Homeಕರ್ನಾಟಕಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ

- Advertisement -
- Advertisement -

“ಬೆಂಗಳೂರನ್ನು ಸ್ವಚ್ಛವಾಗಿಡಲು ನಾವು ಮಹಿಳಾ ಪೌರ ಕಾರ್ಮಿಕರು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಕೆಲಸ ಮಾಡುತ್ತೇವೆ. ಆದರೆ ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ. ಇದರಿಂದ ಹತ್ತಾರು ಮಹಿಳಾ ಕಾರ್ಮಿಕರಿಗೆ ಅಲರ್ಜಿ ಸೇರಿದಂತೆ ಕಿಡ್ನಿ ತೊಂದರೆಗಳಾಗಿವೆ” ಎಂದು 25 ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆಂಜನಮ್ಮ ಎಂಬುವವರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.

“ನಾನು ಕಳೆದ 25 ವರ್ಷಗಳಿಂದ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 39ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ಕೂಡ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೇವಲ 500 ರೂ. ವೇತನ ಇದ್ದಾಗಿನಿಂದಲೂ ನಾವು ಈ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಉದ್ಯೋಗ ಇನ್ನೂ ಖಾಯಂ ಆಗಿಲ್ಲ. ಈ ಕುರಿತು ನಾವು ಪ್ರತಿಭಾರಿಯೂ ಹೋರಾಟ ಮಾಡುತ್ತಲೆ ಇದ್ದೇವೆ. ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿಯೂ ಸಹ ಮಹಿಳೆಯರಿಗೆ ಯಾವುದೇ ರಜೆಗಳು ಇರುವುದಿಲ್ಲ. ನಾವು ಮಾಸಿಕ ಋತುಚಕ್ರಕ್ಕೆ ಒಳಗಾದಾಗ ಇನ್ನಿಲ್ಲದ ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಕೆಲವು ದಿನಗಳ ಕಾಲ ಪಾಲಿಕೆಯೆ ನಮಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿತ್ತು. ಆದರೆ ಆ ಊಟದಲ್ಲಿ ಹುಳಗಳು ಕಂಡಬಂದಿದ್ದವು. ಬೇಕಾಬಿಟ್ಟಿ ಅಡಿಗೆ ಮಾಡಿ ತಂದುಕೊಡುತ್ತಿದ್ದರು. ಈಗ ಅದನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದರು.

ನಮಗೆ ಈಗ ಕೇವಲ 12 ಸಾವಿರ ವೇತನ ನೀಡುತ್ತಿದ್ದಾರೆ. ನಮಗೆ ನ್ಯಾಯಯುತವಾದ ಯಾವುದೇ ಸೌಲಭ್ಯಗಳನ್ನೂ ನೀಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿದ್ದೇವೆ. ಅದರಿಂದ ವೇತನವೇನೋ ಸ್ವಲ್ಪ ಹೆಚ್ಚಾಯಿತು ಎನ್ನುವುದನ್ನು ಬಿಟ್ಟರೆ ಉಳಿದ ಬೇಡಿಕೆಗಳೆಲ್ಲಾ ಹಾಗೇ ಉಳಿದಿವೆ ಎಂದು ಹೇಳಿದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಎಷ್ಟೋ ಜನರನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ. ಅವರ ಹುದ್ದೆ ಖಾಯಂ ಆಗಿಲ್ಲವಾದ್ದರಿಂದ ಉದ್ಯೋಗ ಕಳೆದುಕೊಂಡವರೆಲ್ಲರೂ ಈಗ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗದಿಂದ ವಜಾಗೊಳಿಸಿದ ಸಂದರ್ಭದಲ್ಲಿ ಕಾರ್ಮಿಕರಿಗೆ ನೀಡುತ್ತೇವೆ ಎನ್ನಲಾಗಿದ್ದ 10 ಲಕ್ಷ ಹಣವನ್ನೂ ನೀಡಿಲ್ಲ. ಈ ಕಡೆ ಉದ್ಯೋಗವೂ ಖಾಯಂ ಆಗಿಲ್ಲ. ನಾವು ಏನು ಮಾಡಬೇಕು? ಬಯೋ ಮೆಟ್ರಿಕ್ ಬಂದಿದ್ದರಿಂದ ಪ್ರತಿ ತಿಂಗಳೂ 7-8 ನೇ ತಾರೀಖಿನಂದು ವೇತನ ಬರುತ್ತಿದೆ ಅಷ್ಟೆ. ಆದರೆ ಕೇವಲ 12 ಸಾವಿರ ವೇತನದಲ್ಲಿ ನಮ್ಮ ಮನೆ, ಮಕ್ಕಳ ಶಿಕ್ಷಣ, ಆರೋಗ್ಯ ಮುಂತಾದ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ನಮಗೆ ಕನಿಷ್ಠ 21 ಸಾವಿರ ವೇತನ ಖಾತ್ರಿಗೊಳಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಲಸದಿಂದ ವಜಾಗೊಂಡವರನ್ನು ಅವರ ಮಕ್ಕಳೂ ನೋಡಿಕೊಳ್ಳುತ್ತಿಲ್ಲ. ಏಕೆಂದರೆ ಕೊರೊನಾ ಕಾರಣದಿಂದ ಅವರ ಮಕ್ಕಳೂ ಸಹ ಉದ್ಯೋಗ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಅವರೂ ಹೆಚ್ಚಿನ ಶಿಕ್ಷಣ ಪಡೆದುಕೊಂಡಿಲ್ಲ. ಇನ್ನು ಈ ಕಾಲದಲ್ಲಿ ಯಾವ ಮಕ್ಕಳು ತಮ್ಮ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಾರೆ. ಹಾಗಾಗಿ ಕೆಲಸದಿಂದ ವಜಾಗೊಂಡವರೆಲ್ಲರೂ ವಾಸ್ತವದಲ್ಲಿ ಬೀದಿಯಲ್ಲಿದ್ದಾರೆ ಎಂದು ವಿವರಿಸಿದರು.

“ನಾವು ಜೀವನ ಸಾಗಿಸುವುದೇ ಕಷ್ಟವಾಗಿದೆ. ನಮಗೆ ಜೀವನದಲ್ಲಿ ಏನೂ ಸಿಕ್ಕಿಲ್ಲ. ಈಗ ನಾವು ಸಂಪೂರ್ಣ ಸೋತಿದ್ದೇವೆ. ನಮ್ಮ ಆರೋಗ್ಯವನ್ನೂ ಕಳೆದುಕೊಂಡಿದ್ದೇವೆ. ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ ಮತ್ತು ಜೀವನವನ್ನು ಮುಡಿಪಾಗಿಟ್ಟಿದ್ದೇವೆ ಎಂಬುದನ್ನು ನಮ್ಮ ಮೇಲಧಿಕಾರಿಗಳು ಅರಿತುಕೊಳ್ಳಬೇಕು. ಈ ಸಮಾಜಕ್ಕಾಗಿ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರ ಗುರುತಿಸಬೇಕು. ನಮ್ಮ ಹಕ್ಕುಗಳನ್ನು ಕಾಪಾಡಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...