Homeಮುಖಪುಟನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

ನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

- Advertisement -
- Advertisement -

”ದೇಶದ ಪ್ರಜಾಪ್ರಭುತ್ವದ ಮೂಲಭೂತ ರಚನೆಯ ಮೇಲೆ ಭಾರತ ಸರ್ಕಾರ ದಾಳಿ ಮಾಡುತ್ತಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಉಪನ್ಯಾಸದ ಸಂದರ್ಭದಲ್ಲಿ  ಆರೋಪಿಸಿದ್ದಾರೆ. ಇಸ್ರೇಲಿ ಸ್ಪೈವೇರ್ ಪೆಗಾಸಸ್ ಬಳಸಿ ತಮ್ಮ ಫೋನ್‌ನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅವರ ಸಂಭಾಷಣೆಗಳು ರೆಕಾರ್ಡ್ ಆಗುತ್ತಿರುವುದರಿಂದ ಫೋನ್‌ನಲ್ಲಿ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ಗುಪ್ತಚರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ಅವರು ಹೇಳಿದರು.

“ನನ್ನ ಫೋನ್‌ನಲ್ಲಿ ಸ್ಪೈವೇರ್ ಪೆಗಾಸಸ್ ಬಳಸಿ ಸಂಭಾಷೆಣೆಯನ್ನು ಕದಿಯಲಾಗಿದೆ. ಅದೇ ರೀತಿ ಅನೇಕ ರಾಜಕಾರಣಿಗಳ ಫೋನ್‌ಗಳನ್ನು ಹ್ಯಾಕ್ ಮಾಡಿದ್ದಾರೆ. ನನಗೆ ಗುಪ್ತಚರ ಅಧಿಕಾರಿಗಳು ಕರೆ ಮಾಡಿ, ‘ದಯವಿಟ್ಟು ನೀವು ಫೋನ್‌ನಲ್ಲಿ ಏನು ಮಾತನಾಡುತ್ತಿದ್ದೀರಿ ಎಂಬುದರ ಬಗ್ಗೆ ಜಾಗರೂಕರಾಗಿರಿ, ಏಕೆಂದರೆ ನಾವು ಆ ವಿಷಯವನ್ನು ರೆಕಾರ್ಡ್ ಮಾಡುತ್ತಿದ್ದೇವೆ’ ಎಂದು ಹೇಳಿದ್ದರು. ಇದು ನಾವು ಅನುಭವಿಸುವ ನಿರಂತರ ಒತ್ತಡವಾಗಿದೆ. ನನ್ನ ಮೇಲೆ ಹಲವಾರು ಕ್ರಿಮಿನಲ್ ಹೊಣೆಗಾರಿಕೆಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಭಾರತ ಸರ್ಕಾರದ ಈ ನಡೆಯ ವಿರುದ್ಧ ಮತ್ತು ನಮ್ಮನ್ನು ನಾವು ರಕ್ಷಿಸಲು ಹೋರಾಡುತ್ತಲೇ ಇದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿಯವರ ಭಾಷಣವನ್ನು ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಸಂಸತ್ತು, ಪತ್ರಿಕಾ ರಂಗ ಮತ್ತು ನ್ಯಾಯಾಂಗವನ್ನು ನಿರ್ಬಂಧಿಸಲಾಗಿದೆ ಎಂದು ಗಾಂಧಿ ಆರೋಪಿಸಿದರು.

”ಭಾರತೀಯ ಪ್ರಜಾಪ್ರಭುತ್ವವು ಒತ್ತಡದಲ್ಲಿದೆ ಮತ್ತು ಆಕ್ರಮಣದಲ್ಲಿದೆ ಎಂದು ಸಾಕಷ್ಟು ಸುದ್ದಿಯಾಗಿದೆ. ಈ ಬಗ್ಗೆ ಎಲ್ಲರಿಗೂ ತಿಳಿದಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕ, ನಾವು ಆ(ವಿರೋಧ) ಜಾಗದಲ್ಲಿ ಕುಳಿತು ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟು-ಸಂಸತ್ತು, ಮುಕ್ತ ಪತ್ರಿಕಾ, ನ್ಯಾಯಾಂಗ, ಚರ್ಚೆಗಳು ಎಲ್ಲವೂ ನಿರ್ಬಂಧಿತವಾಗುತ್ತಿವೆ. ಹಾಗಾಗಿ, ನಾವು ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದ್ದೇವೆ” ಎಂದು ಕಾಂಗ್ರೆಸ್ ಸಂಸದರು ಆರೋಪಿಸಿದ್ದಾರೆ.

ವಿರೋಧ ಪಕ್ಷದ ನಾಯಕರು ಸಂಸತ್ ಭವನದ ಮುಂದೆ ಸುಮ್ಮನೆ ನಿಂತು ಸಮಸ್ಯೆಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಗಳು ಹಿಡಿದಿರುವ ಚಿತ್ರವನ್ನು ತೋರಿಸಿದರು.

ಅಲ್ಪಸಂಖ್ಯಾತರು ಮತ್ತು ಪತ್ರಿಕೆಗಳ ಮೇಲೆ ಸರ್ಕಾರವು ದಾಳಿ ಮಾಡುತ್ತಿದೆ. ಭಾರತದಲ್ಲಿ ಪರಿಸ್ಥಿತಿ ಭೀಕರವಾಗಿದೆ ಎಂದು ಅವರು ಆರೋಪಿಸಿದರು.

”ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ಸಂವಿಧಾನದಲ್ಲಿ ವಿವರಿಸಲಾಗಿದೆ ಮತ್ತು ಆ ಒಕ್ಕೂಟಕ್ಕೆ ಮಾತುಕತೆ ಮತ್ತು ಸಂಭಾಷಣೆಯ ಅಗತ್ಯವಿದೆ. ಆದರೆ ಈಗ ಒಕ್ಕೂಟ ವ್ಯವಸ್ಥೆ ದಾಳಿ ಮತ್ತು ಬೆದರಿಕೆಗೆ ಒಳಗಾಗಿದೆ. ಸಂಸತ್ ಭವನದ ಮುಂದೆ ತೆಗೆದ ಚಿತ್ರವನ್ನು ನೀವು ನೋಡಬಹುದು. ವಿರೋಧ ಪಕ್ಷದ ನಾಯಕರು ಕೆಲವು ವಿಷಯಗಳ ಬಗ್ಗೆ ಮಾತನಾಡುತ್ತಾ ನಿಂತಿದ್ದೇವೆ. ಆದರೂ ನಮ್ಮನ್ನು ಜೈಲಿಗೆ ಹಾಕಲಾಯಿತು, ಈ ರೀತಿ 3 ಅಥವಾ 4 ಬಾರಿ ಸಂಭವಿಸಿದೆ. ಅಲ್ಪಸಂಖ್ಯಾತರು ಮತ್ತು ಪತ್ರಿಕಾ ದಾಳಿಗಳ ಬಗ್ಗೆಯೂ ನೀವು ಕೇಳಿದ್ದೀರಿ, ಏನಾಗುತ್ತಿದೆ ಎಂದು ನಿಮಗೆ ಅರ್ಥವಾಗುತ್ತದೆ” ಎಂದು ರಾಹುಲ್ ಹೇಳಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...