದು ಗಮನಿಸಬೇಕಾಗುತ್ತದೆ‌. ಬೆಂಗಳೂರು ಸುತ್ತಮುತ್ತಲಿನ ರೈತರು ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ.” ಎಂದು ಅವರು ಹೇಳಿದರು.

ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ 2 ವರ್ಷಗಳಾದ ಹಿನ್ನಲೆ ಪಕ್ಷವು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶವನ್ನು ಮಂಗಳವಾರ ಆಯೋಜಿಸಿದೆ. ಈ ಸಮಾವೇಶದ ನೈತಿಕತೆಯನ್ನು ಪ್ರಶ್ನಿಸಿ ಸಂಯುಕ್ತ ಹೋರಾಟ – ಕರ್ನಾಟಕ ಜನ ಚಳವಳಿಗಳಿಂದ ಜನಾಗ್ರಹ ಸಮಾವೇಶವನ್ನು ನಡೆಸಿದೆ. ‘ಸಂಯುಕ್ತ ಹೋರಾಟ-ಕರ್ನಾಟಕ’ ರಾಜ್ಯದ ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳಾ ಸಂಘಟನೆಗಳ ಸಮನ್ವಯ ಸಮಿತಿಯಾಗಿದೆ. ಗುಜರಾತಿ ಮಾರವಾಡಿಗಳ ಕೈಯ್ಯಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ಭೂ ದಾಹಕ್ಕೆ ಸಿದ್ದರಾಮಯ್ಯ ಸರ್ಕಾರ ಕೂಡಾ ಹೊರತಾಗಿಲ್ಲ: ಕಣ್ಣೀರು ಸುರಿಸಿದ ರೈತ ಕಾರಹಳ್ಳಿ ಶ್ರೀನಿವಾಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮತ ಉಳಿಸಿ ಎಂದು ಜನ ಬೇಡಿಕೊಳ್ಳುವಂತೆ ಮಾಡಬೇಡಿ’: ಇದು ನನ್ನ ವೈಯಕ್ತಿಕ ಸಮಸ್ಯೆ ಅಲ್ಲ, ಇಡೀ ದೇಶದ ಸಮಸ್ಯೆ: ಬಹುಭಾಷಾ ನಟ ಪ್ರಕಾಶ್ ರಾಜ್

ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವಿಧಾನದ ಬಗ್ಗೆ ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕರೆದಿದ್ದ ಮಹತ್ವದ ಪತ್ರಿಕಾಗೋಷ್ಠಿ ಆಗಸ್ಟ್ 14, 2026ರಂದು ಬೆಂಗಳೂರಿನ ಪ್ರೆಸ್ ಕ್ಲಬ್‌ನಲ್ಲಿ...

‘ನಲ್ಸಾರ್’ ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಅಡ್ಡಬಂದ BCI ನಡೆಗೆ CJI ಗರಂ

ಹೈದರಾಬಾದ್‌ನ 'ನಲ್ಸಾರ್' (NALSAR) ಕಾನೂನು ವಿಶ್ವವಿದ್ಯಾಲಯದ ಪದವೀಧರರ ಸನ್ನದು (ಎನ್‌ರೋಲ್‌ಮೆಂಟ್) ನೋಂದಣಿಯನ್ನು ಅಮಾನತಿನಲ್ಲಿಡುವಂತೆ ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ನೀಡಿದ್ದ ವಿವಾದಾತ್ಮಕ ನಿರ್ದೇಶನದ ವಿರುದ್ಧ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್,...

ಉತ್ತರ ಪ್ರದೇಶದಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ: ಯೋಗಿ ಆದಿತ್ಯನಾಥ್ ಸೇರಿ 8 ಅಧಿಕಾರಿಗಳ ನಿರ್ಬಂಧಕ್ಕೆ ಕೆನಡಾ ಮಾನವ ಹಕ್ಕುಗಳ ಸಂಸ್ಥೆ ಆಗ್ರಹ

ಉತ್ತರ ಪ್ರದೇಶದಲ್ಲಿ ಮುಸ್ಲಿಂ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ನಿರಂತರವಾಗಿ ನಡೆಸಲಾಗುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆ ಹಾಗೂ ರಾಜ್ಯ ಬೆಂಬಲಿತ ದೌರ್ಜನ್ಯಗಳನ್ನು ಖಂಡಿಸಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಎಂಟು ಪ್ರಮುಖ...

