Homeಮುಖಪುಟನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ರೈತರ ಪ್ರತಿಭಟನೆಗೆ ಬಂದ ಬೆಂಬಲವನ್ನು ವಿಮರ್ಶಿಸಿ ಮತ್ತು ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಮಾಡಿದ ಟ್ವೀಟ್‌ಗಳ ಸುತ್ತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಮಂಗಳವಾರ ತೀಕ್ಷ್ಣವಾದ ಮಾತುಗಳ ಮೂಲಕ ಪರಸ್ಪರ ದಾಳಿ ನಡೆಸಿದ್ದಾರೆ.

ಅಲಿಗಢ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಶರ್ಜೀಲ್ ಉಸ್ಮಾನ್ ವಿಚಾರಣೆ ಮಾಡುವುದನ್ನು ಬಿಟ್ಟು ಇಬ್ಬರು ಭಾರತರತ್ನ ಪ್ರಶಸ್ತಿ ಪುರಸ್ಕೃತರ ವಿರುದ್ಧ ಆಡಳಿತಾರೂಢ ಶಿವಸೇನೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಫಡ್ನವೀಸ್ ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಗೃಹಸಚಿವ ದೇಶಮುಖ್, “ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ, ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಣೆ ಮಾಡುತ್ತಿದ್ದೇವೆ” ಎಂದಿದ್ದಾರೆ,

ಇತ್ತೀಚಿನ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಭಾಷಣ ಮಾಡುವಾಗ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ’ ಭಾಷಣವನ್ನು ಶರ್ಜಿಲ್ ಉಸ್ಮಾನ್ ಮಾಡಿದ್ದಾರೆ ಎಂದು ಆರೋಪಿಸಿರುವ ಫಡ್ನವೀಸ್, ಮಹಾರಾಷ್ಟ್ರ ಸರ್ಕಾರಕ್ಕೆ ಉಸ್ಮಾನ್ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.

“ಉಸ್ಮಾನ್ ಹಿಂದೂಗಳನ್ನು ಅವಮಾನಿಸುತ್ತಾರೆ ಮತ್ತು ನೀವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎಲ್ಗಾರ್ ಪರಿಷತ್ ಸದಸ್ಯರು ಸಹ ಅವರ ಹೇಳಿಕೆಗಳನ್ನು ಬೆಂಬಲಿಸುತ್ತಾರೆ, ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮಗೆ ಯಾವುದೇ ಧೈರ್ಯವಿಲ್ಲ. ಆದರೆ ನೀವು ಭಾರತರತ್ನ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಸಕ್ತಿ ತೋರುತ್ತೀರಿ’ ಎಂದು ಫಡ್ನವೀಸ್ ಅಸೆಂಬ್ಲಿಯಲ್ಲಿ ಹೇಳಿದರು.

“ಒಂದು ವೇಳೆ ನಾನು ಅವರನ್ನು ಆ ರೀತಿ ಟ್ವೀಟ್ ಮಾಡಲು ಕೇಳಿದೆ ಎಂದು ಭಾವಿಸೋಣ … ಹಾಗಾದರೆ ಇಲ್ಲಿ ನನ್ನ ಮೇಲಿನ ಆರೋಪ ಏನು? ಭಾರತವನ್ನು ಬೆಂಬಲಿಸಿ ಟ್ವೀಟ್ ಮಾಡಲು ನನ್ನ ಪಕ್ಷವು ಅವರನ್ನು ಕೇಳಿದ್ದರೆ, ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಫಡ್ನವೀಸ್ ಘೋಷಿಸಿದ್ದರು, “ನಾವು ನಿಮ್ಮ ವಿಚಾರಣೆಗೆ ಹೆದರುವುದಿಲ್ಲ’ ಎಂದು ಗೃಹ ಸಚಿವ ದೇಶಮುಖ್‌ಗೆ ಸವಾಲು ಹಾಕಿದರು.

ಈ ದಾಳಿಗೆ ಗೃಹ ಸಚಿವರು ಉತ್ತರಿಸಿದ್ದು, “ನಾವು ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಿಸುತ್ತಿದ್ದೇವೆ. ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಿಸುತ್ತಿಲ್ಲ … ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ನಮ್ಮ ವಿಚಾರಣೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.

“ನೀವು ರಾಷ್ಟ್ರವನ್ನು ಬೆಂಬಲಿಸುವ ಜನರ ವಿರುದ್ಧ ವಿಚಾರಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಇದು ನಿಮ್ಮ ದೇಶಪ್ರೇಮವನ್ನು ತೋರಿಸುತ್ತದೆ’ ಎಂದು ಫಡ್ನವೀಸ್ ವ್ಯಂಗ್ಯ ಮಾಡಿದರು.

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, “ಕಾಂಗ್ರೆಸ್ ಸಚಿನ್ ಅಥವಾ ರೇಖಾ ಅವರನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ನಾವು ಅವರನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಇಂದು ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಸೆಲೆಬ್ರಿಟಿಗಳನ್ನು ವೈಯಕ್ತಿಕ ಲಾಭಕ್ಕಾಗಿ ಬಳಸುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ’ ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕಳೆದ ತಿಂಗಳ ಆರಂಭದಲ್ಲಿ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ ಹಲವಾರು ಬಾಲಿವುಡ್ ಮತ್ತು ಕ್ರಿಕೆಟ್ ಸೆಲೆಬ್ರಿಟಿಗಳು ಪಾಪ್ ತಾರೆ ರಿಹಾನ್ನಾ ಅವರ ರೈತರ ಪರ ಟ್ವೀಟ್ ವಿರುದ್ಧ ಟ್ವೀಟ್ ಮಾಡಿ ಸರ್ಕಾರವನ್ನು ಬೆಂಬಲಿಸಿದ್ದರು.

ಈ ಹಲವಾರು ಟ್ವೀಟ್‌ಗಳು ಒಂದಕ್ಕೊಂದು ಹೋಲುತ್ತಿದ್ದವು, ಇದು, ಅವುಗಳು ಕೇಂದ್ರದಿಂದ ರಚಿಸಲ್ಪಟ್ಟವು ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿತ್ತು ಮತ್ತು ಟ್ವೀಟ್ ಮಾಡಿದವರಲ್ಲಿ ಅನೇಕರು ಸರ್ಕಾರದ ‘ನಿರ್ದೇಶನದ’ ಮೇರೆಗೆ ಟ್ವೀಟ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಕೂಡ, ಕೇಂದ್ರವು ತೆಂಡೂಲ್ಕರ್ ಮತ್ತು ಮಂಗೇಶ್ಕರ್ ಅವರಂತಹವರನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕೆ ಮಾಡಿದ್ದರು.

ಗೃಹ ಸಚಿವ ದೇಶಮುಖ್ ಅವರು ಈ ಟ್ವೀಟ್‌ಗಳ ಹಿಂದಿನ ರಾಜಕೀಯದ ಕುರಿತು ತನಿಖೆಗೆ ಆದೇಶಿಸಿದ್ದರು. ‘ಬಿಜೆಪಿಯ ವಿರುದ್ಧ ಮಾತನಾಡಿದರೆ ರಾಜಕಾರಣಿಗಳಿಗೆ ಇ.ಡಿ ಅಥವಾ ಸಿಬಿಐ ತನಿಖೆಯ ಬೆದರಿಕೆ ಹಾಕುತ್ತಾರೆ… ಸೆಲೆಬ್ರಿಟಿಗಳ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ, ನಾವು ಖಂಡಿತವಾಗಿಯೂ ಆ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದರು.


ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...