Homeಚಳವಳಿಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಪಂಜಾಬಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರುಣ್ ನಾರಂಗ್ ಅವರನ್ನು ಥಳಿಸಿದವರಲ್ಲಿ ತಮ್ಮ ಸಂಘಟನೆ ಭಾಗಿಯಾಗಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೆಣಕಲು ಪಕ್ಷವೇ ಇದನ್ನು ಮಾಡಿದೆ ಎಂದು ಭಾನುವಾರ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. “ನಮ್ಮ ಜನರು ಕಪ್ಪು ಧ್ವಜಗಳನ್ನು ಮಾತ್ರ ತೋರಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಅವರು ಭಾಗಿಯಾಗಿಲ್ಲ” ಎಂದು ರಾಕೇಶ್ ಟಿಕಾಯತ್ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪಂಜಾಬ್‌ನ ಅಬೋಹರ್‌ ಬಿಜೆಪಿ ಶಾಸಕ ಅರುಣ್ ನಾರಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಮುಕ್ತಸರ್ ಜಿಲ್ಲೆಯ ಮಾಲೌಟ್‌ಗೆ ತೆರಳಿದ್ದರು. ಇದನ್ನು ರೈತರು ತೀವ್ರವಾಗಿ ವಿರೋಧಿಸಿದರು. ಮಾಲೌಟ್‌ನಲ್ಲಿ ಶನಿವಾರ ಪ್ರತಿಭಟನಾ ನಿರತ ರೈತರ ಗುಂಪೊಂದು ಅವರನ್ನು ಥಳಿಸಿ ಅವರ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಸಾಲಷ್ಟು ವೈರಲ್ ಆಗಿದೆ. ಹರಿದ ಬಟ್ಟೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸ್ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರಿಗೆ ಘಟನೆ ಕುರಿತು ದೂರು ನೀಡುವ ಮುನ್ನ ಈ ವಿಷಯದ ಬಗ್ಗೆ ಮೊದಲು ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತೇನೆ ಶಾಸಕ ತಿಳಿಸಿದ್ದರು.

ಬಿಕೆಯು (ಸಿಧುಪುರ್‌) ಮುಕ್ತಸರ್ ಅಧ್ಯಕ್ಷ ಸುಖದೇವ್ ಸಿಂಗ್ ಮತ್ತು ಇತರ ಆರು ಮಂದಿ ಮೇಲೆ ಮುಕ್ತಸರ್ ಪೊಲೀಸರು ಭಾನುವಾರ ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಪಂಜಾಬ್‌ನ ರಾಜಕೀಯ ಪಕ್ಷಗಳು ನಾರಂಗ್ ಮೇಲಿನ ದಾಳಿಯನ್ನು ಖಂಡಿಸಿ, ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಘಟನೆಯನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇಂತಹ ಹಿಂಸಾತ್ಮಕ ಕೃತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ರೈತರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ತನ್ನ ಶಾಸಕರ ಮೇಲಿನ ದಾಳಿಗೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಇತ್ತ ಸಂಯುಕ್ತ ಕಿಸಾನ್ ಮೋರ್ಚಾ, ಪಂಜಾಬ್ ನಲ್ಲಿ ಬಿಜೆಪಿ ಶಾಸಕನ ಮೇಲೆ ನಡೆದಿರುವ ದೈಹಿಕ ಹಲ್ಲೆಯ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ಘಟನೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ನಾವು ಪರಿಗಣಿಸುತ್ತೇವೆ. ಬಿಜೆಪಿಯ ನಾಯಕತ್ವದಲ್ಲಿ ಅಹಂಕಾರ ಆಳವಾಗಿ ಬೇರೂರಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಡವಳಿಕೆಯ ಕಹಿ ಫಲಿತಾಂಶಗಳನ್ನು ಸ್ಥಳೀಯ ನಾಯಕರು ಎದುರಿಸುತ್ತಿದ್ದಾರೆ ಎಂದು ಕಿಸಾನ್ ಮೋರ್ಚಾ ಹೇಳಿದೆ.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...