SIR: ಬೆಂಗಳೂರಿನ ಸರ್ವಜ್ಞನಗರದ ಒಂದೇ ಬೂತ್‌ನಲ್ಲಿ ಶೇ.93.71ರಷ್ಟು ಮತದಾರರ ಹೆಸರು ನಾಪತ್ತೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಹೆಸರಿನಲ್ಲಿ ರಾಜಧಾನಿ ಬೆಂಗಳೂರಿನ ಸರ್ವಜ್ಞನಗರ ಕ್ಷೇತ್ರದ ಒಂದೇ ಮತಗಟ್ಟೆಯಲ್ಲಿ ಬರೋಬ್ಬರಿ ಶೇ. 93.71ರಷ್ಟು ಮತದಾರರ ಹೆಸರುಗಳನ್ನು ಮತಪಟ್ಟಿಯಿಂದ ತೆಗೆಯಲಾಗಿದೆ ಎಂಬ ಆಘಾತಕಾರಿ ಸಂಗತಿಯೊಂದು...

ASDDO ಪಟ್ಟಿ ಸಾರ್ವಜನಿಕ ಪ್ರಕಟಣೆ ಬಗ್ಗೆ ಚುನಾವಣಾ ಆಯೋಗ ನಿರ್ಲಕ್ಷ್ಯ! ಆರೋಪ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬರೋಬ್ಬರಿ 1.08 ಕೋಟಿ ಮತದಾರರ ಹೆಸರನ್ನು ಎಎಸ್‌ಡಿಡಿಒ (ASDDO) ಪಟ್ಟಿಗೆ ಸೇರಿಸಿ ಆತಂಕ ಸೃಷ್ಟಿಸಿದ್ದ ಚುನಾವಣಾ ಆಯೋಗ, ಈಗ ಆ ಪಟ್ಟಿಯ ಸಾರ್ವಜನಿಕ ಪ್ರಕಟಣೆಯ...

SIR: 62 ವರ್ಷದ ಜೀವಂತ ವ್ಯಕ್ತಿಯನ್ನು ‘ಮೃತ’ ಎಂದು ಪಟ್ಟಿ ಮಾಡಿದ ಆಯೋಗದ ಕುತಂತ್ರ ಬಯಲು

ರಾಜ್ಯಾದ್ಯಂತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಜಾಪ್ರಭುತ್ವದ ಮೂಲ ಆಶಯಕ್ಕೇ ಮಾರಕವಾಗಿ ಪರಿಣಮಿಸುತ್ತಿದೆ. ದೋಷಮುಕ್ತ ಪಟ್ಟಿ ಸಿದ್ಧಪಡಿಸುವ ನೆಪದಲ್ಲಿ ಚುನಾವಣಾ ಆಯೋಗವು ಬರೋಬ್ಬರಿ 1.08 ಕೋಟಿ ಮತದಾರರನ್ನು...

‘ಸಿದ್ದಾರ್ಥ ವಿಹಾರ ಟ್ರಸ್ಟ್’ ನ ದಾಖಲೆ ನೀಡುತ್ತೇನೆ: ಆರ್‌ಎಸ್‌ಎಸ್, ರಾಮಮಂದಿರದ ಲೆಕ್ಕ ನೀಡಲು ಸಿದ್ಧವಿದ್ದೀರಾ?: ಬಿಜೆಪಿ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಸವಾಲು

ಬೆಂಗಳೂರು: ‘ಸಿದ್ದಾರ್ಥ ವಿಹಾರ ಟ್ರಸ್ಟ್‌’ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ತಮ್ಮ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ...

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...