Homeಮುಖಪುಟನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

ನಮ್ಮ ಸರ್ಕಾರ ಪ್ರಜಾಪ್ರಭುತ್ವದ ಮೇಲೆ ದಾಳಿ ಮಾಡುತ್ತಿದೆ: ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಆರೋಪ

- Advertisement -
- Advertisement -

”ದೇಶದ ಪ್ರಜಾಪ್ರಭುತ್ವದ ಮೂಲಭೂತ ರಚನೆಯ ಮೇಲೆ ಭಾರತ ಸರ್ಕಾರ ದಾಳಿ ಮಾಡುತ್ತಿದೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಉಪನ್ಯಾಸದ ಸಂದರ್ಭದಲ್ಲಿ  ಆರೋಪಿಸಿದ್ದಾರೆ. ಇಸ್ರೇಲಿ ಸ್ಪೈವೇರ್ ಪೆಗಾಸಸ್ ಬಳಸಿ ತಮ್ಮ ಫೋನ್‌ನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಅವರ ಸಂಭಾಷಣೆಗಳು ರೆಕಾರ್ಡ್ ಆಗುತ್ತಿರುವುದರಿಂದ ಫೋನ್‌ನಲ್ಲಿ ಮಾತನಾಡುವಾಗ ಎಚ್ಚರಿಕೆ ವಹಿಸುವಂತೆ ಗುಪ್ತಚರ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ಅವರು ಹೇಳಿದರು.

“ನನ್ನ ಫೋನ್‌ನಲ್ಲಿ ಸ್ಪೈವೇರ್ ಪೆಗಾಸಸ್ ಬಳಸಿ ಸಂಭಾಷೆಣೆಯನ್ನು ಕದಿಯಲಾಗಿದೆ. ಅದೇ ರೀತಿ ಅನೇಕ ರಾಜಕಾರಣಿಗಳ ಫೋನ್‌ಗಳನ್ನು ಹ್ಯಾಕ್ ಮಾಡಿದ್ದಾರೆ. ನನಗೆ ಗುಪ್ತಚರ ಅಧಿಕಾರಿಗಳು ಕರೆ ಮಾಡಿ, ‘ದಯವಿಟ್ಟು ನೀವು ಫೋನ್‌ನಲ್ಲಿ ಏನು ಮಾತನಾಡುತ್ತಿದ್ದೀರಿ ಎಂಬುದರ ಬಗ್ಗೆ ಜಾಗರೂಕರಾಗಿರಿ, ಏಕೆಂದರೆ ನಾವು ಆ ವಿಷಯವನ್ನು ರೆಕಾರ್ಡ್ ಮಾಡುತ್ತಿದ್ದೇವೆ’ ಎಂದು ಹೇಳಿದ್ದರು. ಇದು ನಾವು ಅನುಭವಿಸುವ ನಿರಂತರ ಒತ್ತಡವಾಗಿದೆ. ನನ್ನ ಮೇಲೆ ಹಲವಾರು ಕ್ರಿಮಿನಲ್ ಹೊಣೆಗಾರಿಕೆಯ ಪ್ರಕರಣಗಳನ್ನು ದಾಖಲಿಸಲಾಗಿದೆ. ಭಾರತ ಸರ್ಕಾರದ ಈ ನಡೆಯ ವಿರುದ್ಧ ಮತ್ತು ನಮ್ಮನ್ನು ನಾವು ರಕ್ಷಿಸಲು ಹೋರಾಡುತ್ತಲೇ ಇದ್ದೇವೆ” ಎಂದು ರಾಹುಲ್ ಗಾಂಧಿ ಹೇಳಿದರು.

ರಾಹುಲ್ ಗಾಂಧಿಯವರ ಭಾಷಣವನ್ನು ಕಾಂಗ್ರೆಸ್ ನಾಯಕ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮಾಜಿ ಸಲಹೆಗಾರ ಸ್ಯಾಮ್ ಪಿತ್ರೋಡಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಸಂಸತ್ತು, ಪತ್ರಿಕಾ ರಂಗ ಮತ್ತು ನ್ಯಾಯಾಂಗವನ್ನು ನಿರ್ಬಂಧಿಸಲಾಗಿದೆ ಎಂದು ಗಾಂಧಿ ಆರೋಪಿಸಿದರು.

