Homeಮುಖಪುಟನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು: ಸಾಕ್ಷಿ

ನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು: ಸಾಕ್ಷಿ

- Advertisement -
- Advertisement -

ನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ಮಹಿಳಾ ಕುಸ್ತಿಪಟುಗಳಿಗಾಗಿ ನಾನು ನಿವೃತ್ತಿ ಘೋಷಿಸಿದ್ದು, ಮುಂಬರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಬಯಸುತ್ತೇನೆ ಎಂದು ಒಲಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಹೊತ್ತಿರುವ ಬಿಜೆಪಿ ಸಂಸದ, ಡಬ್ಲ್ಯೂಎಫ್ಐನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್‌ಗೆ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸಾಕ್ಷಿ ಮಲ್ಲಿಕ್ ನೋವಿನಿಂದಲೇ ನಿವೃತ್ತಿ ಘೋಷಿಸಿದ್ದರು.

ಒಲಂಪಿಕ್ ಪದಕ ವಿಜೇತೆಯಾಗಿರುವ ಸಾಕ್ಷಿ ಮಲ್ಲಿಕ್, ಬಜರಂಗ ಪುನಿಯಾ ಸೇರಿದಂತೆ ಹಲವು ಅಥ್ಲೀಟ್‌ಗಳ ಅಸಮಾಧಾನ ಹಾಗೂ ಪದ್ಮ ಪ್ರಶಸ್ತಿ ವಾಪಸ್ ನೀಡುವ ಹೇಳಿಕೆ ನಂತರ ಸರ್ಕಾರ ಒತ್ತಡಕ್ಕೆ ಮಣಿದಿದ್ದು, ‘ಕ್ರೀಡಾ ಸಂಹಿತೆ’ಯನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಕೇಂದ್ರ ಕ್ರೀಡಾ ಸಚಿವಾಲಯವು ಭಾರತ ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಇಂದು ಅಮಾನತು ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾಕ್ಷಿ, ‘ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಥವಾ ಅದರ ಮುಖ್ಯಸ್ಥ ಸಂಜಯ್ ಸಿಂಗ್ ಅಮಾನತುಗೊಂಡಿರುವ ಬಗ್ಗೆ ಲಿಖಿತವಾಗಿ ನಾನು ಏನನ್ನೂ ನೋಡಿಲ್ಲ. ಮುಖ್ಯವಾಗಿ, ನಮ್ಮ (ಕುಸ್ತಿಪಟುಗಳ) ಹೋರಾಟ ಸರ್ಕಾರದ ಜೊತೆಗಲ್ಲ’ ಎಂದು ಹೇಳಿದ್ದಾರೆ.

ಕೇಂದ್ರದ ನಿರ್ಧಾರವನ್ನು ಶ್ಲಾಘಿಸಿರುವ ಸಾಕ್ಷಿ, ಫೆಡರೇಷನ್ ಆಡಳಿತ ಮಂಡಳಿ ಅಮಾನತುಗೊಳಿಸಿರುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಆದೇಶದ ಕುರಿತು ನಾನು ಇನ್ನೂ ಬರವಣಿಗೆಯಲ್ಲಿ ಏನನ್ನೂ ನೋಡಿಲ್ಲ. ಸಂಜಯ್ ಸಿಂಗ್ ಅಥವಾ ಇಡೀ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಲಾಗಿದೆಯೇ ಎಂದು ನನಗೆ ತಿಳಿದಿಲ್ಲ. ನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ನಮ್ಮ ಹೋರಾಟ ಮಹಿಳಾ ಕುಸ್ತಿಪಟುಗಳಿಗಾಗಿ, ಅದಕ್ಕಾಗಿಯೇ ನಾನು ನಿವೃತ್ತಿ ಘೋಷಿಸಿದ್ದೇನೆ. ಮುಂಬರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಬಯಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ತಮ್ಮ ನಿವೃತ್ತಿ ನಿರ್ಧಾರವನ್ನು ವಾಪಸ್ ಪಡೆಯುವ ಬಗ್ಗೆ ಸುಳಿವು ನೀಡಿದ ಸಾಕ್ಷಿ, ‘ಹೊಸದಾಗಿ ರಚನೆಯಾಗುವ ಕುಸ್ತಿ ಫೆಡರೇಶನ್ ನಿರ್ಧಾರದ ನಂತರ ನಾನು ನಿಮಗೆ ಹೇಳುತ್ತೇನೆ’ ಎಂದು ಹೇಳಿದ್ದಾರೆ.

‘ಡಬ್ಲ್ಯುಎಫ್ಐನ ಹೊಸದಾಗಿ ಚುನಾಯಿತ ಕಾರ್ಯನಿರ್ವಾಹಕ ಮಂಡಳಿಯು ಮಾಡಿದ ನಿರ್ಧಾರಗಳು ಸ್ಥಾಪಿತ ಕಾನೂನು ಮತ್ತು ಕಾರ್ಯವಿಧಾನದ ಮಾನದಂಡಗಳ ನಿರ್ಲಕ್ಕ್ಷ್ಯವನ್ನು ಪ್ರದರ್ಶಿಸುತ್ತವೆ. ಡಬ್ಲ್ಯುಎಫ್ಐನ ಸಾಂವಿಧಾನಿಕ ನಿಬಂಧನೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ ಎರಡನ್ನೂ ಉಲ್ಲಂಘಿಸುತ್ತವೆ. ಹೊಸದಾಗಿ ಚುನಾಯಿತ ಸಂಸ್ಥೆಯು ಹಿಂದಿನ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿದೆ.

ಪದಾಧಿಕಾರಿಗಳು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಫೆಡರೇಶನ್ನ ವ್ಯವಹಾರವನ್ನು ಮಾಜಿ ಪದಾಧಿಕಾರಿಗಳು ನಿಯಂತ್ರಿಸುತ್ತಿದ್ದ ಆವರಣದಿಂದಲೆ ನಡೆಸಲಾಗುತ್ತಿದೆ’ ಎಂದು ಸಚಿವಾಲಯ ಆರೋಪ ಮಾಡಿ ಅಮಾನತು ಆದೇಶ ಹೊರಡಿಸಿದೆ.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...