Homeಅಂತರಾಷ್ಟ್ರೀಯನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

- Advertisement -
- Advertisement -

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸರ್ಕಾರದ ನಗದು ವರ್ಗಾವಣೆ ಯೋಜನೆಯ ಅನುಭವವನ್ನು ಭಾರತದೊಂದಿಗೆ ಹಂಚಿಕೊಳ್ಳುವ ಪ್ರಸ್ತಾಪವನ್ನು ತಿರಸ್ಕರಿಸಿರುವ ಭಾರತವು, ನಮ್ಮ ಕೋವಿಡ್‌  ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ ಎಂದು ಹೇಳಿದೆ.

ಭಾರತದಲ್ಲಿ ಲಾಕ್‌ಡೌನ್‌ ಸಮಯದಲ್ಲಿ ಜನರು ಬಡತನದಲ್ಲಿ ಹೇಗೆ ಹೋರಾಡುತ್ತಿದ್ದಾರೆ ಎಂಬ ವರದಿಗಳ ನಂತರ ಇಮ್ರಾನ್‌ ಖಾನ್ ಸರಣಿ ಟ್ವೀಟ್‌ ಮಾಡಿದ್ದರು. ಪಾಕಿಸ್ತಾನ ತನ್ನ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಜಾರಿಗೆ ತಂದ ಅನುಭವವನ್ನು ಹಂಚಿಕೊಳ್ಳಲು ಮುಂದಾದ ಕೆಲವೇ ಗಂಟೆಗಳಲ್ಲಿ ಭಾರತದ ವಿದೇಶಾಂಗ ಸಚಿವಾಲಯ ಅದನ್ನು ನಿರಾಕರಿಸಿದೆ.

“ಪಾಕಿಸ್ತಾನವು ತನ್ನ ಸ್ವಂತ ಜನರಿಗೆ ಹಣ ನೀಡುವ ಬದಲು ದೇಶದ ಹೊರಗಿನ ಬ್ಯಾಂಕ್ ಖಾತೆಗಳಿಗೆ ನಗದು ವರ್ಗಾವಣೆ ಮಾಡುವಲ್ಲಿ ಹೆಸರುವಾಸಿಯಾಗಿದೆ. ಸ್ಪಷ್ಟವಾಗಿ ಇಮ್ರಾನ್ ಖಾನ್ ಅವರಿಗೆ ಹೊಸ ಸಲಹೆಗಾರರು ಮತ್ತು ಉತ್ತಮ ಮಾಹಿತಿಯ ಅಗತ್ಯವಿದೆ” ಎಂದು ಭಾರತೀಯ ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ ಆನ್‌ಲೈನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

“ಅವರ ಸಾಲದ ಸಮಸ್ಯೆ (ಜಿಡಿಪಿಯ ಸುಮಾರು 90 ಪ್ರತಿಶತ) ಮತ್ತು ಸಾಲ ಪುನರ್ರಚನೆಗಾಗಿ ಅವರು ಎಷ್ಟು ಒತ್ತಡ ಹೇರಿದ್ದಾರೆಂದು ನಮಗೆಲ್ಲರಿಗೂ ತಿಳಿದಿದೆ. ಭಾರತವು ಪಾಕಿಸ್ತಾನದ ವಾರ್ಷಿಕ ಜಿಡಿಪಿಗಿಂತ ಅತಿ ಹೆಚ್ಚಿನ ಉತ್ತೇಜಕ ಪ್ಯಾಕೇಜ್ ಘೋಷಿಸಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ದುಷ್ಪರಿಣಾಮವನ್ನು ಎದುರಿಸಲು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಪ್ರಮುಖ ಕ್ಷೇತ್ರಗಳಿಗೆ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಉತ್ತೇಜನ ಪ್ಯಾಕೇಜ್ ಘೋಷಿಸಿದ್ದರು.

ಬಡವರ ಮೇಲೆ ಕೋವಿಡ್ -19 ನ ಹೊಡೆತವನ್ನು ಎದುರಿಸಲು ತಮ್ಮ ಸರ್ಕಾರವು ಒಂಬತ್ತು ವಾರಗಳಲ್ಲಿ 12 ಸಾವಿರ ಕೋಟಿ ರೂಗಳನ್ನು ಒಂದು ಕೋಟಿಗೂ ಹೆಚ್ಚು ಕುಟುಂಬಗಳಿಗೆ “ಪಾರದರ್ಶಕ ರೀತಿಯಲ್ಲಿ” ಯಶಸ್ವಿಯಾಗಿ ವರ್ಗಾಯಿಸಿದ್ದೇವೆ ಎಂದು ಇಮ್ರಾನ್‌ ಖಾನ್ ಹೇಳಿದ್ದಾರೆ.

ಸಹಾಯವನ್ನು ನೀಡಲು ಮತ್ತು ನಮ್ಮ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಹಂಚಿಕೊಳ್ಳಲು ನಾನು ಸಿದ್ಧನಿದ್ದೇನೆ. ಅದರ ವ್ಯಾಪ್ತಿ ಮತ್ತು ಪಾರದರ್ಶಕತೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿದ್ದರು.


ಮತ್ತಷ್ಟು ಸುದ್ದಿಗಳು

ಕೊರೊನಾ ಕಲಿಸಿಕೊಟ್ಟ ಇನ್ನೂ ಒಂದ ಪಾಠ ಏನಪಾ ಅಂದರಾ……

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...