Homeಅಂತರಾಷ್ಟ್ರೀಯನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

ನಮ್ಮ ಕೋವಿಡ್‌ ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ; ಪಾಕ್‌ ಸಹಾಯ ತಿರಸ್ಕರಿಸಿದ ಭಾರತ

- Advertisement -
- Advertisement -

ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ತಮ್ಮ ಸರ್ಕಾರದ ನಗದು ವರ್ಗಾವಣೆ ಯೋಜನೆಯ ಅನುಭವವನ್ನು ಭಾರತದೊಂದಿಗೆ ಹಂಚಿಕೊಳ್ಳುವ ಪ್ರಸ್ತಾಪವನ್ನು ತಿರಸ್ಕರಿಸಿರುವ ಭಾರತವು, ನಮ್ಮ ಕೋವಿಡ್‌  ಪ್ಯಾಕೇಜ್‌ ನಿಮ್ಮ ಜಿಡಿಪಿಗಿಂತ ಡೊಡ್ಡದಿದೆ ಎಂದು ಹೇಳಿದೆ.

ಭಾರತದಲ್ಲಿ ಲಾಕ್‌ಡೌನ್‌ ಸಮಯದಲ್ಲಿ ಜನರು ಬಡತನದಲ್ಲಿ ಹೇಗೆ ಹೋರಾಡುತ್ತಿದ್ದಾರೆ ಎಂಬ ವರದಿಗಳ ನಂತರ ಇಮ್ರಾನ್‌ ಖಾನ್ ಸರಣಿ ಟ್ವೀಟ್‌ ಮಾಡಿದ್ದರು. ಪಾಕಿಸ್ತಾನ ತನ್ನ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಜಾರಿಗೆ ತಂದ ಅನುಭವವನ್ನು ಹಂಚಿಕೊಳ್ಳಲು ಮುಂದಾದ ಕೆಲವೇ ಗಂಟೆಗಳಲ್ಲಿ ಭಾರತದ ವಿದೇಶಾಂಗ ಸಚಿವಾಲಯ ಅದನ್ನು ನಿರಾಕರಿಸಿದೆ.

“ಪಾಕಿಸ್ತಾನವು ತನ್ನ ಸ್ವಂತ ಜನರಿಗೆ ಹಣ ನೀಡುವ ಬದಲು ದೇಶದ ಹೊರಗಿನ ಬ್ಯಾಂಕ್ ಖಾತೆಗಳಿಗೆ ನಗದು ವರ್ಗಾವಣೆ ಮಾಡುವಲ್ಲಿ ಹೆಸರುವಾಸಿಯಾಗಿದೆ. ಸ್ಪಷ್ಟವಾಗಿ ಇಮ್ರಾನ್ ಖಾನ್ ಅವರಿಗೆ ಹೊಸ ಸಲಹೆಗಾರರು ಮತ್ತು ಉತ್ತಮ ಮಾಹಿತಿಯ ಅಗತ್ಯವಿದೆ” ಎಂದು ಭಾರತೀಯ ಎಂಇಎ ವಕ್ತಾರ ಅನುರಾಗ್ ಶ್ರೀವಾಸ್ತವ ಆನ್‌ಲೈನ್ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

“ಅವರ ಸಾಲದ ಸಮಸ್ಯೆ (ಜಿಡಿಪಿಯ ಸುಮಾರು 90 ಪ್ರತಿಶತ) ಮತ್ತು ಸಾಲ ಪುನರ್ರಚನೆಗಾಗಿ ಅವರು ಎಷ್ಟು ಒತ್ತಡ ಹೇರಿದ್ದಾರೆಂದು ನಮಗೆಲ್ಲರಿಗೂ ತಿಳಿದಿದೆ. ಭಾರತವು ಪಾಕಿಸ್ತಾನದ ವಾರ್ಷಿಕ ಜಿಡಿಪಿಗಿಂತ ಅತಿ ಹೆಚ್ಚಿನ ಉತ್ತೇಜಕ ಪ್ಯಾಕೇಜ್ ಘೋಷಿಸಿದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳುವುದು ಉತ್ತಮ ಎಂದು ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ದುಷ್ಪರಿಣಾಮವನ್ನು ಎದುರಿಸಲು ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಪ್ರಮುಖ ಕ್ಷೇತ್ರಗಳಿಗೆ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಉತ್ತೇಜನ ಪ್ಯಾಕೇಜ್ ಘೋಷಿಸಿದ್ದರು.

ಬಡವರ ಮೇಲೆ ಕೋವಿಡ್ -19 ನ ಹೊಡೆತವನ್ನು ಎದುರಿಸಲು ತಮ್ಮ ಸರ್ಕಾರವು ಒಂಬತ್ತು ವಾರಗಳಲ್ಲಿ 12 ಸಾವಿರ ಕೋಟಿ ರೂಗಳನ್ನು ಒಂದು ಕೋಟಿಗೂ ಹೆಚ್ಚು ಕುಟುಂಬಗಳಿಗೆ “ಪಾರದರ್ಶಕ ರೀತಿಯಲ್ಲಿ” ಯಶಸ್ವಿಯಾಗಿ ವರ್ಗಾಯಿಸಿದ್ದೇವೆ ಎಂದು ಇಮ್ರಾನ್‌ ಖಾನ್ ಹೇಳಿದ್ದಾರೆ.

ಸಹಾಯವನ್ನು ನೀಡಲು ಮತ್ತು ನಮ್ಮ ಯಶಸ್ವಿ ನಗದು ವರ್ಗಾವಣೆ ಕಾರ್ಯಕ್ರಮವನ್ನು ಹಂಚಿಕೊಳ್ಳಲು ನಾನು ಸಿದ್ಧನಿದ್ದೇನೆ. ಅದರ ವ್ಯಾಪ್ತಿ ಮತ್ತು ಪಾರದರ್ಶಕತೆಗಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘಿಸಲಾಗಿದೆ ಎಂದು ಪಾಕಿಸ್ತಾನ ಪ್ರಧಾನಿ ಹೇಳಿದ್ದರು.


ಮತ್ತಷ್ಟು ಸುದ್ದಿಗಳು

ಕೊರೊನಾ ಕಲಿಸಿಕೊಟ್ಟ ಇನ್ನೂ ಒಂದ ಪಾಠ ಏನಪಾ ಅಂದರಾ……

ಉತ್ತರಪ್ರದೇಶ: ತುತ್ತು ಅನ್ನಕ್ಕಾಗಿ ತಾಯಿ-ಹೆಂಡತಿಯ ಮಾಂಗಲ್ಯ ಮಾರಿದ ವಲಸೆ ಕಾರ್ಮಿಕ; ಇದು ಇವನೊಬ್ಬನ ಕಥೆಯಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...