Homeಚಳವಳಿಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಪಂಜಾಬಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರುಣ್ ನಾರಂಗ್ ಅವರನ್ನು ಥಳಿಸಿದವರಲ್ಲಿ ತಮ್ಮ ಸಂಘಟನೆ ಭಾಗಿಯಾಗಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೆಣಕಲು ಪಕ್ಷವೇ ಇದನ್ನು ಮಾಡಿದೆ ಎಂದು ಭಾನುವಾರ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. “ನಮ್ಮ ಜನರು ಕಪ್ಪು ಧ್ವಜಗಳನ್ನು ಮಾತ್ರ ತೋರಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಅವರು ಭಾಗಿಯಾಗಿಲ್ಲ” ಎಂದು ರಾಕೇಶ್ ಟಿಕಾಯತ್ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪಂಜಾಬ್‌ನ ಅಬೋಹರ್‌ ಬಿಜೆಪಿ ಶಾಸಕ ಅರುಣ್ ನಾರಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಮುಕ್ತಸರ್ ಜಿಲ್ಲೆಯ ಮಾಲೌಟ್‌ಗೆ ತೆರಳಿದ್ದರು. ಇದನ್ನು ರೈತರು ತೀವ್ರವಾಗಿ ವಿರೋಧಿಸಿದರು. ಮಾಲೌಟ್‌ನಲ್ಲಿ ಶನಿವಾರ ಪ್ರತಿಭಟನಾ ನಿರತ ರೈತರ ಗುಂಪೊಂದು ಅವರನ್ನು ಥಳಿಸಿ ಅವರ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಸಾಲಷ್ಟು ವೈರಲ್ ಆಗಿದೆ. ಹರಿದ ಬಟ್ಟೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸ್ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರಿಗೆ ಘಟನೆ ಕುರಿತು ದೂರು ನೀಡುವ ಮುನ್ನ ಈ ವಿಷಯದ ಬಗ್ಗೆ ಮೊದಲು ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತೇನೆ ಶಾಸಕ ತಿಳಿಸಿದ್ದರು.

ಬಿಕೆಯು (ಸಿಧುಪುರ್‌) ಮುಕ್ತಸರ್ ಅಧ್ಯಕ್ಷ ಸುಖದೇವ್ ಸಿಂಗ್ ಮತ್ತು ಇತರ ಆರು ಮಂದಿ ಮೇಲೆ ಮುಕ್ತಸರ್ ಪೊಲೀಸರು ಭಾನುವಾರ ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಪಂಜಾಬ್‌ನ ರಾಜಕೀಯ ಪಕ್ಷಗಳು ನಾರಂಗ್ ಮೇಲಿನ ದಾಳಿಯನ್ನು ಖಂಡಿಸಿ, ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಘಟನೆಯನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇಂತಹ ಹಿಂಸಾತ್ಮಕ ಕೃತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ರೈತರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ತನ್ನ ಶಾಸಕರ ಮೇಲಿನ ದಾಳಿಗೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಇತ್ತ ಸಂಯುಕ್ತ ಕಿಸಾನ್ ಮೋರ್ಚಾ, ಪಂಜಾಬ್ ನಲ್ಲಿ ಬಿಜೆಪಿ ಶಾಸಕನ ಮೇಲೆ ನಡೆದಿರುವ ದೈಹಿಕ ಹಲ್ಲೆಯ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ಘಟನೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ನಾವು ಪರಿಗಣಿಸುತ್ತೇವೆ. ಬಿಜೆಪಿಯ ನಾಯಕತ್ವದಲ್ಲಿ ಅಹಂಕಾರ ಆಳವಾಗಿ ಬೇರೂರಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಡವಳಿಕೆಯ ಕಹಿ ಫಲಿತಾಂಶಗಳನ್ನು ಸ್ಥಳೀಯ ನಾಯಕರು ಎದುರಿಸುತ್ತಿದ್ದಾರೆ ಎಂದು ಕಿಸಾನ್ ಮೋರ್ಚಾ ಹೇಳಿದೆ.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...