Homeಚಳವಳಿಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಪಂಜಾಬಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರುಣ್ ನಾರಂಗ್ ಅವರನ್ನು ಥಳಿಸಿದವರಲ್ಲಿ ತಮ್ಮ ಸಂಘಟನೆ ಭಾಗಿಯಾಗಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೆಣಕಲು ಪಕ್ಷವೇ ಇದನ್ನು ಮಾಡಿದೆ ಎಂದು ಭಾನುವಾರ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. “ನಮ್ಮ ಜನರು ಕಪ್ಪು ಧ್ವಜಗಳನ್ನು ಮಾತ್ರ ತೋರಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಅವರು ಭಾಗಿಯಾಗಿಲ್ಲ” ಎಂದು ರಾಕೇಶ್ ಟಿಕಾಯತ್ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪಂಜಾಬ್‌ನ ಅಬೋಹರ್‌ ಬಿಜೆಪಿ ಶಾಸಕ ಅರುಣ್ ನಾರಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಮುಕ್ತಸರ್ ಜಿಲ್ಲೆಯ ಮಾಲೌಟ್‌ಗೆ ತೆರಳಿದ್ದರು. ಇದನ್ನು ರೈತರು ತೀವ್ರವಾಗಿ ವಿರೋಧಿಸಿದರು. ಮಾಲೌಟ್‌ನಲ್ಲಿ ಶನಿವಾರ ಪ್ರತಿಭಟನಾ ನಿರತ ರೈತರ ಗುಂಪೊಂದು ಅವರನ್ನು ಥಳಿಸಿ ಅವರ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಸಾಲಷ್ಟು ವೈರಲ್ ಆಗಿದೆ. ಹರಿದ ಬಟ್ಟೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸ್ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರಿಗೆ ಘಟನೆ ಕುರಿತು ದೂರು ನೀಡುವ ಮುನ್ನ ಈ ವಿಷಯದ ಬಗ್ಗೆ ಮೊದಲು ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತೇನೆ ಶಾಸಕ ತಿಳಿಸಿದ್ದರು.

ಬಿಕೆಯು (ಸಿಧುಪುರ್‌) ಮುಕ್ತಸರ್ ಅಧ್ಯಕ್ಷ ಸುಖದೇವ್ ಸಿಂಗ್ ಮತ್ತು ಇತರ ಆರು ಮಂದಿ ಮೇಲೆ ಮುಕ್ತಸರ್ ಪೊಲೀಸರು ಭಾನುವಾರ ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಪಂಜಾಬ್‌ನ ರಾಜಕೀಯ ಪಕ್ಷಗಳು ನಾರಂಗ್ ಮೇಲಿನ ದಾಳಿಯನ್ನು ಖಂಡಿಸಿ, ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಘಟನೆಯನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇಂತಹ ಹಿಂಸಾತ್ಮಕ ಕೃತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ರೈತರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ತನ್ನ ಶಾಸಕರ ಮೇಲಿನ ದಾಳಿಗೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಇತ್ತ ಸಂಯುಕ್ತ ಕಿಸಾನ್ ಮೋರ್ಚಾ, ಪಂಜಾಬ್ ನಲ್ಲಿ ಬಿಜೆಪಿ ಶಾಸಕನ ಮೇಲೆ ನಡೆದಿರುವ ದೈಹಿಕ ಹಲ್ಲೆಯ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ಘಟನೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ನಾವು ಪರಿಗಣಿಸುತ್ತೇವೆ. ಬಿಜೆಪಿಯ ನಾಯಕತ್ವದಲ್ಲಿ ಅಹಂಕಾರ ಆಳವಾಗಿ ಬೇರೂರಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಡವಳಿಕೆಯ ಕಹಿ ಫಲಿತಾಂಶಗಳನ್ನು ಸ್ಥಳೀಯ ನಾಯಕರು ಎದುರಿಸುತ್ತಿದ್ದಾರೆ ಎಂದು ಕಿಸಾನ್ ಮೋರ್ಚಾ ಹೇಳಿದೆ.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...