Homeಕರ್ನಾಟಕಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ

- Advertisement -
- Advertisement -

“ಬೆಂಗಳೂರನ್ನು ಸ್ವಚ್ಛವಾಗಿಡಲು ನಾವು ಮಹಿಳಾ ಪೌರ ಕಾರ್ಮಿಕರು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಕೆಲಸ ಮಾಡುತ್ತೇವೆ. ಆದರೆ ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ. ಇದರಿಂದ ಹತ್ತಾರು ಮಹಿಳಾ ಕಾರ್ಮಿಕರಿಗೆ ಅಲರ್ಜಿ ಸೇರಿದಂತೆ ಕಿಡ್ನಿ ತೊಂದರೆಗಳಾಗಿವೆ” ಎಂದು 25 ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆಂಜನಮ್ಮ ಎಂಬುವವರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.

“ನಾನು ಕಳೆದ 25 ವರ್ಷಗಳಿಂದ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 39ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ಕೂಡ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೇವಲ 500 ರೂ. ವೇತನ ಇದ್ದಾಗಿನಿಂದಲೂ ನಾವು ಈ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಉದ್ಯೋಗ ಇನ್ನೂ ಖಾಯಂ ಆಗಿಲ್ಲ. ಈ ಕುರಿತು ನಾವು ಪ್ರತಿಭಾರಿಯೂ ಹೋರಾಟ ಮಾಡುತ್ತಲೆ ಇದ್ದೇವೆ. ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿಯೂ ಸಹ ಮಹಿಳೆಯರಿಗೆ ಯಾವುದೇ ರಜೆಗಳು ಇರುವುದಿಲ್ಲ. ನಾವು ಮಾಸಿಕ ಋತುಚಕ್ರಕ್ಕೆ ಒಳಗಾದಾಗ ಇನ್ನಿಲ್ಲದ ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಕೆಲವು ದಿನಗಳ ಕಾಲ ಪಾಲಿಕೆಯೆ ನಮಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿತ್ತು. ಆದರೆ ಆ ಊಟದಲ್ಲಿ ಹುಳಗಳು ಕಂಡಬಂದಿದ್ದವು. ಬೇಕಾಬಿಟ್ಟಿ ಅಡಿಗೆ ಮಾಡಿ ತಂದುಕೊಡುತ್ತಿದ್ದರು. ಈಗ ಅದನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದರು.

ನಮಗೆ ಈಗ ಕೇವಲ 12 ಸಾವಿರ ವೇತನ ನೀಡುತ್ತಿದ್ದಾರೆ. ನಮಗೆ ನ್ಯಾಯಯುತವಾದ ಯಾವುದೇ ಸೌಲಭ್ಯಗಳನ್ನೂ ನೀಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿದ್ದೇವೆ. ಅದರಿಂದ ವೇತನವೇನೋ ಸ್ವಲ್ಪ ಹೆಚ್ಚಾಯಿತು ಎನ್ನುವುದನ್ನು ಬಿಟ್ಟರೆ ಉಳಿದ ಬೇಡಿಕೆಗಳೆಲ್ಲಾ ಹಾಗೇ ಉಳಿದಿವೆ ಎಂದು ಹೇಳಿದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಎಷ್ಟೋ ಜನರನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ. ಅವರ ಹುದ್ದೆ ಖಾಯಂ ಆಗಿಲ್ಲವಾದ್ದರಿಂದ ಉದ್ಯೋಗ ಕಳೆದುಕೊಂಡವರೆಲ್ಲರೂ ಈಗ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗದಿಂದ ವಜಾಗೊಳಿಸಿದ ಸಂದರ್ಭದಲ್ಲಿ ಕಾರ್ಮಿಕರಿಗೆ ನೀಡುತ್ತೇವೆ ಎನ್ನಲಾಗಿದ್ದ 10 ಲಕ್ಷ ಹಣವನ್ನೂ ನೀಡಿಲ್ಲ. ಈ ಕಡೆ ಉದ್ಯೋಗವೂ ಖಾಯಂ ಆಗಿಲ್ಲ. ನಾವು ಏನು ಮಾಡಬೇಕು? ಬಯೋ ಮೆಟ್ರಿಕ್ ಬಂದಿದ್ದರಿಂದ ಪ್ರತಿ ತಿಂಗಳೂ 7-8 ನೇ ತಾರೀಖಿನಂದು ವೇತನ ಬರುತ್ತಿದೆ ಅಷ್ಟೆ. ಆದರೆ ಕೇವಲ 12 ಸಾವಿರ ವೇತನದಲ್ಲಿ ನಮ್ಮ ಮನೆ, ಮಕ್ಕಳ ಶಿಕ್ಷಣ, ಆರೋಗ್ಯ ಮುಂತಾದ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ನಮಗೆ ಕನಿಷ್ಠ 21 ಸಾವಿರ ವೇತನ ಖಾತ್ರಿಗೊಳಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಲಸದಿಂದ ವಜಾಗೊಂಡವರನ್ನು ಅವರ ಮಕ್ಕಳೂ ನೋಡಿಕೊಳ್ಳುತ್ತಿಲ್ಲ. ಏಕೆಂದರೆ ಕೊರೊನಾ ಕಾರಣದಿಂದ ಅವರ ಮಕ್ಕಳೂ ಸಹ ಉದ್ಯೋಗ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಅವರೂ ಹೆಚ್ಚಿನ ಶಿಕ್ಷಣ ಪಡೆದುಕೊಂಡಿಲ್ಲ. ಇನ್ನು ಈ ಕಾಲದಲ್ಲಿ ಯಾವ ಮಕ್ಕಳು ತಮ್ಮ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಾರೆ. ಹಾಗಾಗಿ ಕೆಲಸದಿಂದ ವಜಾಗೊಂಡವರೆಲ್ಲರೂ ವಾಸ್ತವದಲ್ಲಿ ಬೀದಿಯಲ್ಲಿದ್ದಾರೆ ಎಂದು ವಿವರಿಸಿದರು.

“ನಾವು ಜೀವನ ಸಾಗಿಸುವುದೇ ಕಷ್ಟವಾಗಿದೆ. ನಮಗೆ ಜೀವನದಲ್ಲಿ ಏನೂ ಸಿಕ್ಕಿಲ್ಲ. ಈಗ ನಾವು ಸಂಪೂರ್ಣ ಸೋತಿದ್ದೇವೆ. ನಮ್ಮ ಆರೋಗ್ಯವನ್ನೂ ಕಳೆದುಕೊಂಡಿದ್ದೇವೆ. ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ ಮತ್ತು ಜೀವನವನ್ನು ಮುಡಿಪಾಗಿಟ್ಟಿದ್ದೇವೆ ಎಂಬುದನ್ನು ನಮ್ಮ ಮೇಲಧಿಕಾರಿಗಳು ಅರಿತುಕೊಳ್ಳಬೇಕು. ಈ ಸಮಾಜಕ್ಕಾಗಿ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರ ಗುರುತಿಸಬೇಕು. ನಮ್ಮ ಹಕ್ಕುಗಳನ್ನು ಕಾಪಾಡಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...