Homeಕರ್ನಾಟಕಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ

- Advertisement -
- Advertisement -

“ಬೆಂಗಳೂರನ್ನು ಸ್ವಚ್ಛವಾಗಿಡಲು ನಾವು ಮಹಿಳಾ ಪೌರ ಕಾರ್ಮಿಕರು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಕೆಲಸ ಮಾಡುತ್ತೇವೆ. ಆದರೆ ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ. ಇದರಿಂದ ಹತ್ತಾರು ಮಹಿಳಾ ಕಾರ್ಮಿಕರಿಗೆ ಅಲರ್ಜಿ ಸೇರಿದಂತೆ ಕಿಡ್ನಿ ತೊಂದರೆಗಳಾಗಿವೆ” ಎಂದು 25 ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆಂಜನಮ್ಮ ಎಂಬುವವರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.

“ನಾನು ಕಳೆದ 25 ವರ್ಷಗಳಿಂದ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 39ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ಕೂಡ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೇವಲ 500 ರೂ. ವೇತನ ಇದ್ದಾಗಿನಿಂದಲೂ ನಾವು ಈ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಉದ್ಯೋಗ ಇನ್ನೂ ಖಾಯಂ ಆಗಿಲ್ಲ. ಈ ಕುರಿತು ನಾವು ಪ್ರತಿಭಾರಿಯೂ ಹೋರಾಟ ಮಾಡುತ್ತಲೆ ಇದ್ದೇವೆ. ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿಯೂ ಸಹ ಮಹಿಳೆಯರಿಗೆ ಯಾವುದೇ ರಜೆಗಳು ಇರುವುದಿಲ್ಲ. ನಾವು ಮಾಸಿಕ ಋತುಚಕ್ರಕ್ಕೆ ಒಳಗಾದಾಗ ಇನ್ನಿಲ್ಲದ ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಕೆಲವು ದಿನಗಳ ಕಾಲ ಪಾಲಿಕೆಯೆ ನಮಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿತ್ತು. ಆದರೆ ಆ ಊಟದಲ್ಲಿ ಹುಳಗಳು ಕಂಡಬಂದಿದ್ದವು. ಬೇಕಾಬಿಟ್ಟಿ ಅಡಿಗೆ ಮಾಡಿ ತಂದುಕೊಡುತ್ತಿದ್ದರು. ಈಗ ಅದನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದರು.

ನಮಗೆ ಈಗ ಕೇವಲ 12 ಸಾವಿರ ವೇತನ ನೀಡುತ್ತಿದ್ದಾರೆ. ನಮಗೆ ನ್ಯಾಯಯುತವಾದ ಯಾವುದೇ ಸೌಲಭ್ಯಗಳನ್ನೂ ನೀಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿದ್ದೇವೆ. ಅದರಿಂದ ವೇತನವೇನೋ ಸ್ವಲ್ಪ ಹೆಚ್ಚಾಯಿತು ಎನ್ನುವುದನ್ನು ಬಿಟ್ಟರೆ ಉಳಿದ ಬೇಡಿಕೆಗಳೆಲ್ಲಾ ಹಾಗೇ ಉಳಿದಿವೆ ಎಂದು ಹೇಳಿದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಎಷ್ಟೋ ಜನರನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ. ಅವರ ಹುದ್ದೆ ಖಾಯಂ ಆಗಿಲ್ಲವಾದ್ದರಿಂದ ಉದ್ಯೋಗ ಕಳೆದುಕೊಂಡವರೆಲ್ಲರೂ ಈಗ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗದಿಂದ ವಜಾಗೊಳಿಸಿದ ಸಂದರ್ಭದಲ್ಲಿ ಕಾರ್ಮಿಕರಿಗೆ ನೀಡುತ್ತೇವೆ ಎನ್ನಲಾಗಿದ್ದ 10 ಲಕ್ಷ ಹಣವನ್ನೂ ನೀಡಿಲ್ಲ. ಈ ಕಡೆ ಉದ್ಯೋಗವೂ ಖಾಯಂ ಆಗಿಲ್ಲ. ನಾವು ಏನು ಮಾಡಬೇಕು? ಬಯೋ ಮೆಟ್ರಿಕ್ ಬಂದಿದ್ದರಿಂದ ಪ್ರತಿ ತಿಂಗಳೂ 7-8 ನೇ ತಾರೀಖಿನಂದು ವೇತನ ಬರುತ್ತಿದೆ ಅಷ್ಟೆ. ಆದರೆ ಕೇವಲ 12 ಸಾವಿರ ವೇತನದಲ್ಲಿ ನಮ್ಮ ಮನೆ, ಮಕ್ಕಳ ಶಿಕ್ಷಣ, ಆರೋಗ್ಯ ಮುಂತಾದ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ನಮಗೆ ಕನಿಷ್ಠ 21 ಸಾವಿರ ವೇತನ ಖಾತ್ರಿಗೊಳಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಲಸದಿಂದ ವಜಾಗೊಂಡವರನ್ನು ಅವರ ಮಕ್ಕಳೂ ನೋಡಿಕೊಳ್ಳುತ್ತಿಲ್ಲ. ಏಕೆಂದರೆ ಕೊರೊನಾ ಕಾರಣದಿಂದ ಅವರ ಮಕ್ಕಳೂ ಸಹ ಉದ್ಯೋಗ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಅವರೂ ಹೆಚ್ಚಿನ ಶಿಕ್ಷಣ ಪಡೆದುಕೊಂಡಿಲ್ಲ. ಇನ್ನು ಈ ಕಾಲದಲ್ಲಿ ಯಾವ ಮಕ್ಕಳು ತಮ್ಮ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಾರೆ. ಹಾಗಾಗಿ ಕೆಲಸದಿಂದ ವಜಾಗೊಂಡವರೆಲ್ಲರೂ ವಾಸ್ತವದಲ್ಲಿ ಬೀದಿಯಲ್ಲಿದ್ದಾರೆ ಎಂದು ವಿವರಿಸಿದರು.

“ನಾವು ಜೀವನ ಸಾಗಿಸುವುದೇ ಕಷ್ಟವಾಗಿದೆ. ನಮಗೆ ಜೀವನದಲ್ಲಿ ಏನೂ ಸಿಕ್ಕಿಲ್ಲ. ಈಗ ನಾವು ಸಂಪೂರ್ಣ ಸೋತಿದ್ದೇವೆ. ನಮ್ಮ ಆರೋಗ್ಯವನ್ನೂ ಕಳೆದುಕೊಂಡಿದ್ದೇವೆ. ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ ಮತ್ತು ಜೀವನವನ್ನು ಮುಡಿಪಾಗಿಟ್ಟಿದ್ದೇವೆ ಎಂಬುದನ್ನು ನಮ್ಮ ಮೇಲಧಿಕಾರಿಗಳು ಅರಿತುಕೊಳ್ಳಬೇಕು. ಈ ಸಮಾಜಕ್ಕಾಗಿ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರ ಗುರುತಿಸಬೇಕು. ನಮ್ಮ ಹಕ್ಕುಗಳನ್ನು ಕಾಪಾಡಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...