Homeಮುಖಪುಟನಮ್ಮ ಹಿಂದುತ್ವ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ: ಉದ್ಧವ್ ಠಾಕ್ರೆ

ನಮ್ಮ ಹಿಂದುತ್ವ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ: ಉದ್ಧವ್ ಠಾಕ್ರೆ

- Advertisement -
- Advertisement -

ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಶಿವಸೇನೆ (ಯುಬಿಟಿ) ಯ ಹಿಂದುತ್ವದ ನಡುವಿನ ವ್ಯತ್ಯಾಸವನ್ನು ವಿವರಿಸಿದ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, “ನಮ್ಮ ಹಿಂದುತ್ವ ಜನರ ಮನೆಗಳಲ್ಲಿ ಒಲೆ ಹೊತ್ತಿಸಿದರೆ, ಬಿಜೆಪಿಯ ಹಿಂದುತ್ವ ಮನೆಯನ್ನೇ ಸುಡುತ್ತದೆ” ಎಂದಿದ್ದಾರೆ.

ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಉದ್ಧವ್ ಠಾಕ್ರೆ “ಬಿಜೆಪಿಯ ಹಿಂದುತ್ವಕ್ಕೂ ನಮ್ಮ ಹಿಂದುತ್ವಕ್ಕೂ ಅಜಗಜಾಂತರ ವ್ಯತ್ಯಾಸವಿದೆ” ಎಂದು ಹೇಳಿದ್ದಾರೆ.

“ಎಲ್ಲರಿಗೂ “ಕಾನೂನು ಸಮಾನತೆ” ಖಾತ್ರಿಪಡಿಸಲು ಸುಪ್ರೀಂ ಕೋರ್ಟ್‌ಗೆ ನಾವು ಮನವಿ ಮಾಡುವಾಗ, ಪ್ರಧಾನಿ ಮೋದಿ ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದ್ದಾರೆ” ಎಂದು ಉದ್ದವ್ ಠಾಕ್ರೆ ಆರೋಪಿಸಿದ್ದಾರೆ.

“ಮೋದಿ ಸರ್ಕಾರ ನಮ್ಮ ಪಕ್ಷದ ವಿರುದ್ಧ ಭಾರತದ ಚುನಾವಣಾ ಆಯೋಗವನ್ನು ಬಳಸಿತ್ತು. “ನಮ್ಮ ಪಕ್ಷದ ಚಿಹ್ನೆಯಿಂದ ಬಿಲ್ಲು ಮತ್ತು ಬಾಣವನ್ನು ಕಸಿದುಕೊಳ್ಳಲಾಯಿತು. ನೀವು (ಪ್ರಧಾನಿ ಮೋದಿ) ನನ್ನ ಪಕ್ಷ, ನನ್ನ ಚಿಹ್ನೆ ಮತ್ತು ನನ್ನ ಜನರನ್ನು ಕಿತ್ತುಕೊಂಡಿದ್ದೀರಿ. ಆದರೆ, ನೀವು ಇನ್ನೂ ಉದ್ಧವ್ ಠಾಕ್ರೆಗೆ ಭಯಪಡುತ್ತಿದ್ದೀರಿ” ಎಂದು ಠಾಕ್ರೆ ಹೇಳಿದ್ದಾರೆ.

ದೇಶದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎಂಬ ವರದಿಯ ಬಗ್ಗೆ ಮಾತನಾಡಿದ ಠಾಕ್ರೆ, “ಕಳೆದ 10 ವರ್ಷಗಳಿಂದ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿದ್ದಾರೆ. ಈ ಅವಧಿಯಲ್ಲಿ ಮುಸ್ಲಿಂ ಜನಸಂಖ್ಯೆಯ ಹೆಚ್ಚಳ ಅವರ ಸಾಧನೆಯೇ ಅಥವಾ ವೈಫಲ್ಯವೇ? ಎಂಬುವುದನ್ನು ಸ್ಪಷ್ಟಪಡಿಸಬೇಕು. ಮುಸ್ಲಿಂ ಜನಸಂಖ್ಯೆಯ ಹೆಚ್ಚಳಕ್ಕೆ ಅವರನ್ನು ಪ್ರಶಂಸಿಸಬೇಕೆ ಅಥವಾ ಟೀಕಿಸಬೇಕೆ? ಎಂದು ನಾವೆಲ್ಲರೂ ಗೊಂದಲಕ್ಕೊಳಗಾಗಿದ್ದೇವೆ ಎಂದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಂದ ಬಿಜೆಪಿ ಸರ್ಕಾರ ಎಲ್ಲಾ ಅಧಿಕಾರಗಳನ್ನು ಕಿತ್ತುಕೊಂಡಿದೆ ಎಂದು ಉದ್ಧವ್ ಕಿಡಿಕಾರಿದ್ದಾರೆ. “ಕೇಜ್ರಿವಾಲ್‌ಗೆ ಜಾಮೀನು ಸಿಕ್ಕಿದೆ, ಎಲ್ಲರಿಗೂ ತಿಳಿದಿದೆ. ಮೋದಿ ಸರ್ಕಾರ ಕೇಜ್ರಿವಾಲ್‌ ಅವರ ಎಲ್ಲಾ ಅಧಿಕಾರವನ್ನು ಕಿತ್ತುಕೊಂಡಿದೆ. ಜೂನ್ 4 ರವರೆಗೆ ಮೋದಿ ಅವರ ನಾಟಕ ನಡೆಯಲಿದೆ. ಜೂನ್ 4 ರ ನಂತರ ಅವರನ್ನು ಪ್ರಧಾನಿ ನರೇಂದ್ರ ಮೋದಿ ಎಂದು ಕರೆಯಲಾಗುವುದಿಲ್ಲ, ಕೇವಲ ನರೇಂದ್ರ ಮೋದಿ” ಎಂದು ಕರೆಬೇಕಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...