Homeಕರ್ನಾಟಕಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ, ಜೀವನ ಮುಡಿಪಿಟ್ಟಿದ್ದೇವೆ- ಆಂಜನಮ್ಮ ಸಂದರ್ಶನ

ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ

- Advertisement -
- Advertisement -

“ಬೆಂಗಳೂರನ್ನು ಸ್ವಚ್ಛವಾಗಿಡಲು ನಾವು ಮಹಿಳಾ ಪೌರ ಕಾರ್ಮಿಕರು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೂ ಕೆಲಸ ಮಾಡುತ್ತೇವೆ. ಆದರೆ ಕೆಲಸದ ನಡುವೆ ನಮಗೆ ಮೂತ್ರ ವಿಸರ್ಜನೆ ಮಾಡಲು ಸಹ ನಿರ್ದಿಷ್ಟ ಶೌಚಾಲಯವಿಲ್ಲ. ಅದನ್ನೂ ನಾವು ತಡೆದುಕೊಂಡೇ ಕೆಲಸ ಮಾಡಬೇಕಾಗಿದೆ. ಇದರಿಂದ ಹತ್ತಾರು ಮಹಿಳಾ ಕಾರ್ಮಿಕರಿಗೆ ಅಲರ್ಜಿ ಸೇರಿದಂತೆ ಕಿಡ್ನಿ ತೊಂದರೆಗಳಾಗಿವೆ” ಎಂದು 25 ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ಆಂಜನಮ್ಮ ಎಂಬುವವರು ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ.

“ನಾನು ಕಳೆದ 25 ವರ್ಷಗಳಿಂದ ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 39ರಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನ ಪತಿ ಕೂಡ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಕೇವಲ 500 ರೂ. ವೇತನ ಇದ್ದಾಗಿನಿಂದಲೂ ನಾವು ಈ ಕೆಲಸ ಮಾಡುತ್ತಿದ್ದೇವೆ. ಆದರೆ ನಮ್ಮ ಉದ್ಯೋಗ ಇನ್ನೂ ಖಾಯಂ ಆಗಿಲ್ಲ. ಈ ಕುರಿತು ನಾವು ಪ್ರತಿಭಾರಿಯೂ ಹೋರಾಟ ಮಾಡುತ್ತಲೆ ಇದ್ದೇವೆ. ಆದರೆ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ” ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ಅನಾರೋಗ್ಯದಂತಹ ತುರ್ತು ಸಂದರ್ಭಗಳಲ್ಲಿಯೂ ಸಹ ಮಹಿಳೆಯರಿಗೆ ಯಾವುದೇ ರಜೆಗಳು ಇರುವುದಿಲ್ಲ. ನಾವು ಮಾಸಿಕ ಋತುಚಕ್ರಕ್ಕೆ ಒಳಗಾದಾಗ ಇನ್ನಿಲ್ಲದ ಸಂಕಷ್ಟಗಳನ್ನು ಎದುರಿಸಬೇಕಾಗಿದೆ. ಕೆಲವು ದಿನಗಳ ಕಾಲ ಪಾಲಿಕೆಯೆ ನಮಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿತ್ತು. ಆದರೆ ಆ ಊಟದಲ್ಲಿ ಹುಳಗಳು ಕಂಡಬಂದಿದ್ದವು. ಬೇಕಾಬಿಟ್ಟಿ ಅಡಿಗೆ ಮಾಡಿ ತಂದುಕೊಡುತ್ತಿದ್ದರು. ಈಗ ಅದನ್ನೂ ನಿಲ್ಲಿಸಲಾಗಿದೆ ಎಂದು ಹೇಳಿದರು.

ನಮಗೆ ಈಗ ಕೇವಲ 12 ಸಾವಿರ ವೇತನ ನೀಡುತ್ತಿದ್ದಾರೆ. ನಮಗೆ ನ್ಯಾಯಯುತವಾದ ಯಾವುದೇ ಸೌಲಭ್ಯಗಳನ್ನೂ ನೀಡುತ್ತಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸಾಕಷ್ಟು ಬಾರಿ ಹೋರಾಟ ಮಾಡಿದ್ದೇವೆ. ಅದರಿಂದ ವೇತನವೇನೋ ಸ್ವಲ್ಪ ಹೆಚ್ಚಾಯಿತು ಎನ್ನುವುದನ್ನು ಬಿಟ್ಟರೆ ಉಳಿದ ಬೇಡಿಕೆಗಳೆಲ್ಲಾ ಹಾಗೇ ಉಳಿದಿವೆ ಎಂದು ಹೇಳಿದರು.

