Homeಮುಖಪುಟನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

ನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

- Advertisement -
- Advertisement -

”ದೇಶದ ಪ್ರಜಾಪ್ರಭುತ್ವದ ಮೂಲಭೂತ ರಚನೆಯ ಮೇಲೆ ಭಾರತ ಸರ್ಕಾರ ದಾಳಿ ಮಾಡುತ್ತಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಉಪನ್ಯಾಸದ ಸಂದರ್ಭದಲ್ಲಿ  ಆರೋಪಿಸಿದ್ದಾರೆ. ಇಸ್ರೇಲಿ ಸ್ಪೈವೇರ್ ಪೆಗಾಸಸ್ ಬಳಸಿ ತಮ್ಮ ಫೋನ್‌ನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅವರ ಸಂಭಾಷಣೆಗಳು ರೆಕಾರ್ಡ್ ಆಗುತ್ತಿರುವುದರಿಂದ ಫೋನ್‌ನಲ್ಲಿ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ಗುಪ್ತಚರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ಅವರು ಹೇಳಿದರು.

“ನನ್ನ ಫೋನ್‌ನಲ್ಲಿ ಸ್ಪೈವೇರ್ ಪೆಗಾಸಸ್ ಬಳಸಿ ಸಂಭಾಷೆಣೆಯನ್ನು ಕದಿಯಲಾಗಿದೆ. ಅದೇ ರೀತಿ ಅನೇಕ ರಾಜಕಾರಣಿಗಳ ಫೋನ್‌ಗಳನ್ನು ಹ್ಯಾಕ್ ಮಾಡಿದ್ದಾರೆ. ನನಗೆ ಗುಪ್ತಚರ ಅಧಿಕಾರಿಗಳು ಕರೆ ಮಾಡಿ, ‘ದಯವಿಟ್ಟು ನೀವು ಫೋನ್‌ನಲ್ಲಿ ಏನು ಮಾತನಾಡುತ್ತಿದ್ದೀರಿ ಎಂಬುದರ ಬಗ್ಗೆ ಜಾಗರೂಕರಾಗಿರಿ, ಏಕೆಂದರೆ ನಾವು ಆ ವಿಷಯವನ್ನು ರೆಕಾರ್ಡ್ ಮಾಡುತ್ತಿದ್ದೇವೆ’ ಎಂದು ಹೇಳಿದ್ದರು. ಇದು ನಾವು ಅನುಭವಿಸುವ ನಿರಂತರ ಒತ್ತಡವಾಗಿದೆ. ನನ್ನ ಮೇಲೆ ಹಲವಾರು ಕ್ರಿಮಿನಲ್ ಹೊಣೆಗಾರಿಕೆಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಭಾರತ ಸರ್ಕಾರದ ಈ ನಡೆಯ ವಿರುದ್ಧ ಮತ್ತು ನಮ್ಮನ್ನು ನಾವು ರಕ್ಷಿಸಲು ಹೋರಾಡುತ್ತಲೇ ಇದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿಯವರ ಭಾಷಣವನ್ನು ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಸಂಸತ್ತು, ಪತ್ರಿಕಾ ರಂಗ ಮತ್ತು ನ್ಯಾಯಾಂಗವನ್ನು ನಿರ್ಬಂಧಿಸಲಾಗಿದೆ ಎಂದು ಗಾಂಧಿ ಆರೋಪಿಸಿದರು.

”ಭಾರತೀಯ ಪ್ರಜಾಪ್ರಭುತ್ವವು ಒತ್ತಡದಲ್ಲಿದೆ ಮತ್ತು ಆಕ್ರಮಣದಲ್ಲಿದೆ ಎಂದು ಸಾಕಷ್ಟು ಸುದ್ದಿಯಾಗಿದೆ. ಈ ಬಗ್ಗೆ ಎಲ್ಲರಿಗೂ ತಿಳಿದಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕ, ನಾವು ಆ(ವಿರೋಧ) ಜಾಗದಲ್ಲಿ ಕುಳಿತು ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟು-ಸಂಸತ್ತು, ಮುಕ್ತ ಪತ್ರಿಕಾ, ನ್ಯಾಯಾಂಗ, ಚರ್ಚೆಗಳು ಎಲ್ಲವೂ ನಿರ್ಬಂಧಿತವಾಗುತ್ತಿವೆ. ಹಾಗಾಗಿ, ನಾವು ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದ್ದೇವೆ” ಎಂದು ಕಾಂಗ್ರೆಸ್ ಸಂಸದರು ಆರೋಪಿಸಿದ್ದಾರೆ.

ವಿರೋಧ ಪಕ್ಷದ ನಾಯಕರು ಸಂಸತ್ ಭವನದ ಮುಂದೆ ಸುಮ್ಮನೆ ನಿಂತು ಸಮಸ್ಯೆಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಗಳು ಹಿಡಿದಿರುವ ಚಿತ್ರವನ್ನು ತೋರಿಸಿದರು.

ಅಲ್ಪಸಂಖ್ಯಾತರು ಮತ್ತು ಪತ್ರಿಕೆಗಳ ಮೇಲೆ ಸರ್ಕಾರವು ದಾಳಿ ಮಾಡುತ್ತಿದೆ. ಭಾರತದಲ್ಲಿ ಪರಿಸ್ಥಿತಿ ಭೀಕರವಾಗಿದೆ ಎಂದು ಅವರು ಆರೋಪಿಸಿದರು.

”ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ಸಂವಿಧಾನದಲ್ಲಿ ವಿವರಿಸಲಾಗಿದೆ ಮತ್ತು ಆ ಒಕ್ಕೂಟಕ್ಕೆ ಮಾತುಕತೆ ಮತ್ತು ಸಂಭಾಷಣೆಯ ಅಗತ್ಯವಿದೆ. ಆದರೆ ಈಗ ಒಕ್ಕೂಟ ವ್ಯವಸ್ಥೆ ದಾಳಿ ಮತ್ತು ಬೆದರಿಕೆಗೆ ಒಳಗಾಗಿದೆ. ಸಂಸತ್ ಭವನದ ಮುಂದೆ ತೆಗೆದ ಚಿತ್ರವನ್ನು ನೀವು ನೋಡಬಹುದು. ವಿರೋಧ ಪಕ್ಷದ ನಾಯಕರು ಕೆಲವು ವಿಷಯಗಳ ಬಗ್ಗೆ ಮಾತನಾಡುತ್ತಾ ನಿಂತಿದ್ದೇವೆ. ಆದರೂ ನಮ್ಮನ್ನು ಜೈಲಿಗೆ ಹಾಕಲಾಯಿತು, ಈ ರೀತಿ 3 ಅಥವಾ 4 ಬಾರಿ ಸಂಭವಿಸಿದೆ. ಅಲ್ಪಸಂಖ್ಯಾತರು ಮತ್ತು ಪತ್ರಿಕಾ ದಾಳಿಗಳ ಬಗ್ಗೆಯೂ ನೀವು ಕೇಳಿದ್ದೀರಿ, ಏನಾಗುತ್ತಿದೆ ಎಂದು ನಿಮಗೆ ಅರ್ಥವಾಗುತ್ತದೆ” ಎಂದು ರಾಹುಲ್ ಹೇಳಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...