Homeಮುಖಪುಟನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

ನಮ್ಮ ತನಿಖೆ ಸಚಿನ್, ಮಂಗೇಶ್ಕರ್ ವಿರುದ್ಧವಲ್ಲ, BJP ಐಟಿ ಸೆಲ್ ವಿರುದ್ಧ: ಮಹಾರಾಷ್ಟ್ರ ಗೃಹ ಸಚಿವ

- Advertisement -
- Advertisement -

ರೈತರ ಪ್ರತಿಭಟನೆಗೆ ಬಂದ ಬೆಂಬಲವನ್ನು ವಿಮರ್ಶಿಸಿ ಮತ್ತು ಕೇಂದ್ರ ಸರ್ಕಾರವನ್ನು ಬೆಂಬಲಿಸಿ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಮಾಡಿದ ಟ್ವೀಟ್‌ಗಳ ಸುತ್ತ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಮತ್ತು ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಮಂಗಳವಾರ ತೀಕ್ಷ್ಣವಾದ ಮಾತುಗಳ ಮೂಲಕ ಪರಸ್ಪರ ದಾಳಿ ನಡೆಸಿದ್ದಾರೆ.

ಅಲಿಗಢ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ ಶರ್ಜೀಲ್ ಉಸ್ಮಾನ್ ವಿಚಾರಣೆ ಮಾಡುವುದನ್ನು ಬಿಟ್ಟು ಇಬ್ಬರು ಭಾರತರತ್ನ ಪ್ರಶಸ್ತಿ ಪುರಸ್ಕೃತರ ವಿರುದ್ಧ ಆಡಳಿತಾರೂಢ ಶಿವಸೇನೆ ಹೆಚ್ಚು ಕಾಳಜಿ ವಹಿಸುತ್ತಿದೆ ಎಂದು ಫಡ್ನವೀಸ್ ಟೀಕಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಗೃಹಸಚಿವ ದೇಶಮುಖ್, “ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಣೆ ನಡೆಸುತ್ತಿಲ್ಲ, ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಣೆ ಮಾಡುತ್ತಿದ್ದೇವೆ” ಎಂದಿದ್ದಾರೆ,

ಇತ್ತೀಚಿನ ಎಲ್ಗಾರ್ ಪರಿಷತ್ ಸಮಾವೇಶದಲ್ಲಿ ಭಾಷಣ ಮಾಡುವಾಗ “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ’ ಭಾಷಣವನ್ನು ಶರ್ಜಿಲ್ ಉಸ್ಮಾನ್ ಮಾಡಿದ್ದಾರೆ ಎಂದು ಆರೋಪಿಸಿರುವ ಫಡ್ನವೀಸ್, ಮಹಾರಾಷ್ಟ್ರ ಸರ್ಕಾರಕ್ಕೆ ಉಸ್ಮಾನ್ ವಿರುದ್ಧ ಕ್ರಮ ಕೈಗೊಳ್ಳಲು ಧೈರ್ಯವಿಲ್ಲ ಎಂದು ಟೀಕಿಸಿದ್ದಾರೆ.

“ಉಸ್ಮಾನ್ ಹಿಂದೂಗಳನ್ನು ಅವಮಾನಿಸುತ್ತಾರೆ ಮತ್ತು ನೀವು ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಎಲ್ಗಾರ್ ಪರಿಷತ್ ಸದಸ್ಯರು ಸಹ ಅವರ ಹೇಳಿಕೆಗಳನ್ನು ಬೆಂಬಲಿಸುತ್ತಾರೆ, ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿಮಗೆ ಯಾವುದೇ ಧೈರ್ಯವಿಲ್ಲ. ಆದರೆ ನೀವು ಭಾರತರತ್ನ ಸಚಿನ್ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ವಿರುದ್ಧ ಕ್ರಮ ತೆಗೆದುಕೊಳ್ಳಲು ಆಸಕ್ತಿ ತೋರುತ್ತೀರಿ’ ಎಂದು ಫಡ್ನವೀಸ್ ಅಸೆಂಬ್ಲಿಯಲ್ಲಿ ಹೇಳಿದರು.

