Homeಮುಖಪುಟನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ರೈತರ ಪ್ರತಿಭಟನೆಗೆ ಬಂದ ಬೆಂಬಲವನ್ನು ವಿಮರ್ಶಿಸಿ ಮತ್ತು ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಮಾಡಿದ ಟ್ವೀಟ್‌ಗಳ ಸುತ್ತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಮಂಗಳವಾರ ತೀಕ್ಷ್ಣವಾದ ಮಾತುಗಳ ಮೂಲಕ ಪರಸ್ಪರ ದಾಳಿ ನಡೆಸಿದ್ದಾರೆ.

ಅಲಿಗಢ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಶರ್ಜೀಲ್ ಉಸ್ಮಾನ್ ವಿಚಾರಣೆ ಮಾಡುವುದನ್ನು ಬಿಟ್ಟು ಇಬ್ಬರು ಭಾರತರತ್ನ ಪ್ರಶಸ್ತಿ ಪುರಸ್ಕೃತರ ವಿರುದ್ಧ ಆಡಳಿತಾರೂಢ ಶಿವಸೇನೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಫಡ್ನವೀಸ್ ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಗೃಹಸಚಿವ ದೇಶಮುಖ್, “ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ, ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಣೆ ಮಾಡುತ್ತಿದ್ದೇವೆ” ಎಂದಿದ್ದಾರೆ,

ಇತ್ತೀಚಿನ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಭಾಷಣ ಮಾಡುವಾಗ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ’ ಭಾಷಣವನ್ನು ಶರ್ಜಿಲ್ ಉಸ್ಮಾನ್ ಮಾಡಿದ್ದಾರೆ ಎಂದು ಆರೋಪಿಸಿರುವ ಫಡ್ನವೀಸ್, ಮಹಾರಾಷ್ಟ್ರ ಸರ್ಕಾರಕ್ಕೆ ಉಸ್ಮಾನ್ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.

“ಉಸ್ಮಾನ್ ಹಿಂದೂಗಳನ್ನು ಅವಮಾನಿಸುತ್ತಾರೆ ಮತ್ತು ನೀವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎಲ್ಗಾರ್ ಪರಿಷತ್ ಸದಸ್ಯರು ಸಹ ಅವರ ಹೇಳಿಕೆಗಳನ್ನು ಬೆಂಬಲಿಸುತ್ತಾರೆ, ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮಗೆ ಯಾವುದೇ ಧೈರ್ಯವಿಲ್ಲ. ಆದರೆ ನೀವು ಭಾರತರತ್ನ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಸಕ್ತಿ ತೋರುತ್ತೀರಿ’ ಎಂದು ಫಡ್ನವೀಸ್ ಅಸೆಂಬ್ಲಿಯಲ್ಲಿ ಹೇಳಿದರು.

“ಒಂದು ವೇಳೆ ನಾನು ಅವರನ್ನು ಆ ರೀತಿ ಟ್ವೀಟ್ ಮಾಡಲು ಕೇಳಿದೆ ಎಂದು ಭಾವಿಸೋಣ … ಹಾಗಾದರೆ ಇಲ್ಲಿ ನನ್ನ ಮೇಲಿನ ಆರೋಪ ಏನು? ಭಾರತವನ್ನು ಬೆಂಬಲಿಸಿ ಟ್ವೀಟ್ ಮಾಡಲು ನನ್ನ ಪಕ್ಷವು ಅವರನ್ನು ಕೇಳಿದ್ದರೆ, ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಫಡ್ನವೀಸ್ ಘೋಷಿಸಿದ್ದರು, “ನಾವು ನಿಮ್ಮ ವಿಚಾರಣೆಗೆ ಹೆದರುವುದಿಲ್ಲ’ ಎಂದು ಗೃಹ ಸಚಿವ ದೇಶಮುಖ್‌ಗೆ ಸವಾಲು ಹಾಕಿದರು.

ಈ ದಾಳಿಗೆ ಗೃಹ ಸಚಿವರು ಉತ್ತರಿಸಿದ್ದು, “ನಾವು ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಿಸುತ್ತಿದ್ದೇವೆ. ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಿಸುತ್ತಿಲ್ಲ … ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ನಮ್ಮ ವಿಚಾರಣೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.

“ನೀವು ರಾಷ್ಟ್ರವನ್ನು ಬೆಂಬಲಿಸುವ ಜನರ ವಿರುದ್ಧ ವಿಚಾರಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಇದು ನಿಮ್ಮ ದೇಶಪ್ರೇಮವನ್ನು ತೋರಿಸುತ್ತದೆ’ ಎಂದು ಫಡ್ನವೀಸ್ ವ್ಯಂಗ್ಯ ಮಾಡಿದರು.

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, “ಕಾಂಗ್ರೆಸ್ ಸಚಿನ್ ಅಥವಾ ರೇಖಾ ಅವರನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ನಾವು ಅವರನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಇಂದು ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಸೆಲೆಬ್ರಿಟಿಗಳನ್ನು ವೈಯಕ್ತಿಕ ಲಾಭಕ್ಕಾಗಿ ಬಳಸುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ’ ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕಳೆದ ತಿಂಗಳ ಆರಂಭದಲ್ಲಿ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ ಹಲವಾರು ಬಾಲಿವುಡ್ ಮತ್ತು ಕ್ರಿಕೆಟ್ ಸೆಲೆಬ್ರಿಟಿಗಳು ಪಾಪ್ ತಾರೆ ರಿಹಾನ್ನಾ ಅವರ ರೈತರ ಪರ ಟ್ವೀಟ್ ವಿರುದ್ಧ ಟ್ವೀಟ್ ಮಾಡಿ ಸರ್ಕಾರವನ್ನು ಬೆಂಬಲಿಸಿದ್ದರು.

ಈ ಹಲವಾರು ಟ್ವೀಟ್‌ಗಳು ಒಂದಕ್ಕೊಂದು ಹೋಲುತ್ತಿದ್ದವು, ಇದು, ಅವುಗಳು ಕೇಂದ್ರದಿಂದ ರಚಿಸಲ್ಪಟ್ಟವು ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿತ್ತು ಮತ್ತು ಟ್ವೀಟ್ ಮಾಡಿದವರಲ್ಲಿ ಅನೇಕರು ಸರ್ಕಾರದ ‘ನಿರ್ದೇಶನದ’ ಮೇರೆಗೆ ಟ್ವೀಟ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಕೂಡ, ಕೇಂದ್ರವು ತೆಂಡೂಲ್ಕರ್ ಮತ್ತು ಮಂಗೇಶ್ಕರ್ ಅವರಂತಹವರನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕೆ ಮಾಡಿದ್ದರು.

ಗೃಹ ಸಚಿವ ದೇಶಮುಖ್ ಅವರು ಈ ಟ್ವೀಟ್‌ಗಳ ಹಿಂದಿನ ರಾಜಕೀಯದ ಕುರಿತು ತನಿಖೆಗೆ ಆದೇಶಿಸಿದ್ದರು. ‘ಬಿಜೆಪಿಯ ವಿರುದ್ಧ ಮಾತನಾಡಿದರೆ ರಾಜಕಾರಣಿಗಳಿಗೆ ಇ.ಡಿ ಅಥವಾ ಸಿಬಿಐ ತನಿಖೆಯ ಬೆದರಿಕೆ ಹಾಕುತ್ತಾರೆ… ಸೆಲೆಬ್ರಿಟಿಗಳ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ, ನಾವು ಖಂಡಿತವಾಗಿಯೂ ಆ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದರು.


ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...