Homeಕರ್ನಾಟಕಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ

- Advertisement -
- Advertisement -

“ಬೆಂಗಳೂರನ್ನು ಸ್ವಚ್ಛವಾಗಿಡಲು ನಾವು ಮಹಿಳಾ ಪೌರ ಕಾರ್ಮಿಕರು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಕೆಲಸ ಮಾಡುತ್ತೇವೆ. ಆದರೆ ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ. ಇದರಿಂದ ಹತ್ತಾರು ಮಹಿಳಾ ಕಾರ್ಮಿಕರಿಗೆ ಅಲರ್ಜಿ ಸೇರಿದಂತೆ ಕಿಡ್ನಿ ತೊಂದರೆಗಳಾಗಿವೆ” ಎಂದು 25 ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆಂಜನಮ್ಮ ಎಂಬುವವರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.

“ನಾನು ಕಳೆದ 25 ವರ್ಷಗಳಿಂದ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 39ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ಕೂಡ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೇವಲ 500 ರೂ. ವೇತನ ಇದ್ದಾಗಿನಿಂದಲೂ ನಾವು ಈ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಉದ್ಯೋಗ ಇನ್ನೂ ಖಾಯಂ ಆಗಿಲ್ಲ. ಈ ಕುರಿತು ನಾವು ಪ್ರತಿಭಾರಿಯೂ ಹೋರಾಟ ಮಾಡುತ್ತಲೆ ಇದ್ದೇವೆ. ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿಯೂ ಸಹ ಮಹಿಳೆಯರಿಗೆ ಯಾವುದೇ ರಜೆಗಳು ಇರುವುದಿಲ್ಲ. ನಾವು ಮಾಸಿಕ ಋತುಚಕ್ರಕ್ಕೆ ಒಳಗಾದಾಗ ಇನ್ನಿಲ್ಲದ ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಕೆಲವು ದಿನಗಳ ಕಾಲ ಪಾಲಿಕೆಯೆ ನಮಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿತ್ತು. ಆದರೆ ಆ ಊಟದಲ್ಲಿ ಹುಳಗಳು ಕಂಡಬಂದಿದ್ದವು. ಬೇಕಾಬಿಟ್ಟಿ ಅಡಿಗೆ ಮಾಡಿ ತಂದುಕೊಡುತ್ತಿದ್ದರು. ಈಗ ಅದನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದರು.

ನಮಗೆ ಈಗ ಕೇವಲ 12 ಸಾವಿರ ವೇತನ ನೀಡುತ್ತಿದ್ದಾರೆ. ನಮಗೆ ನ್ಯಾಯಯುತವಾದ ಯಾವುದೇ ಸೌಲಭ್ಯಗಳನ್ನೂ ನೀಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿದ್ದೇವೆ. ಅದರಿಂದ ವೇತನವೇನೋ ಸ್ವಲ್ಪ ಹೆಚ್ಚಾಯಿತು ಎನ್ನುವುದನ್ನು ಬಿಟ್ಟರೆ ಉಳಿದ ಬೇಡಿಕೆಗಳೆಲ್ಲಾ ಹಾಗೇ ಉಳಿದಿವೆ ಎಂದು ಹೇಳಿದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಎಷ್ಟೋ ಜನರನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ. ಅವರ ಹುದ್ದೆ ಖಾಯಂ ಆಗಿಲ್ಲವಾದ್ದರಿಂದ ಉದ್ಯೋಗ ಕಳೆದುಕೊಂಡವರೆಲ್ಲರೂ ಈಗ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗದಿಂದ ವಜಾಗೊಳಿಸಿದ ಸಂದರ್ಭದಲ್ಲಿ ಕಾರ್ಮಿಕರಿಗೆ ನೀಡುತ್ತೇವೆ ಎನ್ನಲಾಗಿದ್ದ 10 ಲಕ್ಷ ಹಣವನ್ನೂ ನೀಡಿಲ್ಲ. ಈ ಕಡೆ ಉದ್ಯೋಗವೂ ಖಾಯಂ ಆಗಿಲ್ಲ. ನಾವು ಏನು ಮಾಡಬೇಕು? ಬಯೋ ಮೆಟ್ರಿಕ್ ಬಂದಿದ್ದರಿಂದ ಪ್ರತಿ ತಿಂಗಳೂ 7-8 ನೇ ತಾರೀಖಿನಂದು ವೇತನ ಬರುತ್ತಿದೆ ಅಷ್ಟೆ. ಆದರೆ ಕೇವಲ 12 ಸಾವಿರ ವೇತನದಲ್ಲಿ ನಮ್ಮ ಮನೆ, ಮಕ್ಕಳ ಶಿಕ್ಷಣ, ಆರೋಗ್ಯ ಮುಂತಾದ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ನಮಗೆ ಕನಿಷ್ಠ 21 ಸಾವಿರ ವೇತನ ಖಾತ್ರಿಗೊಳಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಲಸದಿಂದ ವಜಾಗೊಂಡವರನ್ನು ಅವರ ಮಕ್ಕಳೂ ನೋಡಿಕೊಳ್ಳುತ್ತಿಲ್ಲ. ಏಕೆಂದರೆ ಕೊರೊನಾ ಕಾರಣದಿಂದ ಅವರ ಮಕ್ಕಳೂ ಸಹ ಉದ್ಯೋಗ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಅವರೂ ಹೆಚ್ಚಿನ ಶಿಕ್ಷಣ ಪಡೆದುಕೊಂಡಿಲ್ಲ. ಇನ್ನು ಈ ಕಾಲದಲ್ಲಿ ಯಾವ ಮಕ್ಕಳು ತಮ್ಮ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಾರೆ. ಹಾಗಾಗಿ ಕೆಲಸದಿಂದ ವಜಾಗೊಂಡವರೆಲ್ಲರೂ ವಾಸ್ತವದಲ್ಲಿ ಬೀದಿಯಲ್ಲಿದ್ದಾರೆ ಎಂದು ವಿವರಿಸಿದರು.

“ನಾವು ಜೀವನ ಸಾಗಿಸುವುದೇ ಕಷ್ಟವಾಗಿದೆ. ನಮಗೆ ಜೀವನದಲ್ಲಿ ಏನೂ ಸಿಕ್ಕಿಲ್ಲ. ಈಗ ನಾವು ಸಂಪೂರ್ಣ ಸೋತಿದ್ದೇವೆ. ನಮ್ಮ ಆರೋಗ್ಯವನ್ನೂ ಕಳೆದುಕೊಂಡಿದ್ದೇವೆ. ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ ಮತ್ತು ಜೀವನವನ್ನು ಮುಡಿಪಾಗಿಟ್ಟಿದ್ದೇವೆ ಎಂಬುದನ್ನು ನಮ್ಮ ಮೇಲಧಿಕಾರಿಗಳು ಅರಿತುಕೊಳ್ಳಬೇಕು. ಈ ಸಮಾಜಕ್ಕಾಗಿ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರ ಗುರುತಿಸಬೇಕು. ನಮ್ಮ ಹಕ್ಕುಗಳನ್ನು ಕಾಪಾಡಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...