Homeಚಳವಳಿಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಪಂಜಾಬಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರುಣ್ ನಾರಂಗ್ ಅವರನ್ನು ಥಳಿಸಿದವರಲ್ಲಿ ತಮ್ಮ ಸಂಘಟನೆ ಭಾಗಿಯಾಗಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೆಣಕಲು ಪಕ್ಷವೇ ಇದನ್ನು ಮಾಡಿದೆ ಎಂದು ಭಾನುವಾರ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. “ನಮ್ಮ ಜನರು ಕಪ್ಪು ಧ್ವಜಗಳನ್ನು ಮಾತ್ರ ತೋರಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಅವರು ಭಾಗಿಯಾಗಿಲ್ಲ” ಎಂದು ರಾಕೇಶ್ ಟಿಕಾಯತ್ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪಂಜಾಬ್‌ನ ಅಬೋಹರ್‌ ಬಿಜೆಪಿ ಶಾಸಕ ಅರುಣ್ ನಾರಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಮುಕ್ತಸರ್ ಜಿಲ್ಲೆಯ ಮಾಲೌಟ್‌ಗೆ ತೆರಳಿದ್ದರು. ಇದನ್ನು ರೈತರು ತೀವ್ರವಾಗಿ ವಿರೋಧಿಸಿದರು. ಮಾಲೌಟ್‌ನಲ್ಲಿ ಶನಿವಾರ ಪ್ರತಿಭಟನಾ ನಿರತ ರೈತರ ಗುಂಪೊಂದು ಅವರನ್ನು ಥಳಿಸಿ ಅವರ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಸಾಲಷ್ಟು ವೈರಲ್ ಆಗಿದೆ. ಹರಿದ ಬಟ್ಟೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸ್ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರಿಗೆ ಘಟನೆ ಕುರಿತು ದೂರು ನೀಡುವ ಮುನ್ನ ಈ ವಿಷಯದ ಬಗ್ಗೆ ಮೊದಲು ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತೇನೆ ಶಾಸಕ ತಿಳಿಸಿದ್ದರು.

ಬಿಕೆಯು (ಸಿಧುಪುರ್‌) ಮುಕ್ತಸರ್ ಅಧ್ಯಕ್ಷ ಸುಖದೇವ್ ಸಿಂಗ್ ಮತ್ತು ಇತರ ಆರು ಮಂದಿ ಮೇಲೆ ಮುಕ್ತಸರ್ ಪೊಲೀಸರು ಭಾನುವಾರ ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಪಂಜಾಬ್‌ನ ರಾಜಕೀಯ ಪಕ್ಷಗಳು ನಾರಂಗ್ ಮೇಲಿನ ದಾಳಿಯನ್ನು ಖಂಡಿಸಿ, ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಘಟನೆಯನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇಂತಹ ಹಿಂಸಾತ್ಮಕ ಕೃತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ರೈತರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ತನ್ನ ಶಾಸಕರ ಮೇಲಿನ ದಾಳಿಗೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಇತ್ತ ಸಂಯುಕ್ತ ಕಿಸಾನ್ ಮೋರ್ಚಾ, ಪಂಜಾಬ್ ನಲ್ಲಿ ಬಿಜೆಪಿ ಶಾಸಕನ ಮೇಲೆ ನಡೆದಿರುವ ದೈಹಿಕ ಹಲ್ಲೆಯ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ಘಟನೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ನಾವು ಪರಿಗಣಿಸುತ್ತೇವೆ. ಬಿಜೆಪಿಯ ನಾಯಕತ್ವದಲ್ಲಿ ಅಹಂಕಾರ ಆಳವಾಗಿ ಬೇರೂರಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಡವಳಿಕೆಯ ಕಹಿ ಫಲಿತಾಂಶಗಳನ್ನು ಸ್ಥಳೀಯ ನಾಯಕರು ಎದುರಿಸುತ್ತಿದ್ದಾರೆ ಎಂದು ಕಿಸಾನ್ ಮೋರ್ಚಾ ಹೇಳಿದೆ.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...