Homeಅಂತರಾಷ್ಟ್ರೀಯನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

- Advertisement -
- Advertisement -

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸರ್ಕಾರದ ನಗದು ವರ್ಗಾವಣೆ ಯೋಜನೆಯ ಅನುಭವವನ್ನು ಭಾರತದೊಂದಿಗೆ ಹಂಚಿಕೊಳ್ಳುವ ಪ್ರಸ್ತಾಪವನ್ನು ತಿರಸ್ಕರಿಸಿರುವ ಭಾರತವು, ನಮ್ಮ ಕೋವಿಡ್‌  ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ ಎಂದು ಹೇಳಿದೆ.

ಭಾರತದಲ್ಲಿ ಲಾಕ್‌ಡೌನ್‌ ಸಮಯದಲ್ಲಿ ಜನರು ಬಡತನದಲ್ಲಿ ಹೇಗೆ ಹೋರಾಡುತ್ತಿದ್ದಾರೆ ಎಂಬ ವರದಿಗಳ ನಂತರ ಇಮ್ರಾನ್‌ ಖಾನ್ ಸರಣಿ ಟ್ವೀಟ್‌ ಮಾಡಿದ್ದರು. ಪಾಕಿಸ್ತಾನ ತನ್ನ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಜಾರಿಗೆ ತಂದ ಅನುಭವವನ್ನು ಹಂಚಿಕೊಳ್ಳಲು ಮುಂದಾದ ಕೆಲವೇ ಗಂಟೆಗಳಲ್ಲಿ ಭಾರತದ ವಿದೇಶಾಂಗ ಸಚಿವಾಲಯ ಅದನ್ನು ನಿರಾಕರಿಸಿದೆ.

“ಪಾಕಿಸ್ತಾನವು ತನ್ನ ಸ್ವಂತ ಜನರಿಗೆ ಹಣ ನೀಡುವ ಬದಲು ದೇಶದ ಹೊರಗಿನ ಬ್ಯಾಂಕ್ ಖಾತೆಗಳಿಗೆ ನಗದು ವರ್ಗಾವಣೆ ಮಾಡುವಲ್ಲಿ ಹೆಸರುವಾಸಿಯಾಗಿದೆ. ಸ್ಪಷ್ಟವಾಗಿ ಇಮ್ರಾನ್ ಖಾನ್ ಅವರಿಗೆ ಹೊಸ ಸಲಹೆಗಾರರು ಮತ್ತು ಉತ್ತಮ ಮಾಹಿತಿಯ ಅಗತ್ಯವಿದೆ” ಎಂದು ಭಾರತೀಯ ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ ಆನ್‌ಲೈನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

“ಅವರ ಸಾಲದ ಸಮಸ್ಯೆ (ಜಿಡಿಪಿಯ ಸುಮಾರು 90 ಪ್ರತಿಶತ) ಮತ್ತು ಸಾಲ ಪುನರ್ರಚನೆಗಾಗಿ ಅವರು ಎಷ್ಟು ಒತ್ತಡ ಹೇರಿದ್ದಾರೆಂದು ನಮಗೆಲ್ಲರಿಗೂ ತಿಳಿದಿದೆ. ಭಾರತವು ಪಾಕಿಸ್ತಾನದ ವಾರ್ಷಿಕ ಜಿಡಿಪಿಗಿಂತ ಅತಿ ಹೆಚ್ಚಿನ ಉತ್ತೇಜಕ ಪ್ಯಾಕೇಜ್ ಘೋಷಿಸಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ದುಷ್ಪರಿಣಾಮವನ್ನು ಎದುರಿಸಲು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಪ್ರಮುಖ ಕ್ಷೇತ್ರಗಳಿಗೆ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಉತ್ತೇಜನ ಪ್ಯಾಕೇಜ್ ಘೋಷಿಸಿದ್ದರು.

ಬಡವರ ಮೇಲೆ ಕೋವಿಡ್ -19 ನ ಹೊಡೆತವನ್ನು ಎದುರಿಸಲು ತಮ್ಮ ಸರ್ಕಾರವು ಒಂಬತ್ತು ವಾರಗಳಲ್ಲಿ 12 ಸಾವಿರ ಕೋಟಿ ರೂಗಳನ್ನು ಒಂದು ಕೋಟಿಗೂ ಹೆಚ್ಚು ಕುಟುಂಬಗಳಿಗೆ “ಪಾರದರ್ಶಕ ರೀತಿಯಲ್ಲಿ” ಯಶಸ್ವಿಯಾಗಿ ವರ್ಗಾಯಿಸಿದ್ದೇವೆ ಎಂದು ಇಮ್ರಾನ್‌ ಖಾನ್ ಹೇಳಿದ್ದಾರೆ.

ಸಹಾಯವನ್ನು ನೀಡಲು ಮತ್ತು ನಮ್ಮ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಹಂಚಿಕೊಳ್ಳಲು ನಾನು ಸಿದ್ಧನಿದ್ದೇನೆ. ಅದರ ವ್ಯಾಪ್ತಿ ಮತ್ತು ಪಾರದರ್ಶಕತೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿದ್ದರು.


ಮತ್ತಷ್ಟು ಸುದ್ದಿಗಳು

ಕೊರೊನಾ ಕಲಿಸಿಕೊಟ್ಟ ಇನ್ನೂ ಒಂದ ಪಾಠ ಏನಪಾ ಅಂದರಾ……

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...