Homeಕರ್ನಾಟಕಪ್ರವೀಣ್ ಪತ್ನಿ ಉದ್ಯೋಗ ರದ್ದಾಗುವುದರಲ್ಲಿ ನಮ್ಮ ಸರ್ಕಾರದ ಹಸ್ತಕ್ಷೇಪವಿಲ್ಲ, ಮರು ನೇಮಕ ಮಾಡಲಾಗುವುದು: ಸಿದ್ದರಾಮಯ್ಯ

ಪ್ರವೀಣ್ ಪತ್ನಿ ಉದ್ಯೋಗ ರದ್ದಾಗುವುದರಲ್ಲಿ ನಮ್ಮ ಸರ್ಕಾರದ ಹಸ್ತಕ್ಷೇಪವಿಲ್ಲ, ಮರು ನೇಮಕ ಮಾಡಲಾಗುವುದು: ಸಿದ್ದರಾಮಯ್ಯ

- Advertisement -
- Advertisement -

ಪ್ರವೀಣ್ ನೆಟ್ಟಾರು ಪತ್ನಿ ಉದ್ಯೋಗ ರದ್ದಾಗುವುದರಲ್ಲಿ ನಮ್ಮ ಸರ್ಕಾರದ ಹಸ್ತಕ್ಷೇಪವಿಲ್ಲ. ಅವರನ್ನು ಮರು ನೇಮಕ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಿಜೆಪಿಯ ಕೀಳು ಮಟ್ಟದ ರಾಜಕೀಯ – ಪದ್ಮರಾಜ್ ಕಿಡಿ

ಬಿಜೆಪಿ ಸರ್ಕಾರ ಕೀಳುಮಟ್ಟದ ರಾಜಕೀಯ, ನಾಟಕ ಮಾಡುವುದನ್ನು ನಿಲ್ಲಿಸಲಿ. ಸಾಮಾನ್ಯ ಜನರಿಗೆ ಬಿಜೆಪಿಯವರ ಕಪಟ ನಾಟಕದ ಬಗ್ಗೆ ತಿಳಿದಿದೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ ಎಂಬ ಬಗ್ಗೆ ಬಿಜೆಪಿಯ ಶಾಸಕರು, ಸಂಸದರಿಗೆ ಸಾಮಾನ್ಯ ತಿಳಿವಳಿಕೆಯೂ ಇಲ್ಲವೆ? ಇದ್ದರೂ ಏಕೆ ತಾತ್ಕಾಲಿಕ ಹುದ್ದೆ ನೀಡಲಾಯಿತು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪ್ರಶ್ನಿಸಿದ್ದಾರೆ.

“ಇದೆಲ್ಲ ಅರಿತಿದ್ದರೂ ಕೂಡಾ ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಮುಖ್ಯಮಂತ್ರಿಯವರ ವಿಶೇಷ ಅಧಿಕಾರ ಬಳಸಿ ಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಿದ್ದಾರೆ. ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ. ಅದೇ ರೀತಿ ನೂತನ ಕುಮಾರಿ ಅವರ ಕೆಲಸ ರದ್ದಾಗಿದೆ. ಬಿಜೆಪಿಗೆ ಪ್ರವೀಣ ನೆಟ್ಟಾರು ಹಾಗೂ ಅವರ ಪತ್ನಿ ಮೇಲೆ ಕರುಣೆ ಇದ್ದರೆ ಅಭಿಮಾನ ಇದ್ದಿದ್ದರೆ ಈ ಮೊದಲೇ ಅವರಿಗೆ ಯಾಕೆ ಶಾಶ್ವತ ಉದ್ಯೋಗ ನೀಡಲಿಲ್ಲ. ಶಾಶ್ವತ ಉದ್ಯೋಗ ಮಾಡಿಸಿಕೊಡಲು ಯಾಕೆ ಪ್ರಯತ್ನಿಸಿಲ್ಲ” ಎಂದು ಅವರು ಕಿಡಿಕಾರಿದ್ದಾರೆ.

“ಬಿಜೆಪಿ ಸರ್ಕಾರ ಇಷ್ಟು ದಿನ ಮಾಡಿದೆಲ್ಲ ನಾಟಕ ಎಂಬುದು ಈ ವಿಚಾರದಿಂದ ಬಹಿರಂಗವಾಗಿದೆ. ನೂತನರವರಿಗೆ ಉದ್ಯೋಗ ನೀಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಈಗಾಗಲೇ ನೂತನ ಅವರ ಜೊತೆಗೆ ಕಾಂಗ್ರೆಸ್ ಪಕ್ಷದ ಪರವಾಗಿ ಮಾತುಕತೆ ನಡೆಸಿದ್ದೇವೆ. ಅವರಿಗೆ ಕೂಡಲೇ ಉದ್ಯೋಗ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಈ ನಡುವೆ ಪ್ರವೀಣ್ ನೆಟ್ಟಾರು ಪತ್ನಿ ನೂತನ್ ಕುಮಾರಿಯವರಿಗೆ ಕೇಂದ್ರ ಸರ್ಕಾರದ ಉದ್ಯೋಗ ಕೊಡಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಕರಾವಳಿ ಕೋಮುಹತ್ಯೆಗಳ ತನಿಖೆಗೆ ಎಸ್‌ಐಟಿ ರಚಿಸಿ: ರಮಾನಾಥ್ ರೈ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...