”ಭಾರತೀಯ ಪ್ರಜಾಪ್ರಭುತ್ವವು ಒತ್ತಡದಲ್ಲಿದೆ ಮತ್ತು ಆಕ್ರಮಣದಲ್ಲಿದೆ ಎಂದು ಸಾಕಷ್ಟು ಸುದ್ದಿಯಾಗಿದೆ. ಈ ಬಗ್ಗೆ ಎಲ್ಲರಿಗೂ ತಿಳಿದಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕ, ನಾವು ಆ(ವಿರೋಧ) ಜಾಗದಲ್ಲಿ ಕುಳಿತು ನಮ್ಮ ಕೆಲಸ ಮಾಡುತ್ತಿದ್ದೇವೆ. ಪ್ರಜಾಪ್ರಭುತ್ವಕ್ಕೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟು-ಸಂಸತ್ತು, ಮುಕ್ತ ಪತ್ರಿಕಾ, ನ್ಯಾಯಾಂಗ, ಚರ್ಚೆಗಳು ಎಲ್ಲವೂ ನಿರ್ಬಂಧಿತವಾಗುತ್ತಿವೆ. ಹಾಗಾಗಿ, ನಾವು ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ದಾಳಿಯನ್ನು ಎದುರಿಸುತ್ತಿದ್ದೇವೆ” ಎಂದು ಕಾಂಗ್ರೆಸ್ ಸಂಸದರು ಆರೋಪಿಸಿದ್ದಾರೆ.

ವಿರೋಧ ಪಕ್ಷದ ನಾಯಕರು ಸಂಸತ್ ಭವನದ ಮುಂದೆ ಸುಮ್ಮನೆ ನಿಂತು ಸಮಸ್ಯೆಗಳ ಬಗ್ಗೆ ಮಾತನಾಡಿದ್ದಕ್ಕಾಗಿ ಅವರನ್ನು ಜೈಲಿಗೆ ಹಾಕಲಾಗುತ್ತಿದೆ ಎಂದು ಆರೋಪಿಸಿ ಪೊಲೀಸ್ ಅಧಿಕಾರಿಗಳು ಹಿಡಿದಿರುವ ಚಿತ್ರವನ್ನು ತೋರಿಸಿದರು.

ಅಲ್ಪಸಂಖ್ಯಾತರು ಮತ್ತು ಪತ್ರಿಕೆಗಳ ಮೇಲೆ ಸರ್ಕಾರವು ದಾಳಿ ಮಾಡುತ್ತಿದೆ. ಭಾರತದಲ್ಲಿ ಪರಿಸ್ಥಿತಿ ಭೀಕರವಾಗಿದೆ ಎಂದು ಅವರು ಆರೋಪಿಸಿದರು.

”ಭಾರತವನ್ನು ರಾಜ್ಯಗಳ ಒಕ್ಕೂಟ ಎಂದು ಸಂವಿಧಾನದಲ್ಲಿ ವಿವರಿಸಲಾಗಿದೆ ಮತ್ತು ಆ ಒಕ್ಕೂಟಕ್ಕೆ ಮಾತುಕತೆ ಮತ್ತು ಸಂಭಾಷಣೆಯ ಅಗತ್ಯವಿದೆ. ಆದರೆ ಈಗ ಒಕ್ಕೂಟ ವ್ಯವಸ್ಥೆ ದಾಳಿ ಮತ್ತು ಬೆದರಿಕೆಗೆ ಒಳಗಾಗಿದೆ. ಸಂಸತ್ ಭವನದ ಮುಂದೆ ತೆಗೆದ ಚಿತ್ರವನ್ನು ನೀವು ನೋಡಬಹುದು. ವಿರೋಧ ಪಕ್ಷದ ನಾಯಕರು ಕೆಲವು ವಿಷಯಗಳ ಬಗ್ಗೆ ಮಾತನಾಡುತ್ತಾ ನಿಂತಿದ್ದೇವೆ. ಆದರೂ ನಮ್ಮನ್ನು ಜೈಲಿಗೆ ಹಾಕಲಾಯಿತು, ಈ ರೀತಿ 3 ಅಥವಾ 4 ಬಾರಿ ಸಂಭವಿಸಿದೆ. ಅಲ್ಪಸಂಖ್ಯಾತರು ಮತ್ತು ಪತ್ರಿಕಾ ದಾಳಿಗಳ ಬಗ್ಗೆಯೂ ನೀವು ಕೇಳಿದ್ದೀರಿ, ಏನಾಗುತ್ತಿದೆ ಎಂದು ನಿಮಗೆ ಅರ್ಥವಾಗುತ್ತದೆ” ಎಂದು ರಾಹುಲ್ ಹೇಳಿಕೊಂಡರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...