ಇದನ್ನೂ ಓದಿ: ಪ.ಬಂಗಾಳದಲ್ಲಿ 8 ಹಂತದ ಮತದಾನ: ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾ

ಎಷ್ಟೋ ಜನರನ್ನು ಈಗಾಗಲೇ ಕೆಲಸದಿಂದ ತೆಗೆದುಹಾಕಲಾಗಿದೆ. ಅವರ ಹುದ್ದೆ ಖಾಯಂ ಆಗಿಲ್ಲವಾದ್ದರಿಂದ ಉದ್ಯೋಗ ಕಳೆದುಕೊಂಡವರೆಲ್ಲರೂ ಈಗ ಚಿಂದಿ ಆಯ್ದು ಜೀವನ ಸಾಗಿಸುತ್ತಿದ್ದಾರೆ. ಉದ್ಯೋಗದಿಂದ ವಜಾಗೊಳಿಸಿದ ಸಂದರ್ಭದಲ್ಲಿ ಕಾರ್ಮಿಕರಿಗೆ ನೀಡುತ್ತೇವೆ ಎನ್ನಲಾಗಿದ್ದ 10 ಲಕ್ಷ ಹಣವನ್ನೂ ನೀಡಿಲ್ಲ. ಈ ಕಡೆ ಉದ್ಯೋಗವೂ ಖಾಯಂ ಆಗಿಲ್ಲ. ನಾವು ಏನು ಮಾಡಬೇಕು? ಬಯೋ ಮೆಟ್ರಿಕ್ ಬಂದಿದ್ದರಿಂದ ಪ್ರತಿ ತಿಂಗಳೂ 7-8 ನೇ ತಾರೀಖಿನಂದು ವೇತನ ಬರುತ್ತಿದೆ ಅಷ್ಟೆ. ಆದರೆ ಕೇವಲ 12 ಸಾವಿರ ವೇತನದಲ್ಲಿ ನಮ್ಮ ಮನೆ, ಮಕ್ಕಳ ಶಿಕ್ಷಣ, ಆರೋಗ್ಯ ಮುಂತಾದ ಎಲ್ಲವನ್ನೂ ನಿಭಾಯಿಸಲು ಸಾಧ್ಯವಿಲ್ಲ. ಹಾಗಾಗಿ ನಮಗೆ ಕನಿಷ್ಠ 21 ಸಾವಿರ ವೇತನ ಖಾತ್ರಿಗೊಳಿಸಿ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಕೆಲಸದಿಂದ ವಜಾಗೊಂಡವರನ್ನು ಅವರ ಮಕ್ಕಳೂ ನೋಡಿಕೊಳ್ಳುತ್ತಿಲ್ಲ. ಏಕೆಂದರೆ ಕೊರೊನಾ ಕಾರಣದಿಂದ ಅವರ ಮಕ್ಕಳೂ ಸಹ ಉದ್ಯೋಗ ಕಳೆದುಕೊಂಡಿದ್ದಾರೆ. ಅದೂ ಅಲ್ಲದೇ ಅವರೂ ಹೆಚ್ಚಿನ ಶಿಕ್ಷಣ ಪಡೆದುಕೊಂಡಿಲ್ಲ. ಇನ್ನು ಈ ಕಾಲದಲ್ಲಿ ಯಾವ ಮಕ್ಕಳು ತಮ್ಮ ತಂದೆ-ತಾಯಿಯನ್ನು ನೋಡಿಕೊಳ್ಳುತ್ತಾರೆ. ಹಾಗಾಗಿ ಕೆಲಸದಿಂದ ವಜಾಗೊಂಡವರೆಲ್ಲರೂ ವಾಸ್ತವದಲ್ಲಿ ಬೀದಿಯಲ್ಲಿದ್ದಾರೆ ಎಂದು ವಿವರಿಸಿದರು.

“ನಾವು ಜೀವನ ಸಾಗಿಸುವುದೇ ಕಷ್ಟವಾಗಿದೆ. ನಮಗೆ ಜೀವನದಲ್ಲಿ ಏನೂ ಸಿಕ್ಕಿಲ್ಲ. ಈಗ ನಾವು ಸಂಪೂರ್ಣ ಸೋತಿದ್ದೇವೆ. ನಮ್ಮ ಆರೋಗ್ಯವನ್ನೂ ಕಳೆದುಕೊಂಡಿದ್ದೇವೆ. ಈ ನಗರವನ್ನು ಸ್ವಚ್ಛವಾಗಿಡಲು ನಮ್ಮ ಆರೋಗ್ಯ ಮತ್ತು ಜೀವನವನ್ನು ಮುಡಿಪಾಗಿಟ್ಟಿದ್ದೇವೆ ಎಂಬುದನ್ನು ನಮ್ಮ ಮೇಲಧಿಕಾರಿಗಳು ಅರಿತುಕೊಳ್ಳಬೇಕು. ಈ ಸಮಾಜಕ್ಕಾಗಿ ಕೆಲಸ ಮಾಡುತ್ತಿರುವ ನಮ್ಮ ಸರ್ಕಾರ ಗುರುತಿಸಬೇಕು. ನಮ್ಮ ಹಕ್ಕುಗಳನ್ನು ಕಾಪಾಡಬೇಕು” ಎಂದು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ತಮಿಳುನಾಡಿನ 154 ಸ್ಥಾನಗಳಲ್ಲಿ ಎಂಎನ್‌ಎಂ ಸ್ಪರ್ಧೆ- ಕಮಲ್ ಹಾಸನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...