Homeಚಳವಳಿಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
- Advertisement -

ಪಂಜಾಬಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಅರುಣ್ ನಾರಂಗ್ ಅವರನ್ನು ಥಳಿಸಿದವರಲ್ಲಿ ತಮ್ಮ ಸಂಘಟನೆ ಭಾಗಿಯಾಗಿಲ್ಲ. ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಕೆಣಕಲು ಪಕ್ಷವೇ ಇದನ್ನು ಮಾಡಿದೆ ಎಂದು ಭಾನುವಾರ ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಕಳೆದ ನಾಲ್ಕು ತಿಂಗಳಿನಿಂದ ಒಕ್ಕೂಟ ಸರ್ಕಾರದ ವಿವಾದಿತ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೇಶಾದ್ಯಂತ ಪ್ರತಿಭಟಿಸುತ್ತಿದ್ದಾರೆ. “ನಮ್ಮ ಜನರು ಕಪ್ಪು ಧ್ವಜಗಳನ್ನು ಮಾತ್ರ ತೋರಿಸಿದ್ದಾರೆ. ಆದರೆ ಈ ಘಟನೆಯಲ್ಲಿ ಅವರು ಭಾಗಿಯಾಗಿಲ್ಲ” ಎಂದು ರಾಕೇಶ್ ಟಿಕಾಯತ್ ಹೇಳಿಕೆಯನ್ನು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಪಂಜಾಬ್‌ನ ಅಬೋಹರ್‌ ಬಿಜೆಪಿ ಶಾಸಕ ಅರುಣ್ ನಾರಂಗ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಲು ಮುಕ್ತಸರ್ ಜಿಲ್ಲೆಯ ಮಾಲೌಟ್‌ಗೆ ತೆರಳಿದ್ದರು. ಇದನ್ನು ರೈತರು ತೀವ್ರವಾಗಿ ವಿರೋಧಿಸಿದರು. ಮಾಲೌಟ್‌ನಲ್ಲಿ ಶನಿವಾರ ಪ್ರತಿಭಟನಾ ನಿರತ ರೈತರ ಗುಂಪೊಂದು ಅವರನ್ನು ಥಳಿಸಿ ಅವರ ಬಟ್ಟೆಯನ್ನು ಹರಿದು ಹಾಕಿರುವ ಘಟನೆ ನಡೆದಿತ್ತು.

ಇದನ್ನೂ ಓದಿ: ಬಿಜೆಪಿ ಶಾಸಕನನ್ನು ಥಳಿಸಿ ಅಸಮಾಧಾನ ಹೊರಹಾಕಿದ ಪಂಜಾಬ್ ರೈತರು: ಆರೋಪ

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋ ಸಾಲಷ್ಟು ವೈರಲ್ ಆಗಿದೆ. ಹರಿದ ಬಟ್ಟೆಯಲ್ಲಿಯೇ ಬಿಜೆಪಿ ನಾಯಕರನ್ನು ಪೊಲೀಸ್ ಸಿಬ್ಬಂದಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯುವುದನ್ನು ವಿಡಿಯೋದಲ್ಲಿ ನೋಡಬಹುದು. ಪೊಲೀಸರಿಗೆ ಘಟನೆ ಕುರಿತು ದೂರು ನೀಡುವ ಮುನ್ನ ಈ ವಿಷಯದ ಬಗ್ಗೆ ಮೊದಲು ಪಕ್ಷದ ಮುಖಂಡರೊಂದಿಗೆ ಮಾತನಾಡುತ್ತೇನೆ ಶಾಸಕ ತಿಳಿಸಿದ್ದರು.

ಬಿಕೆಯು (ಸಿಧುಪುರ್‌) ಮುಕ್ತಸರ್ ಅಧ್ಯಕ್ಷ ಸುಖದೇವ್ ಸಿಂಗ್ ಮತ್ತು ಇತರ ಆರು ಮಂದಿ ಮೇಲೆ ಮುಕ್ತಸರ್ ಪೊಲೀಸರು ಭಾನುವಾರ ಕೊಲೆ ಯತ್ನ ಕೇಸ್ ದಾಖಲಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸುಮಾರು 200-250 ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ‘ರಮೇಶ್‌ ಜಾರಕಿಹೊಳಿ ಹೆಸರು ಬರೆದಿಟ್ಟು ಸಾಯುತ್ತೇನೆ’ – ಸಿಡಿ ಹಗರಣದ ಸಂತ್ರಸ್ತೆ ಯುವತಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಮತ್ತು ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸೇರಿದಂತೆ ಪಂಜಾಬ್‌ನ ರಾಜಕೀಯ ಪಕ್ಷಗಳು ನಾರಂಗ್ ಮೇಲಿನ ದಾಳಿಯನ್ನು ಖಂಡಿಸಿ, ಭಾಗಿಯಾಗಿರುವವರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿವೆ. ಈ ಘಟನೆಯನ್ನು ಖಂಡಿಸಿ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜ್ಯದಲ್ಲಿ ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಇಂತಹ ಹಿಂಸಾತ್ಮಕ ಕೃತ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಾರದು ಎಂದು ರೈತರನ್ನು ಒತ್ತಾಯಿಸಿದ್ದಾರೆ.

ಬಿಜೆಪಿ ತನ್ನ ಶಾಸಕರ ಮೇಲಿನ ದಾಳಿಗೆ ಪಂಜಾಬ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಿದೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.

ಇತ್ತ ಸಂಯುಕ್ತ ಕಿಸಾನ್ ಮೋರ್ಚಾ, ಪಂಜಾಬ್ ನಲ್ಲಿ ಬಿಜೆಪಿ ಶಾಸಕನ ಮೇಲೆ ನಡೆದಿರುವ ದೈಹಿಕ ಹಲ್ಲೆಯ ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದೆ. ಜೊತೆಗೆ ಈ ಘಟನೆಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳೇ ಕಾರಣ ಎಂದು ನಾವು ಪರಿಗಣಿಸುತ್ತೇವೆ. ಬಿಜೆಪಿಯ ನಾಯಕತ್ವದಲ್ಲಿ ಅಹಂಕಾರ ಆಳವಾಗಿ ಬೇರೂರಿದೆ. ರೈತರ ಸಮಸ್ಯೆಗಳನ್ನು ಪರಿಹರಿಸುವ ಬದಲು ಅವರು ಚುನಾವಣೆಗಳಲ್ಲಿ ನಿರತರಾಗಿದ್ದಾರೆ, ಆದರೆ ಕೇಂದ್ರ ಸರ್ಕಾರದ ಈ ನಡವಳಿಕೆಯ ಕಹಿ ಫಲಿತಾಂಶಗಳನ್ನು ಸ್ಥಳೀಯ ನಾಯಕರು ಎದುರಿಸುತ್ತಿದ್ದಾರೆ ಎಂದು ಕಿಸಾನ್ ಮೋರ್ಚಾ ಹೇಳಿದೆ.


ಇದನ್ನೂ ಓದಿ: #LieLikeModi ಟ್ವಿಟರ್ ಟ್ರೆಂಡಿಂಗ್: ನಕ್ಕು ಹೊಟ್ಟೆ ಹುಣ್ಣಾದರೆ ನಾವು ಜವಾಬ್ದಾರರಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...