Homeಕರ್ನಾಟಕ'ಬಂಡೆ ರೀತಿ ನಮ್ಮ ಸರ್ಕಾರ ಭದ್ರ': ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ, ಡಿಸಿಎಂ

‘ಬಂಡೆ ರೀತಿ ನಮ್ಮ ಸರ್ಕಾರ ಭದ್ರ’: ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ, ಡಿಸಿಎಂ

- Advertisement -
- Advertisement -

“ಸರ್ಕಾರ ಬಿದ್ದೋಗುತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ಆದರೆ, ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಭದ್ರವಾಗಿರುತ್ತೆ. 2028ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, “ನೀರಾವರಿಗೆ ನಮ್ಮ ಈ ಸರ್ಕಾರ 25 ಸಾವಿರ ಕೋಟಿ ರೂಪಾಯಿ ಕೊಟ್ಟಿದೆ. ಬೇರೆ ಯಾವ ಸರ್ಕಾರವಾದರೂ ಈ ಮಟ್ಟದ ಅನುದಾನ ಕೊಟ್ಟಿತ್ತಾ? ಎಂದು ಪ್ರಶ್ನಿಸಿದರು.

ಸೋತ ಗಿರಾಕಿಗಳು ಸರ್ಕಾರ ಬಿದ್ದೋಗುತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನಗೂ ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೂ ಸರಿ ಇಲ್ಲ ಎಂದು ಬುರುಡೆ ಬಿಡುತ್ತಿದ್ದಾರೆ. ನಾನು ಮತ್ತು ಶಿವಕುಮಾರ್ ಇಬ್ಬರೂ ಒಟ್ಟಾಗಿ, ಗಟ್ಟಿಯಾಗಿದ್ದೀವಿ. ನಮ್ಮ ಸರ್ಕಾರವೂ ಐದು ವರ್ಷ ಗ್ಯಾರಂಟಿಯಾಗಿ ಗಟ್ಟಿಯಾಗಿ ಇರುತ್ತದೆ. 2028 ರಲ್ಲೂ ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳಿದರು.

ಅಭಿವೃದ್ಧಿಗೆ ಹಣ ಇಲ್ಲ, ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಬುರುಡೆ ಬಿಡುತ್ತಿರುವ ಬಿಜೆಪಿಯವರು, ದಿವಾಳಿ ಆಗಿದ್ದರೆ 25 ಸಾವಿರ ಕೋಟಿ ರೂಪಾಯಿ ಎಲ್ಲಿಂದ ಬಂತು ಎಂದು ನಾಡಿನ ಜನರಿಗೆ ಉತ್ತರಿಸಬೇಕು ಎಂದರು.

ಕೃಷಿ ಪ್ರಗತಿಗಾಗಿ ವರ್ಷಕ್ಕೆ 19 ಸಾವಿರ ಕೋಟಿ ಪಂಪ್ ಸೆಟ್ ಸಬ್ಸಿಡಿಯನ್ನು ರೈತರಿಗೆ ಕೊಟ್ಟಿದ್ದೇವೆ ಎಂದ ಸಿಎಂ, 92 ವರ್ಷಗಳ ಬಳಿಕ ಜೂನ್ ತಿಂಗಳಲ್ಲೇ ಭರ್ತಿ ಆಗಿರುವ ಕೆಅರ್‌ಎಸ್‌ನಲ್ಲಿ ಸ್ಮಾರಕ ನಿರ್ಮಿಸಿ ಎಂದು ಕಾವೇರಿ ನಿಗಮದ ಎಂ.ಡಿಗೆ ಸೂಚನೆ ನೀಡಿದರು.

