Homeಚಳವಳಿಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಪಂಜಾಬಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರುಣ್ ನಾರಂಗ್ ಅವರನ್ನು ಥಳಿಸಿದವರಲ್ಲಿ ತಮ್ಮ ಸಂಘಟನೆ ಭಾಗಿಯಾಗಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೆಣಕಲು ಪಕ್ಷವೇ ಇದನ್ನು ಮಾಡಿದೆ ಎಂದು ಭಾನುವಾರ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. “ನಮ್ಮ ಜನರು ಕಪ್ಪು ಧ್ವಜಗಳನ್ನು ಮಾತ್ರ ತೋರಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಅವರು ಭಾಗಿಯಾಗಿಲ್ಲ” ಎಂದು ರಾಕೇಶ್ ಟಿಕಾಯತ್ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪಂಜಾಬ್‌ನ ಅಬೋಹರ್‌ ಬಿಜೆಪಿ ಶಾಸಕ ಅರುಣ್ ನಾರಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಮುಕ್ತಸರ್ ಜಿಲ್ಲೆಯ ಮಾಲೌಟ್‌ಗೆ ತೆರಳಿದ್ದರು. ಇದನ್ನು ರೈತರು ತೀವ್ರವಾಗಿ ವಿರೋಧಿಸಿದರು. ಮಾಲೌಟ್‌ನಲ್ಲಿ ಶನಿವಾರ ಪ್ರತಿಭಟನಾ ನಿರತ ರೈತರ ಗುಂಪೊಂದು ಅವರನ್ನು ಥಳಿಸಿ ಅವರ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಸಾಲಷ್ಟು ವೈರಲ್ ಆಗಿದೆ. ಹರಿದ ಬಟ್ಟೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸ್ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರಿಗೆ ಘಟನೆ ಕುರಿತು ದೂರು ನೀಡುವ ಮುನ್ನ ಈ ವಿಷಯದ ಬಗ್ಗೆ ಮೊದಲು ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತೇನೆ ಶಾಸಕ ತಿಳಿಸಿದ್ದರು.

ಬಿಕೆಯು (ಸಿಧುಪುರ್‌) ಮುಕ್ತಸರ್ ಅಧ್ಯಕ್ಷ ಸುಖದೇವ್ ಸಿಂಗ್ ಮತ್ತು ಇತರ ಆರು ಮಂದಿ ಮೇಲೆ ಮುಕ್ತಸರ್ ಪೊಲೀಸರು ಭಾನುವಾರ ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಪಂಜಾಬ್‌ನ ರಾಜಕೀಯ ಪಕ್ಷಗಳು ನಾರಂಗ್ ಮೇಲಿನ ದಾಳಿಯನ್ನು ಖಂಡಿಸಿ, ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಘಟನೆಯನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇಂತಹ ಹಿಂಸಾತ್ಮಕ ಕೃತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ರೈತರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ತನ್ನ ಶಾಸಕರ ಮೇಲಿನ ದಾಳಿಗೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಇತ್ತ ಸಂಯುಕ್ತ ಕಿಸಾನ್ ಮೋರ್ಚಾ, ಪಂಜಾಬ್ ನಲ್ಲಿ ಬಿಜೆಪಿ ಶಾಸಕನ ಮೇಲೆ ನಡೆದಿರುವ ದೈಹಿಕ ಹಲ್ಲೆಯ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ಘಟನೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ನಾವು ಪರಿಗಣಿಸುತ್ತೇವೆ. ಬಿಜೆಪಿಯ ನಾಯಕತ್ವದಲ್ಲಿ ಅಹಂಕಾರ ಆಳವಾಗಿ ಬೇರೂರಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಡವಳಿಕೆಯ ಕಹಿ ಫಲಿತಾಂಶಗಳನ್ನು ಸ್ಥಳೀಯ ನಾಯಕರು ಎದುರಿಸುತ್ತಿದ್ದಾರೆ ಎಂದು ಕಿಸಾನ್ ಮೋರ್ಚಾ ಹೇಳಿದೆ.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...