Homeಮುಖಪುಟನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ರೈತರ ಪ್ರತಿಭಟನೆಗೆ ಬಂದ ಬೆಂಬಲವನ್ನು ವಿಮರ್ಶಿಸಿ ಮತ್ತು ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಮಾಡಿದ ಟ್ವೀಟ್‌ಗಳ ಸುತ್ತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಮಂಗಳವಾರ ತೀಕ್ಷ್ಣವಾದ ಮಾತುಗಳ ಮೂಲಕ ಪರಸ್ಪರ ದಾಳಿ ನಡೆಸಿದ್ದಾರೆ.

ಅಲಿಗಢ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಶರ್ಜೀಲ್ ಉಸ್ಮಾನ್ ವಿಚಾರಣೆ ಮಾಡುವುದನ್ನು ಬಿಟ್ಟು ಇಬ್ಬರು ಭಾರತರತ್ನ ಪ್ರಶಸ್ತಿ ಪುರಸ್ಕೃತರ ವಿರುದ್ಧ ಆಡಳಿತಾರೂಢ ಶಿವಸೇನೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಫಡ್ನವೀಸ್ ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಗೃಹಸಚಿವ ದೇಶಮುಖ್, “ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ, ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಣೆ ಮಾಡುತ್ತಿದ್ದೇವೆ” ಎಂದಿದ್ದಾರೆ,

ಇತ್ತೀಚಿನ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಭಾಷಣ ಮಾಡುವಾಗ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ’ ಭಾಷಣವನ್ನು ಶರ್ಜಿಲ್ ಉಸ್ಮಾನ್ ಮಾಡಿದ್ದಾರೆ ಎಂದು ಆರೋಪಿಸಿರುವ ಫಡ್ನವೀಸ್, ಮಹಾರಾಷ್ಟ್ರ ಸರ್ಕಾರಕ್ಕೆ ಉಸ್ಮಾನ್ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.

“ಉಸ್ಮಾನ್ ಹಿಂದೂಗಳನ್ನು ಅವಮಾನಿಸುತ್ತಾರೆ ಮತ್ತು ನೀವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎಲ್ಗಾರ್ ಪರಿಷತ್ ಸದಸ್ಯರು ಸಹ ಅವರ ಹೇಳಿಕೆಗಳನ್ನು ಬೆಂಬಲಿಸುತ್ತಾರೆ, ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮಗೆ ಯಾವುದೇ ಧೈರ್ಯವಿಲ್ಲ. ಆದರೆ ನೀವು ಭಾರತರತ್ನ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಸಕ್ತಿ ತೋರುತ್ತೀರಿ’ ಎಂದು ಫಡ್ನವೀಸ್ ಅಸೆಂಬ್ಲಿಯಲ್ಲಿ ಹೇಳಿದರು.

“ಒಂದು ವೇಳೆ ನಾನು ಅವರನ್ನು ಆ ರೀತಿ ಟ್ವೀಟ್ ಮಾಡಲು ಕೇಳಿದೆ ಎಂದು ಭಾವಿಸೋಣ … ಹಾಗಾದರೆ ಇಲ್ಲಿ ನನ್ನ ಮೇಲಿನ ಆರೋಪ ಏನು? ಭಾರತವನ್ನು ಬೆಂಬಲಿಸಿ ಟ್ವೀಟ್ ಮಾಡಲು ನನ್ನ ಪಕ್ಷವು ಅವರನ್ನು ಕೇಳಿದ್ದರೆ, ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಫಡ್ನವೀಸ್ ಘೋಷಿಸಿದ್ದರು, “ನಾವು ನಿಮ್ಮ ವಿಚಾರಣೆಗೆ ಹೆದರುವುದಿಲ್ಲ’ ಎಂದು ಗೃಹ ಸಚಿವ ದೇಶಮುಖ್‌ಗೆ ಸವಾಲು ಹಾಕಿದರು.

ಈ ದಾಳಿಗೆ ಗೃಹ ಸಚಿವರು ಉತ್ತರಿಸಿದ್ದು, “ನಾವು ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಿಸುತ್ತಿದ್ದೇವೆ. ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಿಸುತ್ತಿಲ್ಲ … ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ನಮ್ಮ ವಿಚಾರಣೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.

“ನೀವು ರಾಷ್ಟ್ರವನ್ನು ಬೆಂಬಲಿಸುವ ಜನರ ವಿರುದ್ಧ ವಿಚಾರಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಇದು ನಿಮ್ಮ ದೇಶಪ್ರೇಮವನ್ನು ತೋರಿಸುತ್ತದೆ’ ಎಂದು ಫಡ್ನವೀಸ್ ವ್ಯಂಗ್ಯ ಮಾಡಿದರು.

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, “ಕಾಂಗ್ರೆಸ್ ಸಚಿನ್ ಅಥವಾ ರೇಖಾ ಅವರನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ನಾವು ಅವರನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಇಂದು ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಸೆಲೆಬ್ರಿಟಿಗಳನ್ನು ವೈಯಕ್ತಿಕ ಲಾಭಕ್ಕಾಗಿ ಬಳಸುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ’ ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕಳೆದ ತಿಂಗಳ ಆರಂಭದಲ್ಲಿ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ ಹಲವಾರು ಬಾಲಿವುಡ್ ಮತ್ತು ಕ್ರಿಕೆಟ್ ಸೆಲೆಬ್ರಿಟಿಗಳು ಪಾಪ್ ತಾರೆ ರಿಹಾನ್ನಾ ಅವರ ರೈತರ ಪರ ಟ್ವೀಟ್ ವಿರುದ್ಧ ಟ್ವೀಟ್ ಮಾಡಿ ಸರ್ಕಾರವನ್ನು ಬೆಂಬಲಿಸಿದ್ದರು.

ಈ ಹಲವಾರು ಟ್ವೀಟ್‌ಗಳು ಒಂದಕ್ಕೊಂದು ಹೋಲುತ್ತಿದ್ದವು, ಇದು, ಅವುಗಳು ಕೇಂದ್ರದಿಂದ ರಚಿಸಲ್ಪಟ್ಟವು ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿತ್ತು ಮತ್ತು ಟ್ವೀಟ್ ಮಾಡಿದವರಲ್ಲಿ ಅನೇಕರು ಸರ್ಕಾರದ ‘ನಿರ್ದೇಶನದ’ ಮೇರೆಗೆ ಟ್ವೀಟ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಕೂಡ, ಕೇಂದ್ರವು ತೆಂಡೂಲ್ಕರ್ ಮತ್ತು ಮಂಗೇಶ್ಕರ್ ಅವರಂತಹವರನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕೆ ಮಾಡಿದ್ದರು.

ಗೃಹ ಸಚಿವ ದೇಶಮುಖ್ ಅವರು ಈ ಟ್ವೀಟ್‌ಗಳ ಹಿಂದಿನ ರಾಜಕೀಯದ ಕುರಿತು ತನಿಖೆಗೆ ಆದೇಶಿಸಿದ್ದರು. ‘ಬಿಜೆಪಿಯ ವಿರುದ್ಧ ಮಾತನಾಡಿದರೆ ರಾಜಕಾರಣಿಗಳಿಗೆ ಇ.ಡಿ ಅಥವಾ ಸಿಬಿಐ ತನಿಖೆಯ ಬೆದರಿಕೆ ಹಾಕುತ್ತಾರೆ… ಸೆಲೆಬ್ರಿಟಿಗಳ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ, ನಾವು ಖಂಡಿತವಾಗಿಯೂ ಆ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದರು.


ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...