ಕೆಆರ್‌ಎಸ್‌ನ ಒಟ್ಟು 124 ಅಡಿ ಸಾಮರ್ಥ್ಯದಲ್ಲಿ 120.90 ಅಡಿ ಭರ್ತಿ ಆಗಿದೆ. ಅಣೆಕಟ್ಟೆಗೆ 49 ಟಿಎಂಸಿ ನೀರಿನ ಸಾಮರ್ಥ್ಯವಿದೆ. 193 ವರ್ಷಗಳಲ್ಲಿ 76 ಬಾರಿ ಭರ್ತಿಯಾಗಿದೆ. 2023-24ರಲ್ಲಿ ಬರಗಾಲವಿತ್ತು. ಈ ಕಾರಣಕ್ಕೇ ‘ಸಿದ್ದರಾಮಯ್ಯ ಕಾಲ್ಗುಣ ಚೆನ್ನಾಗಿಲ್ಲ, ಕಾಂಗ್ರೆಸ್ ಸರ್ಕಾರದ ಸರಿಯಿಲ್ಲ” ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಈಗ ಕಳೆದು ಎರಡು ವರ್ಷಗಳಿಂದ ರಾಜ್ಯದಲ್ಲಿ ಮಳೆ, ಬೆಳೆ ಉತ್ತಮವಾಗಿ ಆಗುತ್ತಿದೆ. ವಿರೋಧ ಪಕ್ಷಗಳು ಮೂಡಾತ್ಮರು ಈಗ ಏನು ಹೇಳ್ತಾರೆ ಎಂದು ಸಿಎಂ ಅಣಕಿಸಿದರು.

ನಾವು ಈ ಬಾರಿ ಕಾವೇರಿ ಅಭಿವೃದ್ಧಿ ನಿಗಮಕ್ಕೆ 3,000 ಕೋಟಿ ಹಣ ರೂಪಾಯಿ ಕೊಟ್ಟಿದ್ದೇವೆ. ಈಗ ಟೀಕಿಸುತ್ತಿರುವವರು ಅಧಿಕಾರದಲ್ಲಿದ್ದಾಗ ಕಾವೇರಿ ನಿಗಮಕ್ಕೆ ಹಣ ಕೊಟ್ಟಿರಲಿಲ್ಲ ಎಂದು ಎಂದರು.

ಸುಳ್ಳು ಹೇಳುವ ಚಾಳಿಯಲ್ಲಿರುವ ಬಿಜೆಪಿಗೆ ರಾಜ್ಯದ ಜನ ಪೂರ್ಣ ಅಧಿಕಾರವನ್ನೇ ಕೊಟ್ಟಿಲ್ಲ. ಆಪರೇಷನ್ ಕಮಲ ಮಾಡಿ ಎರಡು ಬಾರಿ ಅಧಿಕಾರಕ್ಕೆ ಬಂದರು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಕೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಕಾಲೆಳೆದರು.

ನಾನು ಸುಳ್ಳು ಹೇಳಿದ್ರೆ ಜನರಿಗೆ ಗೊತ್ತಾಗಲ್ವಾ? ಹಾಗಾಗಿ, ಬಿಜೆಪಿ, ಜೆಡಿಎಸ್‌ನವರು ಜನರನ್ನು ದಡ್ಡರೆಂದು ಭಾವಿಸಬಾರದು. ಜನರಿಗೆ ಸುಳ್ಳು ಹೇಳಿ ಹೋಗಬಾರದು ಎಂದರು.

ನಾವು ಅಧಿಕಾರದಲ್ಲಿದ್ದಾಗ ಯಾವಾಗಲಾದರೂ ರೈತರಿಗೆ ಬೀಜ, ಗೊಬ್ಬರಕ್ಕೆ ತೊಂದರೆ ಮಾಡಿದ್ದೇವಾ? ಬೀಜ ಕೇಳಿದವರಿಗೆ ಗೋಲಿಬಾರ್ ಮಾಡಿದ್ದೇವಾ ಎಂದು ಪ್ರಶ್ನಿಸಿದರು.

ಕೈ ಕೈ ಹಿಡಿದು ಒಗ್ಗಟ್ಟು ಪ್ರದರ್ಶಿಸಿದ ಸಿಎಂ, ಡಿಸಿಎಂ

ಕೆಆರ್‌ಎಸ್. ಜಲಾಶಯಕ್ಕೆ ಬಾಗಿನ ಅರ್ಪಿಸಲು ಸೋಮವಾರ ಬೆಂಗಳೂರಿನಿಂದ ಸಿಎಂ, ಡಿಸಿಎಂ ಒಟ್ಟಿಗೆ ಒಂದೇ ವಿಮಾನದಲ್ಲಿ ಮೈಸೂರಿನ‌ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವ ವೇಳೆ ಕೈ ಕೈ ಹಿಡಿದುಕೊಂಡು ನಾವಿಬ್ಬರೂ ಒಟ್ಟಿಗೆ ಇದ್ದೇವೆ ಎಂಬ ಸ್ಪಷ್ಟ ಸಂದೇಶ ರವಾನಿಸಿದರು.

ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ನಿರ್ಧಾರ: ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...