“ಒಂದು ವೇಳೆ ನಾನು ಅವರನ್ನು ಆ ರೀತಿ ಟ್ವೀಟ್ ಮಾಡಲು ಕೇಳಿದೆ ಎಂದು ಭಾವಿಸೋಣ … ಹಾಗಾದರೆ ಇಲ್ಲಿ ನನ್ನ ಮೇಲಿನ ಆರೋಪ ಏನು? ಭಾರತವನ್ನು ಬೆಂಬಲಿಸಿ ಟ್ವೀಟ್ ಮಾಡಲು ನನ್ನ ಪಕ್ಷವು ಅವರನ್ನು ಕೇಳಿದ್ದರೆ, ನಾವು ಅದರ ಬಗ್ಗೆ ಹೆಮ್ಮೆಪಡುತ್ತೇವೆ” ಎಂದು ಫಡ್ನವೀಸ್ ಘೋಷಿಸಿದ್ದರು, “ನಾವು ನಿಮ್ಮ ವಿಚಾರಣೆಗೆ ಹೆದರುವುದಿಲ್ಲ’ ಎಂದು ಗೃಹ ಸಚಿವ ದೇಶಮುಖ್‌ಗೆ ಸವಾಲು ಹಾಕಿದರು.

ಈ ದಾಳಿಗೆ ಗೃಹ ಸಚಿವರು ಉತ್ತರಿಸಿದ್ದು, “ನಾವು ಬಿಜೆಪಿ ಐಟಿ ಸೆಲ್ ವಿರುದ್ಧ ವಿಚಾರಿಸುತ್ತಿದ್ದೇವೆ. ನಾವು ಲತಾ ಮಂಗೇಶ್ಕರ್ ಅಥವಾ ಸಚಿನ್ ತೆಂಡೂಲ್ಕರ್ ವಿರುದ್ಧ ವಿಚಾರಿಸುತ್ತಿಲ್ಲ … ಆದರೆ ಬಿಜೆಪಿ ಐಟಿ ಸೆಲ್ ವಿರುದ್ಧ ನಮ್ಮ ವಿಚಾರಣೆ ಮುಂದುವರೆದಿದೆ’ ಎಂದು ತಿಳಿಸಿದ್ದಾರೆ.

“ನೀವು ರಾಷ್ಟ್ರವನ್ನು ಬೆಂಬಲಿಸುವ ಜನರ ವಿರುದ್ಧ ವಿಚಾರಿಸುತ್ತಿರುವುದಕ್ಕೆ ನಮಗೆ ಸಂತೋಷವಾಗಿದೆ. ಇದು ನಿಮ್ಮ ದೇಶಪ್ರೇಮವನ್ನು ತೋರಿಸುತ್ತದೆ’ ಎಂದು ಫಡ್ನವೀಸ್ ವ್ಯಂಗ್ಯ ಮಾಡಿದರು.

ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ, “ಕಾಂಗ್ರೆಸ್ ಸಚಿನ್ ಅಥವಾ ರೇಖಾ ಅವರನ್ನು ರಾಜ್ಯಸಭೆಗೆ ಕಳುಹಿಸಿದೆ. ಆದರೆ ನಾವು ಅವರನ್ನು ಎಂದಿಗೂ ರಾಜಕೀಯಕ್ಕೆ ಬಳಸಿಕೊಂಡಿಲ್ಲ. ಇಂದು ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಸೆಲೆಬ್ರಿಟಿಗಳನ್ನು ವೈಯಕ್ತಿಕ ಲಾಭಕ್ಕಾಗಿ ಬಳಸುತ್ತದೆ ಎಂಬುದನ್ನು ಒಪ್ಪಿಕೊಂಡಿದ್ದಾರೆ’ ಎಂದು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಕಳೆದ ತಿಂಗಳ ಆರಂಭದಲ್ಲಿ ತೆಂಡೂಲ್ಕರ್ ಮತ್ತು ಲತಾ ಮಂಗೇಶ್ಕರ್ ಸೇರಿದಂತೆ ಹಲವಾರು ಬಾಲಿವುಡ್ ಮತ್ತು ಕ್ರಿಕೆಟ್ ಸೆಲೆಬ್ರಿಟಿಗಳು ಪಾಪ್ ತಾರೆ ರಿಹಾನ್ನಾ ಅವರ ರೈತರ ಪರ ಟ್ವೀಟ್ ವಿರುದ್ಧ ಟ್ವೀಟ್ ಮಾಡಿ ಸರ್ಕಾರವನ್ನು ಬೆಂಬಲಿಸಿದ್ದರು.

ಈ ಹಲವಾರು ಟ್ವೀಟ್‌ಗಳು ಒಂದಕ್ಕೊಂದು ಹೋಲುತ್ತಿದ್ದವು, ಇದು, ಅವುಗಳು ಕೇಂದ್ರದಿಂದ ರಚಿಸಲ್ಪಟ್ಟವು ಎಂಬ ಊಹಾಪೋಹಗಳಿಗೆ ಉತ್ತೇಜನ ನೀಡಿತ್ತು ಮತ್ತು ಟ್ವೀಟ್ ಮಾಡಿದವರಲ್ಲಿ ಅನೇಕರು ಸರ್ಕಾರದ ‘ನಿರ್ದೇಶನದ’ ಮೇರೆಗೆ ಟ್ವೀಟ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಮಹಾರಾಷ್ಟ್ರ ನವನಿರ್ಮಾಣ್ ಸೇನಾ ಮುಖ್ಯಸ್ಥ ರಾಜ್ ಠಾಕ್ರೆ ಕೂಡ, ಕೇಂದ್ರವು ತೆಂಡೂಲ್ಕರ್ ಮತ್ತು ಮಂಗೇಶ್ಕರ್ ಅವರಂತಹವರನ್ನು ತನ್ನ ಲಾಭಕ್ಕೆ ಬಳಸಿಕೊಳ್ಳುತ್ತಿದೆ ಎಂದು ಟೀಕೆ ಮಾಡಿದ್ದರು.

ಗೃಹ ಸಚಿವ ದೇಶಮುಖ್ ಅವರು ಈ ಟ್ವೀಟ್‌ಗಳ ಹಿಂದಿನ ರಾಜಕೀಯದ ಕುರಿತು ತನಿಖೆಗೆ ಆದೇಶಿಸಿದ್ದರು. ‘ಬಿಜೆಪಿಯ ವಿರುದ್ಧ ಮಾತನಾಡಿದರೆ ರಾಜಕಾರಣಿಗಳಿಗೆ ಇ.ಡಿ ಅಥವಾ ಸಿಬಿಐ ತನಿಖೆಯ ಬೆದರಿಕೆ ಹಾಕುತ್ತಾರೆ… ಸೆಲೆಬ್ರಿಟಿಗಳ ಟ್ವೀಟ್‌ಗಳಿಗೆ ಸಂಬಂಧಿಸಿದಂತೆ, ನಾವು ಖಂಡಿತವಾಗಿಯೂ ಆ ಬಗ್ಗೆ ತನಿಖೆ ನಡೆಸುತ್ತೇವೆ” ಎಂದು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದರು.


ಇದನ್ನೂ ಓದಿ: ಅತ್ಯಾಚಾರ ಆರೋಪಿಗೆ ಸಂತ್ರಸ್ತೆಯನ್ನು ಮದುವೆಯಾಗಲು ಸಲಹೆ: ಸುಪ್ರೀಂ ನಡೆಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...