Homeಮುಖಪುಟನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು: ಸಾಕ್ಷಿ

ನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕು: ಸಾಕ್ಷಿ

- Advertisement -
- Advertisement -

ನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ಮಹಿಳಾ ಕುಸ್ತಿಪಟುಗಳಿಗಾಗಿ ನಾನು ನಿವೃತ್ತಿ ಘೋಷಿಸಿದ್ದು, ಮುಂಬರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಬಯಸುತ್ತೇನೆ ಎಂದು ಒಲಂಪಿಕ್ ಪದಕ ವಿಜೇತೆ ಕುಸ್ತಿಪಟು ಸಾಕ್ಷಿ ಮಲ್ಲಿಕ್ ಹೇಳಿದ್ದಾರೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಹೊತ್ತಿರುವ ಬಿಜೆಪಿ ಸಂಸದ, ಡಬ್ಲ್ಯೂಎಫ್ಐನ ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಆಪ್ತ ಸಂಜಯ್ ಸಿಂಗ್ ಕುಸ್ತಿ ಫೆಡರೇಷನ್‌ಗೆ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಸಾಕ್ಷಿ ಮಲ್ಲಿಕ್ ನೋವಿನಿಂದಲೇ ನಿವೃತ್ತಿ ಘೋಷಿಸಿದ್ದರು.

ಒಲಂಪಿಕ್ ಪದಕ ವಿಜೇತೆಯಾಗಿರುವ ಸಾಕ್ಷಿ ಮಲ್ಲಿಕ್, ಬಜರಂಗ ಪುನಿಯಾ ಸೇರಿದಂತೆ ಹಲವು ಅಥ್ಲೀಟ್‌ಗಳ ಅಸಮಾಧಾನ ಹಾಗೂ ಪದ್ಮ ಪ್ರಶಸ್ತಿ ವಾಪಸ್ ನೀಡುವ ಹೇಳಿಕೆ ನಂತರ ಸರ್ಕಾರ ಒತ್ತಡಕ್ಕೆ ಮಣಿದಿದ್ದು, ‘ಕ್ರೀಡಾ ಸಂಹಿತೆ’ಯನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಕೇಂದ್ರ ಕ್ರೀಡಾ ಸಚಿವಾಲಯವು ಭಾರತ ಕುಸ್ತಿ ಫೆಡರೇಷನ್ ನೂತನ ಆಡಳಿತ ಮಂಡಳಿಯನ್ನು ಇಂದು ಅಮಾನತು ಮಾಡಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಸಾಕ್ಷಿ, ‘ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಥವಾ ಅದರ ಮುಖ್ಯಸ್ಥ ಸಂಜಯ್ ಸಿಂಗ್ ಅಮಾನತುಗೊಂಡಿರುವ ಬಗ್ಗೆ ಲಿಖಿತವಾಗಿ ನಾನು ಏನನ್ನೂ ನೋಡಿಲ್ಲ. ಮುಖ್ಯವಾಗಿ, ನಮ್ಮ (ಕುಸ್ತಿಪಟುಗಳ) ಹೋರಾಟ ಸರ್ಕಾರದ ಜೊತೆಗಲ್ಲ’ ಎಂದು ಹೇಳಿದ್ದಾರೆ.

ಕೇಂದ್ರದ ನಿರ್ಧಾರವನ್ನು ಶ್ಲಾಘಿಸಿರುವ ಸಾಕ್ಷಿ, ಫೆಡರೇಷನ್ ಆಡಳಿತ ಮಂಡಳಿ ಅಮಾನತುಗೊಳಿಸಿರುವ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಆದೇಶದ ಕುರಿತು ನಾನು ಇನ್ನೂ ಬರವಣಿಗೆಯಲ್ಲಿ ಏನನ್ನೂ ನೋಡಿಲ್ಲ. ಸಂಜಯ್ ಸಿಂಗ್ ಅಥವಾ ಇಡೀ ಆಡಳಿತ ಮಂಡಳಿಯನ್ನು ಅಮಾನತುಗೊಳಿಸಲಾಗಿದೆಯೇ ಎಂದು ನನಗೆ ತಿಳಿದಿಲ್ಲ. ನಮ್ಮ ಹೋರಾಟ ಸರ್ಕಾರದ ಜೊತೆಗಲ್ಲ, ನಮ್ಮ ಹೋರಾಟ ಮಹಿಳಾ ಕುಸ್ತಿಪಟುಗಳಿಗಾಗಿ, ಅದಕ್ಕಾಗಿಯೇ ನಾನು ನಿವೃತ್ತಿ ಘೋಷಿಸಿದ್ದೇನೆ. ಮುಂಬರುವ ಕುಸ್ತಿಪಟುಗಳಿಗೆ ನ್ಯಾಯ ಸಿಗಬೇಕೆಂದು ಬಯಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

ತಮ್ಮ ನಿವೃತ್ತಿ ನಿರ್ಧಾರವನ್ನು ವಾಪಸ್ ಪಡೆಯುವ ಬಗ್ಗೆ ಸುಳಿವು ನೀಡಿದ ಸಾಕ್ಷಿ, ‘ಹೊಸದಾಗಿ ರಚನೆಯಾಗುವ ಕುಸ್ತಿ ಫೆಡರೇಶನ್ ನಿರ್ಧಾರದ ನಂತರ ನಾನು ನಿಮಗೆ ಹೇಳುತ್ತೇನೆ’ ಎಂದು ಹೇಳಿದ್ದಾರೆ.

‘ಡಬ್ಲ್ಯುಎಫ್ಐನ ಹೊಸದಾಗಿ ಚುನಾಯಿತ ಕಾರ್ಯನಿರ್ವಾಹಕ ಮಂಡಳಿಯು ಮಾಡಿದ ನಿರ್ಧಾರಗಳು ಸ್ಥಾಪಿತ ಕಾನೂನು ಮತ್ತು ಕಾರ್ಯವಿಧಾನದ ಮಾನದಂಡಗಳ ನಿರ್ಲಕ್ಕ್ಷ್ಯವನ್ನು ಪ್ರದರ್ಶಿಸುತ್ತವೆ. ಡಬ್ಲ್ಯುಎಫ್ಐನ ಸಾಂವಿಧಾನಿಕ ನಿಬಂಧನೆಗಳು ಮತ್ತು ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ಸಂಹಿತೆ ಎರಡನ್ನೂ ಉಲ್ಲಂಘಿಸುತ್ತವೆ. ಹೊಸದಾಗಿ ಚುನಾಯಿತ ಸಂಸ್ಥೆಯು ಹಿಂದಿನ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿದೆ.

ಪದಾಧಿಕಾರಿಗಳು ಕ್ರೀಡಾ ಸಂಹಿತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆ. ಫೆಡರೇಶನ್ನ ವ್ಯವಹಾರವನ್ನು ಮಾಜಿ ಪದಾಧಿಕಾರಿಗಳು ನಿಯಂತ್ರಿಸುತ್ತಿದ್ದ ಆವರಣದಿಂದಲೆ ನಡೆಸಲಾಗುತ್ತಿದೆ’ ಎಂದು ಸಚಿವಾಲಯ ಆರೋಪ ಮಾಡಿ ಅಮಾನತು ಆದೇಶ ಹೊರಡಿಸಿದೆ.

ಇದನ್ನೂ ಓದಿ; ಡಬ್ಲ್ಯುಎಫ್ಐ ಅಮಾನತಿಗೂ ನನಗೂ ಯಾವುದೇ ಸಂಬಂಧವಿಲ್ಲ: ಬ್ರಿಜ್ ಭೂಷಣ್ ಸಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...