Homeಅಂತರಾಷ್ಟ್ರೀಯನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

- Advertisement -
- Advertisement -

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸರ್ಕಾರದ ನಗದು ವರ್ಗಾವಣೆ ಯೋಜನೆಯ ಅನುಭವವನ್ನು ಭಾರತದೊಂದಿಗೆ ಹಂಚಿಕೊಳ್ಳುವ ಪ್ರಸ್ತಾಪವನ್ನು ತಿರಸ್ಕರಿಸಿರುವ ಭಾರತವು, ನಮ್ಮ ಕೋವಿಡ್‌  ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ ಎಂದು ಹೇಳಿದೆ.

ಭಾರತದಲ್ಲಿ ಲಾಕ್‌ಡೌನ್‌ ಸಮಯದಲ್ಲಿ ಜನರು ಬಡತನದಲ್ಲಿ ಹೇಗೆ ಹೋರಾಡುತ್ತಿದ್ದಾರೆ ಎಂಬ ವರದಿಗಳ ನಂತರ ಇಮ್ರಾನ್‌ ಖಾನ್ ಸರಣಿ ಟ್ವೀಟ್‌ ಮಾಡಿದ್ದರು. ಪಾಕಿಸ್ತಾನ ತನ್ನ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಜಾರಿಗೆ ತಂದ ಅನುಭವವನ್ನು ಹಂಚಿಕೊಳ್ಳಲು ಮುಂದಾದ ಕೆಲವೇ ಗಂಟೆಗಳಲ್ಲಿ ಭಾರತದ ವಿದೇಶಾಂಗ ಸಚಿವಾಲಯ ಅದನ್ನು ನಿರಾಕರಿಸಿದೆ.

“ಪಾಕಿಸ್ತಾನವು ತನ್ನ ಸ್ವಂತ ಜನರಿಗೆ ಹಣ ನೀಡುವ ಬದಲು ದೇಶದ ಹೊರಗಿನ ಬ್ಯಾಂಕ್ ಖಾತೆಗಳಿಗೆ ನಗದು ವರ್ಗಾವಣೆ ಮಾಡುವಲ್ಲಿ ಹೆಸರುವಾಸಿಯಾಗಿದೆ. ಸ್ಪಷ್ಟವಾಗಿ ಇಮ್ರಾನ್ ಖಾನ್ ಅವರಿಗೆ ಹೊಸ ಸಲಹೆಗಾರರು ಮತ್ತು ಉತ್ತಮ ಮಾಹಿತಿಯ ಅಗತ್ಯವಿದೆ” ಎಂದು ಭಾರತೀಯ ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ ಆನ್‌ಲೈನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

“ಅವರ ಸಾಲದ ಸಮಸ್ಯೆ (ಜಿಡಿಪಿಯ ಸುಮಾರು 90 ಪ್ರತಿಶತ) ಮತ್ತು ಸಾಲ ಪುನರ್ರಚನೆಗಾಗಿ ಅವರು ಎಷ್ಟು ಒತ್ತಡ ಹೇರಿದ್ದಾರೆಂದು ನಮಗೆಲ್ಲರಿಗೂ ತಿಳಿದಿದೆ. ಭಾರತವು ಪಾಕಿಸ್ತಾನದ ವಾರ್ಷಿಕ ಜಿಡಿಪಿಗಿಂತ ಅತಿ ಹೆಚ್ಚಿನ ಉತ್ತೇಜಕ ಪ್ಯಾಕೇಜ್ ಘೋಷಿಸಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ದುಷ್ಪರಿಣಾಮವನ್ನು ಎದುರಿಸಲು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಪ್ರಮುಖ ಕ್ಷೇತ್ರಗಳಿಗೆ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಉತ್ತೇಜನ ಪ್ಯಾಕೇಜ್ ಘೋಷಿಸಿದ್ದರು.

ಬಡವರ ಮೇಲೆ ಕೋವಿಡ್ -19 ನ ಹೊಡೆತವನ್ನು ಎದುರಿಸಲು ತಮ್ಮ ಸರ್ಕಾರವು ಒಂಬತ್ತು ವಾರಗಳಲ್ಲಿ 12 ಸಾವಿರ ಕೋಟಿ ರೂಗಳನ್ನು ಒಂದು ಕೋಟಿಗೂ ಹೆಚ್ಚು ಕುಟುಂಬಗಳಿಗೆ “ಪಾರದರ್ಶಕ ರೀತಿಯಲ್ಲಿ” ಯಶಸ್ವಿಯಾಗಿ ವರ್ಗಾಯಿಸಿದ್ದೇವೆ ಎಂದು ಇಮ್ರಾನ್‌ ಖಾನ್ ಹೇಳಿದ್ದಾರೆ.

ಸಹಾಯವನ್ನು ನೀಡಲು ಮತ್ತು ನಮ್ಮ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಹಂಚಿಕೊಳ್ಳಲು ನಾನು ಸಿದ್ಧನಿದ್ದೇನೆ. ಅದರ ವ್ಯಾಪ್ತಿ ಮತ್ತು ಪಾರದರ್ಶಕತೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿದ್ದರು.


ಮತ್ತಷ್ಟು ಸುದ್ದಿಗಳು

ಕೊರೊನಾ ಕಲಿಸಿಕೊಟ್ಟ ಇನ್ನೂ ಒಂದ ಪಾಠ ಏನಪಾ ಅಂದರಾ……

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...